LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಡಾ. ಸುಮನ್ ಸೋಮೇಶ್ವರ್ ಗಡ್ಡಿಯವರಿಗೆ ಐಎಂಎ ನ್ಯಾಷನಲ್ ಡಾಕ್ಟರ್ ಅಕಾಡಮಿಕ್ ಪ್ರಶಸ್ತಿ ಪ್ರದಾನ







ಬಳ್ಳಾರಿ ಜುಲೈ 17. ವೈದ್ಯಕೀಯ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ನಗರದ ಹಿರಿಯ ವೈದ್ಯರಾದ ಡಾ. ಸುಮನ್ ಸೋಮೇಶ್ವರ್ ಗಡ್ಡಿಯವರಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ವೈದ್ಯರಿಗೆ ನೀಡುವ ಪ್ರತಿಷ್ಠಿತ  ಐಎಂಎ ನ್ಯಾಷನಲ್ ಡಾಕ್ಟರ್ ಅಕಾಡಮಿಕ್ ಪ್ರಶಸ್ತಿ ಲಭಿಸಿದೆ.


 ಈ ಹಿನ್ನೆಲೆಯಲ್ಲಿ  ಅಬ್ದುಲ್ ನಬಿ ಸಾಬ್ ಅಬೂಬಕರ್ ಸಿದ್ದಿಕ್ ಎಜುಕೇಶನಲ್ ವೆಲ್ಫೇರ್ ಟ್ರಸ್ಟ್ ವತಿಯಿಂದ ಡಾ. ಸುಮನ್ ಗಡ್ಡಿ ಅವರನ್ನು  ಸನ್ಮಾನಿಸಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ವಖ್ಫ್ ಬೋರ್ಡ್ ಅಧ್ಯಕ್ಷ  ಹುಮಯೂನ್ ಖಾನ್ ಮಾತನಾಡಿ, ಇಂದಿನ ದಿನಗಳಲ್ಲಿ ಮಹಿಳೆಯರು ಮಿಲಿಟರಿ, ಎರೋಸ್ಪೇಸ್ ಸಾಹಿತ್ಯ, ಕಲೆ ಸೇರಿದಂತೆ  ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ, ಅದೇ ಪ್ರಕಾರವಾಗಿ ನಗರದ ದಾನಮ್ಮ ಆಸ್ಪತ್ರೆಯ ಹಿರಿಯ ಮಹಿಳಾ ವೈದ್ಯರಾದ ಡಾ. ಸುಮನ್ ಗಡ್ಡಿಯವರು ಸಹ ತಮ್ಮ ವೈದ್ಯಕೀಯ ವೃತ್ತಿಯಲ್ಲಿ ಕಳೆದ ಹಲವು ದಶಕಗಳಿಂದ ನಗರದಲ್ಲಿ ಗಣನೀಯ ಸೇವೆಯನ್ನು ಮಾಡುತ್ತಾ ಬಂದಿರುತ್ತಾರೆ ಇವರಿಗೆ ದೇಶದ ಪ್ರತಿಷ್ಠಿತ ಐಎಂಎ ನ್ಯಾಷನಲ್ ಡಾಕ್ಟರೇಟ್ ಪ್ರಶಸ್ತಿ ಲಭಿಸಿರುವುದು ಸಂತಸದ ವಿಷಯ ಎಂದರು.


ಟ್ರಸ್ಟ್ ಅಧ್ಯಕ್ಷ ಮಹಮದ್ ಅಲಿ ಸನ್ಮಾನಿಸಿ ಮಾತನಾಡಿ, ಡಾ. ಸುಮ್ಮನ್ ಸೋಮೇಶ್ವರ್  ಗಡ್ಡಿ ಅವರು ನಮಗೆ ಕಳೆದ ಹಲವು ವರ್ಷಗಳಿಂದ ಚಿರಪರಿಚಿತರಿದ್ದು ನಮ್ಮ ಯಾವುದೇ ಆರೋಗ್ಯ ತೊಂದರೆ ಇದ್ದಲ್ಲಿ ಇವರನ್ನ ಸಂಪರ್ಕಿಸಿ ಸಲಹೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದೇವೆ, ಮತ್ತು ಆರ್ಥಿಕವಾಗಿ ಆ ಸಹಾಯಕರಾದ ರೋಗಿಗಳಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಮತ್ತು ಉಚಿತವಾಗಿ ಚಿಕಿತ್ಸೆ ನೀಡಿದ ಉದಾಹರಣೆಗಳಿವೆ ಇಂಥ ವೈದ್ಯರಿಗೆ ಅಕಾಡೆಮಿಕ್ ಪ್ರಶಸ್ತಿ ಬಂದಿರುವುದು ಅವರ ಸೇವೆಗೆ ತಕ್ಕ ಪ್ರತಿಫಲ ಎಂದರು.


 ಡಾ. ಸುಮನ್ ಗಡ್ಡಿ ಅವರು ತಮ್ಮ ಅಭಿನಂದನಾ ಭಾಷಣದಲ್ಲಿ, ಮಾತನಾಡಿ ಇದು ನನಗೆ ನನ್ನ ವೈದ್ಯಕೀಯ ವೃತ್ತಿಯಲ್ಲಿ

ಖುಷಿ ಹಾಗೂ ಹೆಮ್ಮೆ ಪಡುವ ದಿನವಾಗಿದೆ  ಕಳೆದ ಹಲವಾರು ದಶಕಗಳಿಂದ ನಗರದ ಸಾರ್ವಜನಿಕರಿಗೆ ವೈದ್ಯಕೀಯ ಸೇವೆಯನ್ನು ಒದಗಿಸಿರುವುದೇ ನನಗೆ ಈ ಪ್ರಶಸ್ತಿ ಆಯ್ಕೆಯಾಗಲು  ಕಾರಣವಾಗಿದೆ, ಮುಂದಿನ ದಿನಗಳಲ್ಲಿ ಹೆಚ್ಚಿನ ರೀತಿಯಲ್ಲಿ ಸಮಾಜ ಸೇವೆಯನ್ನು ಮಾಡಲು ನನಗೆ ಜವಾಬ್ದಾರಿ, ಗೌರವ ಮತ್ತು ಇನ್ನಷ್ಟು ಹೊಣೆಗಾರಿಕೆಯನ್ನು ನೀಡಿದೆ ಎಂದು ಅನಿಸಿಕೆ ವ್ಯಕ್ತಪಡಿಸಿದರು.

 ಈ ಸಂದರ್ಭದಲ್ಲಿ  ಮುಖಂಡರಾದ ಮನಯ್ಯಾ,ಮೇತಬ್ ಅಲಿ, ಸಾರ್ಫಾರಾಜ್,  ಜಾಹಿರುದ್ದಿನ್, ಅಲ್ತಾಫ್, ಹುಸೇನ್ ಭಾಷಾ ಸ್ಟಾರ್ ರಫೀಕ್,ಸೇಠು ವಲಿ, ಗಫ್ಫರ್, ಗೌಸ್,ಹನೀಫ್, ಜೈನುಲ್, ಟಿಪ್ಪು, ಅಬ್ದುಲ್ ಶೇಕ್, ಸೇರಿದಂತೆ ಅನೇಕರು ಉಪಸ್ದಿತರಿದ್ದರು.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್