Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಆಧ್ಯಾತ್ಮದ ಅರಿವು ಇದ್ದರೆ ಬದುಕು ಸರಳ, ಶಾಂತವಾಗಿ ನಡೆಯುತ್ತದೆ"

ಕುರುಗೋಡು: ಮೇ.05. ಪ್ರತಿಯೊಬ್ಬರ ಜೀವನದಲ್ಲಿ ಆಧ್ಯಾತ್ಮದ ಅರಿವು ಇದ್ದರೆ ಅಂತಹರ ಬದುಕು ಸರಳ ಮತ್ತು ಶಾಂತವಾಗಿ ನಡೆಯುತ್ತದೆ. ಎಂದು ಕುರುಗೋಡು ಪಟ್ಟಣದ ಕೊಟ್ಟೂರು ಸ್ವಾಮಿ ಶಾಕ ವಿರಕ್ತ ಮಠದ ಶ್ರೀ ನಿರಂಜನ ಪ್ರಭು ಸ್ವಾಮೀಜಿಯವರು ತಿಳಿಸಿದರು. ಮಠದಲ್ಲಿ ಶುಕ್ರವಾರ ಆಗಿ ಹುಣ್ಣಿಮೆ ಪ್ರಯುಕ್ತ ಆಯೋಜಿಸಿದ್ದ ಶಿವಾನುಭವ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಾ, ಪ್ರತಿದಿನವೂ ಕಾಯಕವೇ ಕೈಲಾಸ ಎಂಬ ಮಾರ್ಗದಲ್ಲಿ ಕೆಲಸ ನಿರ್ವಹಿಸಬೇಕು. ಶಿವ ಮೆಚ್ಚುವುದು ಕಷ್ಟಪಟ್ಟು ದುಡಿದಾಗ ಮಾತ್ರ. ಸಂತಸ ಬದುಕಿಗೆ ಆಧ್ಯಾತ್ಮದ ಅರಿವು ಅತ್ಯಗತ್ಯವಾಗಿದ್ದು, ಭೌತಿಕ ಆಸ್ತಿಗಿಂತ ಆಧ್ಯಾತ್ಮ ಸಂಪತ್ತು ಶ್ರೇಷ್ಠವಾಗಿದೆ. ಇತರರಿಗೆ ಒಳಿತನ್ನು ಬಯಸುವುದು ನಿಜವಾದ ಧರ್ಮ. ಗಳಿಸಿದ ಒಳ್ಳೆಯ ಹೆಸರು ಹಣಕ್ಕಿಂತ ಹೆಚ್ಚು ಬೆಲೆ ಬಾಳುತ್ತದೆ. ಸುಳ್ಳಿಗೆ ಹಲವು ದಾರಿಗಳಿದ್ದರೂ ಸತ್ಯಕ್ಕೆ ಒಂದೇ ದಾರಿ. ವೀರಶೈವ ಧರ್ಮದಲ್ಲಿ ರೇಣುಕಾಚಾರ್ಯರು ಬೋಧಿಸಿದ ಮೌಲ್ಯಗಳು ಉಲ್ಲೇಖಾರ್ಹವಾಗಿವೆ. ಕೈಲಾಸಕ್ಕಿಂತ ಕಾಯಕ, ಧರ್ಮಕ್ಕಿಂತ ದಯೆ, ಅರಿವಿಗಿಂತ ಆಚಾರ, ಅಧಿಕಾರಕ್ಕಿಂತ ಅಭಿಮಾನ ಹಾಗೂ ಭೌತಿಕ ಆಸ್ತಿಗಿಂತ ಆರೋಗ್ಯ ಮುಖ್ಯ ಎಂದರು. ಶಿವಾನುಭವ ಸಂಪದದಲ್ಲಿ ಪಾಲ್ಗೊಂಡಿದ್ದ ಪೊಲೀಸ್ ಇಲಾಖೆಯ ಕುರುಗೋಡು ಸಿಪಿಐ ಎಸ್.ಎಂ. ಬಾಳನಗೌಡ ರವರು ಮಾತನಾಡಿ, ಅಧ್ಯಾತ್ಮದ ಅರಿವು ಮನುಷ್ಯನಲ್ಲಿ ಒಳ್ಳೆಯ ನಡತೆಯನ್ನು ರೂಪಿಸುತ್ತದೆ. ಯಾವುದೇ ಸಮಸ್ಯೆಗಳಿಲ್ಲದೆ ಜೀವನ ಶಾಂತವಾಗಿ, ಎಲ್ಲರೊಂದಿಗೂ  ಸಾಮರಸ್ಯವಾಗಿ ನಡೆಯುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪಟ್ಟಣದ ಹಿರಿಯರು, ಮಠದ ಭಕ್ತಾದಿಗಳು, ಪಾಲ್ಗೊಂಡಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಂಚಮಸಾಲಿ ಮಠದಲ್ಲಿ ಯಾವುದೇ ಸಭೆ, ಸಮಾರಂಭ ನಡೆಸುವಂತಿಲ್ಲ; ಬಿಎನ್​​ಎಸ್ 163 ಅಡಿ ನೋಟಿಸ್​ ಜಾರಿ ಅತ್ತೆಗೆ ಚಾಕು ಇರಿದ ಅಳಿಯಸಿಗ್ನಲ್ ಗಳಲ್ಲಿ ನೆರಳು ಛಾವಣಿ: ಸಾರ್ವಜನಿಕರ ಮೆಚ್ಚುಗೆ  ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವುಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಸೂಚನೆಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಸೂಚನೆಪಂಚರಾಜ್ಯ ಫಲಿತಾಂಶ ಹಿನ್ನೆಲೆ ಸಿರುಗುಪ್ಪದಲ್ಲಿ ಬಿಜೆಪಿ ಸಂಭ್ರಮಾಚರಣೆರೈಲ್ವೆ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಬೆಂಬಲಜಮಖಂಡಿಯಲ್ಲಿ ಕಾಂಗ್ರೆಸ್‌ ವಿಜಯೋತ್ಸವ; ಜನಪರ ಆಡಳಿತಕ್ಕೆ ಮನ್ನಣೆ - ಆನಂದ ನ್ಯಾಮಗೌಡಜಮಖಂಡಿಯಲ್ಲಿ ರಂಭಾಪುರಿ ಜಗದ್ಗುರುಗಳ ದಸರಾ ದರ್ಬಾರ- ಶಾಸಕ ಜಗದೀಶ ಗುಡಗುಂಟಿ