Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಾಪ್‌ ಸಿಂಹ್‌ ಮೊಬೈಲ್‌ ತನಿಖೆಗೊಳಪಡಿಸಿದರೆ ಜೈಲು ಗ್ಯಾರಂಟಿ: ಎಂ.ಲಕ್ಷ್ಮಣ

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಮೊಬೈಲ್ ಫೋನ್‌ನಲ್ಲಿ ಸಂಗ್ರಹವಾಗಿರುವ ಫೋಟೋಗಳು ಮತ್ತು ವೀಡಿಯೊಗಳ ಬಗ್ಗೆ ತನಿಖೆ ನಡೆಸಿದರೆ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಂತೆ ಅವರಿಗೂ ಜೈಲು ಶಿಕ್ಷೆಯಾಗಲಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023 ರಲ್ಲಿ ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆ ಬಳಿಕ ಪ್ರತಾಪ್ ಸಿಂಹ ಅವರ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ವೇಳೆ ಪ್ರತಾಪ್ ಸಿಂಹ ಮೊಬೈಲ್‌ನಲ್ಲಿ ನಗ್ನ ಚಿತ್ರಗಳು, ನಗ್ನ ವೀಡಿಯೋಗಳು ಕಂಡು ಬಂದಿದ್ದವು. ಇದನ್ನು ನೋಡಿದ ಅಮಿತ್ ಶಾ ಅವರೇ ದಂಗಾಗಿ ಹೋಗಿದ್ದಾರೆ. ಈ ಬಗ್ಗೆ ನನ್ನ ಬಳಿ ಆಧಾರಗಳಿವೆ ಎಂದು ಹೇಳಿದರು.

ಪ್ರಜ್ವಲ್ ರೇವಣ್ಣ ರೀತಿಯಲ್ಲಿಯೇ ಪ್ರತಾಪ್ ಸಿಂಹ ಅವರ ವೀಡಿಯೋಗಳೂ ಇವೆ. ಅಂತಹ ವಿಡಿಯೋ ಇರುವುದಕ್ಕೆ ಗೃಹ ಸಚಿವರು ಪ್ರತಾಪ್ ಸಿಂಹ ಮೊಬೈಲ್ ಸೀಝ್‌ ಮಾಡಿಸಿದರು. ಪ್ರತಾಪ್ ಸಿಂಹ ಅಶ್ಲೀಲ ವಿಡಿಯೋಗಳು ನನ್ನ ಮೊಬೈಲ್‌ನಲ್ಲೇ ಇವೆ, ಮೊಬೈಲ್‌ನಲ್ಲಿರುವ ವಿಡಿಯೋಗಳನ್ನು ನೋಡಿದ ನಂತರವೇ ಬಿಜೆಪಿ ನಾಯಕರು ಪ್ರತಾಪ್ ಸಿಂಹಗೆ ಲೋಕಸಭಾ ಟಿಕೆಟ್ ನೀಡಬಾರದು ಎಂಬ ನಿರ್ಧಾರ ಕೈಗೊಂಡರು. ಇಂತಹ ಪ್ರತಾಪ್ ಸಿಂಹಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುವ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು.

ಇದೇ ವೇಳೆ ಸಚಿವ ಎಚ್.ಸಿ. ಮಹದೇವಪ್ಪ ಅವರ 'ಕೆಆರ್‌ಎಸ್‌ಗೆ ಟಿಪ್ಪು ಅಡಿಗಲ್ಲು ಹಾಕಿದ್ದರು' ಎಂಬ ಹೇಳಿಕೆಯನ್ನು ಲಕ್ಷ್ಮಣ್ ಅವರು ಸಮರ್ಥಿಸಿಕೊಂಡಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ