Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಗದ್ದುಗೆ ಏರಿದರೆ ಪಿತ್ರಾರ್ಜಿತ ಆಸ್ತಿಗೂ ತೆರಿಗೆ ನಿಶ್ಚಿತ: ಮೋದಿ ವಾಗ್ದಾಳಿ

ಅಂಬಿಕಾಪುರ,24: ಕಾಂಗ್ರೆಸ್‌ನ ಅಪಾಯಕಾರಿ ಉದ್ದೇಶಗಳು ಒಂದರ ನಂತರ ಒಂದರಂತೆ ಬೆಳಕಿಗೆ ಬರುತ್ತಿವೆ. ಈಗ ಕಷ್ಟಪಟ್ಟು ಸಂಪಾದಿಸುವ ನಿಮ್ಮ ಮಕ್ಕಳ ಮೇಲೂ ಪಿತ್ರಾರ್ಜಿತ ತೆರಿಗೆ ಹೇರುವುದಾಗಿ ಆ ಪಕ್ಷ ಹೇಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ಮಾ ಮಹಾಮಾಯಿ ಕಿ ಜೈ ಘೋಷಣೆಯೊಂದಿಗೆ ಇಂದು ಪ್ರಧಾನಿ ಮೋದಿ ಛತ್ತೀಸ್‌ಗಢದ ಸರ್ಗುಜಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದರು.

ಭಾರತ ಸ್ವಾವಲಂಬಿಯಾದರೆ ಕೆಲವು ಶಕ್ತಿಗಳ ಆಟಗಳು ಬಂದ್​ ಆಗುತ್ತವೆ. ಬಿಜೆಪಿ ಭಯೋತ್ಪಾದನೆ ಮತ್ತು ನಕ್ಸಲ್ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಹಿಂಸಾಚಾರ ಹರಡುವವರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದು ದೂರಿದರು.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಛಾಪು ಇದೆ. ಸಂವಿಧಾನ ರಚನೆಯಾಗುತ್ತಿರುವಾಗ ದೇಶದ ಪ್ರಜ್ಞಾವಂತರು ಒಟ್ಟಾಗಿ ಸೇರಿ ಭಾರತದಲ್ಲಿ ಧರ್ಮ ಆಧಾರದ ಮೇಲೆ ಮೀಸಲಾತಿ ಬೇಡ. ದಲಿತರು, ಗಿರಿಜನರ ಹೆಸರಲ್ಲಿ ಮೀಸಲಾತಿ ನೀಡುವುದಾಗಿ ತೀರ್ಮಾನಿಸಿದ್ದರು. ಆದರೆ ವೋಟ್ ಬ್ಯಾಂಕ್ ಹಸಿವಿನ ಕಾಂಗ್ರೆಸ್ ಇದಕ್ಕೆ ಕ್ಯಾರೇ ಎನ್ನಲಿಲ್ಲ. ಸಂವಿಧಾನ, ಬಾಬಾ ಸಾಹೇಬರ ಮಾತುಗಳ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ವರ್ಷಗಳ ಹಿಂದೆಯೇ ಆಂಧ್ರಪ್ರದೇಶದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಕಾಂಗ್ರೆಸ್ ಯೋಜಿಸಿತ್ತು ಎಂದು ಆರೋಪಿಸಿದರು.

2009ರ ಪ್ರಣಾಳಿಕೆಯಲ್ಲಿ ಧರ್ಮದ ಹೆಸರಿನಲ್ಲಿ ಮೀಸಲಾತಿ ನೀಡುವುದಾಗಿ ಕಾಂಗ್ರೆಸ್‌ ಸ್ಪಷ್ಟವಾಗಿ ಹೇಳಿತ್ತು. ಕರ್ನಾಟಕದಲ್ಲಿಯೂ ಕಾಂಗ್ರೆಸ್‌ ಧರ್ಮದ ಹೆಸರಿನಲ್ಲಿ ಮೀಸಲಾತಿ ಜಾರಿಗೆ ತಂದಿತ್ತು. ಬಿಜೆಪಿ ಸರಕಾರ ಬಂದಾಗ ಕಾಂಗ್ರೆಸ್‌ ನಿರ್ಧಾರವನ್ನು ಬುಡಮೇಲು ಮಾಡಿತು ಎಂದು ತಿಳಿಸಿದರು.

ಕಾಂಗ್ರೆಸ್ ಎಲ್ಲಾ ಮುಸ್ಲಿಂ ಜಾತಿಗಳನ್ನು ಒಬಿಸಿ ಕೋಟಾದಲ್ಲಿ ಇರಿಸಿದೆ. ಈ ಮೂಲಕ ಸಾಮಾಜಿಕ ನ್ಯಾಯವನ್ನು ಅವಮಾನಿಸಿದೆ. ಇಡೀ ದೇಶದಲ್ಲಿ ಕರ್ನಾಟಕದ ಮಾದರಿಯನ್ನು ಜಾರಿಗೆ ತರಲು ಕಾಂಗ್ರೆಸ್ ಬಯಸಿದೆ ಎಂದರು.

ಜೂನ್ 4ರ ನಂತರ ಛತ್ತೀಸ್‌ಗಢದ ಪ್ರತಿ ಕುಟುಂಬದ ವೃದ್ಧ ಪೋಷಕರಿಗೆ ಉಚಿತ ಚಿಕಿತ್ಸೆ ಸಿಗಲಿದೆ. ಸರ್ಗುಜದ 1 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಕಿಸಾನ್ ನಿಧಿಯ 200 ಕೋಟಿ ರೂಪಾಯಿ ಜಮಾ ಮಾಡಲಾಗಿದೆ. ಮುಂಬರುವ 5 ವರ್ಷಗಳಲ್ಲಿ ಬಹಳಷ್ಟು ಮಾಡಬೇಕಾಗಿದೆ. ಸರ್ಗುಜ ಅಂದರೆ 'ಸ್ವರ್ಗದ ಮಗಳು' ಎಂದರ್ಥ. ಈ ಪ್ರದೇಶವನ್ನು ಅಭಿವೃದ್ಧಿ ಮಾಡಬೇಕಿದೆ. ಆದ್ದರಿಂದ ಕಮಲ ಪ್ರತಿಯೊಂದರಲ್ಲೂ ಅರಳಬೇಕು. ನಿಮ್ಮ ಸೇವಕನಿಗೆ ಆಶೀರ್ವಾದ ಮಾಡಿ ಎಂದು ಮೋದಿ ಮನವಿ ಮಾಡಿದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ