Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ತಾಪುರದಲ್ಲಿ ಆರ್​​ಎಸ್​​ಎಸ್​​ ಪಥಸಂಚಲನ : ಹೈಕೋರ್ಟ್ ಮಹತ್ವದ ಸೂಚನೆ

ಕಲಬುರಗಿ, ಅಕ್ಟೋಬರ್​ 19: ಜಿಲ್ಲೆಯ ಚಿತ್ತಾಪುರದಲ್ಲಿ ಆರ್​​​ಎಸ್​​​ಎಸ್​ ಪಥಸಂಚಲನಕ್ಕೆ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡಿದ ಕಲಬುರಗಿ ಹೈಕೋರ್ಟ್ ಪೀಠ, ಪಥಸಂಚಲನ ಮಾರ್ಗದೊಂದಿಗೆ ಹೊಸದಾಗಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿದೆ. ಅರ್ಜಿದಾರರ ಮನವಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಜೊತೆಗೆ ಅಕ್ಟೋಬರ್​​ 24ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದೆ.



ಚಿತ್ತಾಪುರದಲ್ಲಿ ಭಾನುವಾರ ಆರ್​ಎಸ್​ಎಸ್​​ ಪಥ ಸಂಚಲನ ನಡೆಯಬೇಕಿತ್ತು. ಆದರೆ ಅನುಮತಿ ನಿರಾಕರಿಸಿ ತಹಶೀಲ್ದಾರ್​ ನಾಗಯ್ಯ ಹಿರೇಮಠ ಆದೇಶ ಹೊರಡಿಸಿದ್ದರು. ಹೀಗಾಗಿ ಆರ್​ಎಸ್​ಎಸ್ ಕಾರ್ಯಕರ್ತರು ಕಾನೂನು ಹೋರಾಟಕ್ಕೆ ಮುಂದಾಗಿದ್ದರು. ಅದರಂತೆಯೇ ಡಿಸಿ ಕ್ರಮ ಪ್ರಶ್ನಿಸಿ ಕಲಬುರಗಿ ಹೈಕೋರ್ಟ್ ಪೀಠಕ್ಕೆ ಆರ್​​ಎಸ್​ಎಸ್​ ಕಲಬುರಗಿ ಜಿಲ್ಲಾ ಪ್ರಮುಖರಾದ ಅಶೋಕ್ ಪಾಟೀಲ್ ಎಂಬುವವರು ರಿಟ್ ಅರ್ಜಿ ಸಲ್ಲಿಸಿದ್ದರು.

ನ್ಯಾ. ಎಂಜಿಎಸ್​​ ಕಮಲ್ ಅವರ ಪೀಠದಲ್ಲಿ ತುರ್ತು ವಿಚಾರಣೆ ಮಾಡಲಾಯಿತು. ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ಕಾನೂನಿನ ಪ್ರಕಾರ ಅನುಮತಿ ಕೊಡಬೇಕಾದವರು ಯಾರು ಎಂದು ಜಡ್ಜ್ ಪ್ರಶ್ನಿಸಿದರು. ಪೊಲೀಸರಿಗೆ ಭದ್ರತೆ ನೀಡಲು ಮಾಹಿತಿ ನೀಡಿದ್ದೆವು. ಅ.13ರಂದೇ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದೆವು. ಅ.17ರಂದು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್​​​ಗೆ ಅರ್ಜಿ ಸಲ್ಲಿಸಿದ್ದೆವು. ಶನಿವಾರ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ್ದಾರೆ ಎಂದು ಅರುಣ್ ಶ್ಯಾಮ್ ವಾದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ