LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಚಿತ್ತಾಪುರದಲ್ಲಿ ಆರ್​​ಎಸ್​​ಎಸ್​​ ಪಥಸಂಚಲನ : ಹೈಕೋರ್ಟ್ ಮಹತ್ವದ ಸೂಚನೆ

ಕಲಬುರಗಿ, ಅಕ್ಟೋಬರ್​ 19: ಜಿಲ್ಲೆಯ ಚಿತ್ತಾಪುರದಲ್ಲಿ ಆರ್​​​ಎಸ್​​​ಎಸ್​ ಪಥಸಂಚಲನಕ್ಕೆ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡಿದ ಕಲಬುರಗಿ ಹೈಕೋರ್ಟ್ ಪೀಠ, ಪಥಸಂಚಲನ ಮಾರ್ಗದೊಂದಿಗೆ ಹೊಸದಾಗಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿದೆ. ಅರ್ಜಿದಾರರ ಮನವಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಜೊತೆಗೆ ಅಕ್ಟೋಬರ್​​ 24ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದೆ.



ಚಿತ್ತಾಪುರದಲ್ಲಿ ಭಾನುವಾರ ಆರ್​ಎಸ್​ಎಸ್​​ ಪಥ ಸಂಚಲನ ನಡೆಯಬೇಕಿತ್ತು. ಆದರೆ ಅನುಮತಿ ನಿರಾಕರಿಸಿ ತಹಶೀಲ್ದಾರ್​ ನಾಗಯ್ಯ ಹಿರೇಮಠ ಆದೇಶ ಹೊರಡಿಸಿದ್ದರು. ಹೀಗಾಗಿ ಆರ್​ಎಸ್​ಎಸ್ ಕಾರ್ಯಕರ್ತರು ಕಾನೂನು ಹೋರಾಟಕ್ಕೆ ಮುಂದಾಗಿದ್ದರು. ಅದರಂತೆಯೇ ಡಿಸಿ ಕ್ರಮ ಪ್ರಶ್ನಿಸಿ ಕಲಬುರಗಿ ಹೈಕೋರ್ಟ್ ಪೀಠಕ್ಕೆ ಆರ್​​ಎಸ್​ಎಸ್​ ಕಲಬುರಗಿ ಜಿಲ್ಲಾ ಪ್ರಮುಖರಾದ ಅಶೋಕ್ ಪಾಟೀಲ್ ಎಂಬುವವರು ರಿಟ್ ಅರ್ಜಿ ಸಲ್ಲಿಸಿದ್ದರು.

ನ್ಯಾ. ಎಂಜಿಎಸ್​​ ಕಮಲ್ ಅವರ ಪೀಠದಲ್ಲಿ ತುರ್ತು ವಿಚಾರಣೆ ಮಾಡಲಾಯಿತು. ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ಕಾನೂನಿನ ಪ್ರಕಾರ ಅನುಮತಿ ಕೊಡಬೇಕಾದವರು ಯಾರು ಎಂದು ಜಡ್ಜ್ ಪ್ರಶ್ನಿಸಿದರು. ಪೊಲೀಸರಿಗೆ ಭದ್ರತೆ ನೀಡಲು ಮಾಹಿತಿ ನೀಡಿದ್ದೆವು. ಅ.13ರಂದೇ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದೆವು. ಅ.17ರಂದು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್​​​ಗೆ ಅರ್ಜಿ ಸಲ್ಲಿಸಿದ್ದೆವು. ಶನಿವಾರ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ್ದಾರೆ ಎಂದು ಅರುಣ್ ಶ್ಯಾಮ್ ವಾದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್