Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾ ನಗರ ಪಾಲಿಕೆ ಸೂಪರ್ ಸೀಡ್ ಗೆ ಇಬ್ರಾಹಿಂ ಬಾಬು ಆಗ್ರಹ

ಬಳ್ಳಾರಿ, ಫೆ.02: ಇಲ್ಲಿನ ಮಹಾನಗರ ಪಾಲಿಕೆ ಕಳೆದ 9 ತಿಂಗಳಿಂದ ಸಾಮಾನ್ಯ ಸಭೆಯನ್ನೇ ನಡೆಸಿಲ್ಲ, ತನ್ನ ಕರ್ತವ್ಯವನ್ನು ಮರೆತ ಈ ಪಾಲಿಕೆಯನ್ನು ಸರ್ಕಾರ ಕೂಡಲೇ ಸೂಪರ್ ಸೀಡ್ ಮಾಡಬೇಕು ಎಂದು ಪಾಲಿಕೆ ಸದಸ್ಯ ಸಿ.ಇಬ್ರಾಹಿಂ ಬಾಬು ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು. ಯಾವುದೇ ಪಾಲಿಕೆ 6 ತಿಂಗಳಲ್ಲಿ ಸಾಮಾನ್ಯ ಸಭೆ ನಡೆಸದೇ ಹೋದರೆ, ಅಂತಹ ಪಾಲಿಕೆಯನ್ನು ಸೂಪರ್ ಸೀಡ್ ಮಾಡಲು ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ-1976ರ ಕಾಯ್ದೆ ಅಡಿ ಸರ್ಕಾರಕ್ಕೆ ಅಧಿಕಾರವಿದೆ. ಜನರ ಹಿತ ಮರೆತಿರುವ ಪಾಲಿಕೆಯ ಆಡಳಿತವನ್ನು ಸರ್ಕಾರ ಸೂಪರ್ ಸೀಡ್ ಮಾಡಿ, ಹೊಸ ಆಡಳಿತಕ್ಕೆ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಬೇಕು.

2025-26ರ ಬಜೆಟ್ ಮಂಡನೆ ವೇಳೆ ನಡೆದ ಸಾಮಾನ್ಯ ಸಭೆಯೇ ಕೊನೆ. ಅಲ್ಲಿಂದ ಇಲ್ಲಿಯ ವರೆಗೆ ಯಾವುದೇ ಸಾಮಾನ್ಯ ಸಭೆಗಳು ಪಾಲಿಕೆಯಲ್ಲಿ ನಡೆದಿಲ್ಲ. ಹೀಗಾಗಿ ಇದು ಕೇವಲ ಅಧಿಕಾರಿಗಳ ಆಡಳಿತವಿರುವ ಪಾಲಿಕೆಯೋ ಅಥವಾ ಚುನಾಯಿತ ಜನಪ್ರತಿನಿಧಿಗಳು ಇದ್ದಾರೋ ಇಲ್ಲವೋ ಎಂಬ ಪ್ರಶ್ನೆ ಎದುರಾಗಿದೆ.

ಸಾಮಾನ್ಯ ಸಭೆ ನಡೆಸದೇ, ನಗರದ ಸಮಸ್ಯೆಗಳ ಕುರಿತು ಚರ್ಚೆ ಮಾಡದೇ, ಪಾಲಿಕೆಯನ್ನು ಹೀಗೆ ನಡೆಸಿದರೆ ಚುನಾಯಿತ ಕಾರ್ಪೊರೇಟರ್ಗಳು ತಮ್ಮ ವಾರ್ಡ್ಗಳ ನಾಗರಿಕರ ಸಮಸ್ಯೆಗಳ ಪರಿಹಾರಕ್ಕೆ ಏನು ಉತ್ತರ ನೀಡಬೇಕು ಎಂಬುದೇ ತಿಳಿಯದಾಗಿದೆ.

ಜನರಿಗೆ ಅನುಕೂಲವಾಗಲಿ ಎಂದೇ ಸ್ಥಳೀಯ ಸಂಸ್ಥೆಗಳನ್ನು ಸಂವಿಧಾನದ ಆಶಯದಂತೆ ರಚಿಸಿದೆ. ಆದರೆ ಬಳ್ಳಾರಿಯಲ್ಲಿ ಸಂವಿಧಾನದ ಆಶಯಗಳಿಗೇ ಧಕ್ಕೆಯಾಗಿದೆ. ಚುನಾಯಿತ ಪ್ರತಿನಿಧಿಗಳಿದ್ದು, ಜನರ ಸಮಸ್ಯೆ ಚರ್ಚಿಸಲು ಒಂದು ಕಡೆ ಸಭೆ ಸೇರಿಸಲೂ ಆಗದ ಈ ಪರಿಸ್ಥಿತಿಯು ಜನ ವಿರೋಧಿ, ಅಷ್ಟೇ ಅಲ್ಲ, ಇದು ಪ್ರಜಾಪ್ರಭುತ್ವದ ಕಗ್ಗೋಲೆಯೂ ಹೌದು,

ಬಳ್ಳಾರಿ ಮಹಾನಗರ ಪಾಲಿಕೆ ಜನರ ಬಗ್ಗೆ ಇಷ್ಟು ನಿರ್ಲಕ್ಷ್ಯ ತಾಳಲು, ಬಳ್ಳಾರಿ ನಗರದ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರ ನಿರ್ಲಕ್ಷ್ಯವೂ ಎದ್ದು ಕಾಣುತ್ತಿದೆ.

ಬಳ್ಳಾರಿ ನಗರ ಪಾಲಿಕೆಯ ಈಗಿನ ಸ್ಥಿತಿಯನ್ನು ಗಮನಿಸುತ್ತಿದ್ದರೆ 'ಮನೆಯೊಳಗೆ ಮನೆಯೊಡೆಯನಿದ್ದಾನೋ ಇಲ್ಲವೋ' ಎಂಬ ಬಸವಣ್ಣನರವರ ವಚನವೊಂದು ನೆನಪಾಗುತ್ತಿದೆ. ಬಳ್ಳಾರಿ ಮಹಾನಗರ ಪಾಲಿಕೆಯನ್ನು ಹೇಳುವವರು ಕೇಳುವವರು ಇಲ್ಲ ಎಂಬಂತಾಗಿದೆ.

ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ಒಲಿದಿದ್ದೇ ಬಳ್ಳಾರಿಯ ಕಾರಣಕ್ಕೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಅವರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ, ನಗರಾಭಿವೃದ್ಧಿ ಸಚಿವರಿಗೆ ಇಲ್ಲಿನ ಪಾಲಿಕೆ ಮತ್ತು ಆಡಳಿತದ ರೀತಿ ತಿಳಿಯದೇ ಇರುವುದು ಅಚ್ಚರಿಯ ಸಂಗತಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೂಡಲೇ ಇಲ್ಲಿನ ಆಡಳಿತಕ್ಕೆ ಚಾಟಿ ಬೀಸಿ ಸರಿದಾರಿಗೆ ತರಬೇಕು. ಇಲ್ಲವೇ ಸೂಪರ್ ಸೀಡ್ ಮಾಡಿ ಹೊಸ ಆಡಳಿತ ಬರುವಂತೆ ಮಾಡಬೇಕು ಎಂದಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ