Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಗದ್ದುಗೆ ಏರಿದರೆ ಪಿತ್ರಾರ್ಜಿತ ಆಸ್ತಿಗೂ ತೆರಿಗೆ ನಿಶ್ಚಿತ: ಮೋದಿ ವಾಗ್ದಾಳಿ

ಅಂಬಿಕಾಪುರ,24: ಕಾಂಗ್ರೆಸ್‌ನ ಅಪಾಯಕಾರಿ ಉದ್ದೇಶಗಳು ಒಂದರ ನಂತರ ಒಂದರಂತೆ ಬೆಳಕಿಗೆ ಬರುತ್ತಿವೆ. ಈಗ ಕಷ್ಟಪಟ್ಟು ಸಂಪಾದಿಸುವ ನಿಮ್ಮ ಮಕ್ಕಳ ಮೇಲೂ ಪಿತ್ರಾರ್ಜಿತ ತೆರಿಗೆ ಹೇರುವುದಾಗಿ ಆ ಪಕ್ಷ ಹೇಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ಮಾ ಮಹಾಮಾಯಿ ಕಿ ಜೈ ಘೋಷಣೆಯೊಂದಿಗೆ ಇಂದು ಪ್ರಧಾನಿ ಮೋದಿ ಛತ್ತೀಸ್‌ಗಢದ ಸರ್ಗುಜಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದರು.

ಭಾರತ ಸ್ವಾವಲಂಬಿಯಾದರೆ ಕೆಲವು ಶಕ್ತಿಗಳ ಆಟಗಳು ಬಂದ್​ ಆಗುತ್ತವೆ. ಬಿಜೆಪಿ ಭಯೋತ್ಪಾದನೆ ಮತ್ತು ನಕ್ಸಲ್ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಹಿಂಸಾಚಾರ ಹರಡುವವರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದು ದೂರಿದರು.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಛಾಪು ಇದೆ. ಸಂವಿಧಾನ ರಚನೆಯಾಗುತ್ತಿರುವಾಗ ದೇಶದ ಪ್ರಜ್ಞಾವಂತರು ಒಟ್ಟಾಗಿ ಸೇರಿ ಭಾರತದಲ್ಲಿ ಧರ್ಮ ಆಧಾರದ ಮೇಲೆ ಮೀಸಲಾತಿ ಬೇಡ. ದಲಿತರು, ಗಿರಿಜನರ ಹೆಸರಲ್ಲಿ ಮೀಸಲಾತಿ ನೀಡುವುದಾಗಿ ತೀರ್ಮಾನಿಸಿದ್ದರು. ಆದರೆ ವೋಟ್ ಬ್ಯಾಂಕ್ ಹಸಿವಿನ ಕಾಂಗ್ರೆಸ್ ಇದಕ್ಕೆ ಕ್ಯಾರೇ ಎನ್ನಲಿಲ್ಲ. ಸಂವಿಧಾನ, ಬಾಬಾ ಸಾಹೇಬರ ಮಾತುಗಳ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ವರ್ಷಗಳ ಹಿಂದೆಯೇ ಆಂಧ್ರಪ್ರದೇಶದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಕಾಂಗ್ರೆಸ್ ಯೋಜಿಸಿತ್ತು ಎಂದು ಆರೋಪಿಸಿದರು.

2009ರ ಪ್ರಣಾಳಿಕೆಯಲ್ಲಿ ಧರ್ಮದ ಹೆಸರಿನಲ್ಲಿ ಮೀಸಲಾತಿ ನೀಡುವುದಾಗಿ ಕಾಂಗ್ರೆಸ್‌ ಸ್ಪಷ್ಟವಾಗಿ ಹೇಳಿತ್ತು. ಕರ್ನಾಟಕದಲ್ಲಿಯೂ ಕಾಂಗ್ರೆಸ್‌ ಧರ್ಮದ ಹೆಸರಿನಲ್ಲಿ ಮೀಸಲಾತಿ ಜಾರಿಗೆ ತಂದಿತ್ತು. ಬಿಜೆಪಿ ಸರಕಾರ ಬಂದಾಗ ಕಾಂಗ್ರೆಸ್‌ ನಿರ್ಧಾರವನ್ನು ಬುಡಮೇಲು ಮಾಡಿತು ಎಂದು ತಿಳಿಸಿದರು.

ಕಾಂಗ್ರೆಸ್ ಎಲ್ಲಾ ಮುಸ್ಲಿಂ ಜಾತಿಗಳನ್ನು ಒಬಿಸಿ ಕೋಟಾದಲ್ಲಿ ಇರಿಸಿದೆ. ಈ ಮೂಲಕ ಸಾಮಾಜಿಕ ನ್ಯಾಯವನ್ನು ಅವಮಾನಿಸಿದೆ. ಇಡೀ ದೇಶದಲ್ಲಿ ಕರ್ನಾಟಕದ ಮಾದರಿಯನ್ನು ಜಾರಿಗೆ ತರಲು ಕಾಂಗ್ರೆಸ್ ಬಯಸಿದೆ ಎಂದರು.

ಜೂನ್ 4ರ ನಂತರ ಛತ್ತೀಸ್‌ಗಢದ ಪ್ರತಿ ಕುಟುಂಬದ ವೃದ್ಧ ಪೋಷಕರಿಗೆ ಉಚಿತ ಚಿಕಿತ್ಸೆ ಸಿಗಲಿದೆ. ಸರ್ಗುಜದ 1 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಕಿಸಾನ್ ನಿಧಿಯ 200 ಕೋಟಿ ರೂಪಾಯಿ ಜಮಾ ಮಾಡಲಾಗಿದೆ. ಮುಂಬರುವ 5 ವರ್ಷಗಳಲ್ಲಿ ಬಹಳಷ್ಟು ಮಾಡಬೇಕಾಗಿದೆ. ಸರ್ಗುಜ ಅಂದರೆ 'ಸ್ವರ್ಗದ ಮಗಳು' ಎಂದರ್ಥ. ಈ ಪ್ರದೇಶವನ್ನು ಅಭಿವೃದ್ಧಿ ಮಾಡಬೇಕಿದೆ. ಆದ್ದರಿಂದ ಕಮಲ ಪ್ರತಿಯೊಂದರಲ್ಲೂ ಅರಳಬೇಕು. ನಿಮ್ಮ ಸೇವಕನಿಗೆ ಆಶೀರ್ವಾದ ಮಾಡಿ ಎಂದು ಮೋದಿ ಮನವಿ ಮಾಡಿದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ