Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ತಾಪುರದಲ್ಲಿ ಆರ್​​ಎಸ್​​ಎಸ್​​ ಪಥಸಂಚಲನ : ಹೈಕೋರ್ಟ್ ಮಹತ್ವದ ಸೂಚನೆ

ಕಲಬುರಗಿ, ಅಕ್ಟೋಬರ್​ 19: ಜಿಲ್ಲೆಯ ಚಿತ್ತಾಪುರದಲ್ಲಿ ಆರ್​​​ಎಸ್​​​ಎಸ್​ ಪಥಸಂಚಲನಕ್ಕೆ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡಿದ ಕಲಬುರಗಿ ಹೈಕೋರ್ಟ್ ಪೀಠ, ಪಥಸಂಚಲನ ಮಾರ್ಗದೊಂದಿಗೆ ಹೊಸದಾಗಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿದೆ. ಅರ್ಜಿದಾರರ ಮನವಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಜೊತೆಗೆ ಅಕ್ಟೋಬರ್​​ 24ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದೆ.



ಚಿತ್ತಾಪುರದಲ್ಲಿ ಭಾನುವಾರ ಆರ್​ಎಸ್​ಎಸ್​​ ಪಥ ಸಂಚಲನ ನಡೆಯಬೇಕಿತ್ತು. ಆದರೆ ಅನುಮತಿ ನಿರಾಕರಿಸಿ ತಹಶೀಲ್ದಾರ್​ ನಾಗಯ್ಯ ಹಿರೇಮಠ ಆದೇಶ ಹೊರಡಿಸಿದ್ದರು. ಹೀಗಾಗಿ ಆರ್​ಎಸ್​ಎಸ್ ಕಾರ್ಯಕರ್ತರು ಕಾನೂನು ಹೋರಾಟಕ್ಕೆ ಮುಂದಾಗಿದ್ದರು. ಅದರಂತೆಯೇ ಡಿಸಿ ಕ್ರಮ ಪ್ರಶ್ನಿಸಿ ಕಲಬುರಗಿ ಹೈಕೋರ್ಟ್ ಪೀಠಕ್ಕೆ ಆರ್​​ಎಸ್​ಎಸ್​ ಕಲಬುರಗಿ ಜಿಲ್ಲಾ ಪ್ರಮುಖರಾದ ಅಶೋಕ್ ಪಾಟೀಲ್ ಎಂಬುವವರು ರಿಟ್ ಅರ್ಜಿ ಸಲ್ಲಿಸಿದ್ದರು.

ನ್ಯಾ. ಎಂಜಿಎಸ್​​ ಕಮಲ್ ಅವರ ಪೀಠದಲ್ಲಿ ತುರ್ತು ವಿಚಾರಣೆ ಮಾಡಲಾಯಿತು. ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ಕಾನೂನಿನ ಪ್ರಕಾರ ಅನುಮತಿ ಕೊಡಬೇಕಾದವರು ಯಾರು ಎಂದು ಜಡ್ಜ್ ಪ್ರಶ್ನಿಸಿದರು. ಪೊಲೀಸರಿಗೆ ಭದ್ರತೆ ನೀಡಲು ಮಾಹಿತಿ ನೀಡಿದ್ದೆವು. ಅ.13ರಂದೇ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದೆವು. ಅ.17ರಂದು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್​​​ಗೆ ಅರ್ಜಿ ಸಲ್ಲಿಸಿದ್ದೆವು. ಶನಿವಾರ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ್ದಾರೆ ಎಂದು ಅರುಣ್ ಶ್ಯಾಮ್ ವಾದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ