LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಡಿಸೆಂಬರ್‌ನಲ್ಲಿ ಕಾಂಗ್ರೆಸ್‌ನಲ್ಲಿ ಮಹಾ ಸ್ಫೋಟ; ಸಿದ್ದು ಸ್ಥಿತಿ ಅಲ್ಲೋಲ ಕಲ್ಲೋಲ ಎಂದ ಶೆಟ್ಟರ್‌

ವಿಜಯಪುರ: ಸಿದ್ದರಾಮಯ್ಯ ಬಳಿಕ ಡಿಕೆಶಿ ಪಟ್ಟ ಏರಲು ಕಾಯುತ್ತಿದ್ದಾರೆ. ನವೆಂಬರ್, ಡಿಸೆಂಬರ್‌ನಲ್ಲಿ ಕಾಂಗ್ರೆಸ್‌ನಲ್ಲಿ ಮಹಾ ಸ್ಫೋಟವಾಗಲಿದೆಂದು ಮಾಜಿ ಮುಖ್ಯಮಂತ್ರಿ ಮತ್ತು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಅವರು ಅವರು ಹೇಳಿದ್ದಾರೆ.

ಗುರುವಾರ ಬಿಜೆಪಿಯ ಜನಕ್ರೋಶ ಯಾತ್ರೆಯಲ್ಲಿ ಭಾಗವಹಿಸುವ ಮೊದಲು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ಜಾತಿ ಗಣತಿ ವರದಿ ಅನುಷ್ಠಾನಗೊಳಿಸುವಲ್ಲಿನ ವಿಳಂಬ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯು ಕಾಂತರಾಜ್ ಆಯೋಗ ಸಲ್ಲಿಸಿದ ವರದಿಯ ಉದ್ದೇಶ ಮತ್ತು ಸತ್ಯಾಸತ್ಯತೆಯ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಜಾತಿ ಜನಗಣತಿ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಸಿದ್ದರಾಮಯ್ಯ ಮೇಲೆ ಆರೋಪ ಬಂದಾಗಲೆಲ್ಲಾ ಜಾತಿ ಜನಗಣತಿ ತರುತ್ತಾರೆ. ಅಧಿಕಾರದಿಂದ ಇಳಿಯುವ ಸಮಯ ಬಂದಾಗಲೆಲ್ಲ ಹೀಗೆ ಮಾಡುತ್ತಾರೆ. ಲಿಂಗಾಯತ, ಒಕ್ಕಲಿಗರು, ದಲಿತರನ್ನು ಒಡೆಯುವ ಹುನ್ನಾರ ಇದು. ಮುಸ್ಲಿಮರನ್ನು ಪ್ರೊಜೆಕ್ಟ್ ಮಾಡಲು ಜಾತಿ ಗಣತಿ ಮಂಡನೆ ಮಾಡಿದ್ದಾರೆ. ಈ ಹಿಂದೆಯೆ ಜಾತಿ ಜನಗಣತಿ ಮಂಡನೆ ಮಾಡಬೇಕಿತ್ತು. ಅಂದಿನಿಂದಲೂ ವಿವಾದಾಸ್ಪದ ವರದಿ ಇದು. ಆಯೋಗ ಮಾಡಿದ್ದೇ ಸಿದ್ದರಾಮಯ್ಯ. ಅಂದು ಯಾಕೆ ಸ್ವೀಕಾರ ಮಾಡಲಿಲ್ಲ? ಅಂದೆ ಕ್ಯಾಬಿನೆಟ್‌ನಲ್ಲಿ ಇಡಬೇಕಿತ್ತು ಎಂದು ತಿಳಿಸಿದರು.

ಕಾಂಗ್ರೆಸ್‌ನಲ್ಲಿ ಆಂತರಿಕ ಯುದ್ಧ ನಡೆಯುತ್ತದೆ. ಸಿದ್ದರಾಮಯ್ಯ ಬಳಿಕ ಡಿಕೆಶಿ ಪಟ್ಟ ಏರಲು ಕಾಯುತ್ತಿದ್ದಾರೆ. ನವೆಂಬರ್, ಡಿಸೆಂಬರ್‌ನಲ್ಲಿ ಕಾಂಗ್ರೆಸ್‌ನಲ್ಲಿ ಮಹಾ ಸ್ಫೋಟವಾಗಲಿದೆ. ಟೈಂ ಬಾಂಬ್ ಸ್ಫೋಟವಾಗಲಿದೆ. ಹೀಗಾಗಿ ಅಧಿಕಾರದಲ್ಲಿ ಮುಂದುವರೆಯಲು ಜಾತಿ ಗಣತಿ ವರದಿ ಕುರಿತು ಗೊಂದಲ ಸೃಷ್ಟಿಸಿದ್ದಾರೆ. ಆದರೆ, ಡಿಕೆ.ಶಿವಕುಮಾರ್ ನವೆಂಬರ್ ಅಥವಾ ಡಿಸೆಂಬರ್‌ಗೆ ಟೈಂ ಬಾಂಬ್ ಫಿಕ್ಸ್ ಮಾಡಿದ್ದಾರೆ. ಅದು ಸ್ಫೋಟವಾಗುವ ಸಾಧ್ಯತೆ ಇದೆ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್