ಈ ವಿಚಾರವಾಗಿ ಪ್ರತಿಕ್ರಿಯಿಸಿದ ಸ್ವಾಮೀಜಿ, “ಅವರ ಅಕ್ರಮ ಬಯಲು ಮಾಡಿದಕ್ಕೆ ನನ್ನನ್ನು ಮಠದಿಂದ ಹೊರಕ್ಕೆ ಕಳಿಸಿದ್ದಾರೆ. ಇದರಲ್ಲಿ, ಸ್ಥಳೀಯ ರಾಜಕೀಯ ನಾಯಕನ ಕೈವಾಡವಿದೆ. ನಮ್ಮನ್ನು ಮಠದಿಂದ ಓಡಿಸಲು ಯತ್ನಿಸಲಾಗಿದೆ. ಹೀಗಾಗಿ, ನ್ಯಾಯ ಸಿಗುವವರಿಗೆ ನಾನು ಸೇವಾಲಾಲ್ ಮಂದಿರದಲ್ಲಿ ಧರಣಿ ಮಾಡುತ್ತೇನೆ. ಸಲ್ಲೇಖನ ವೃತ್ತ ಆರಂಭ ಮಾಡಿದ್ದೇನೆ” ಎಂದು ಸ್ವಾಮೀಜಿ ಹೇಳಿದ್ದಾರೆ.
“ಸ್ವಾಮೀಜಿ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮವನ್ನು ಬಯಲು ಮಾಡಿದ್ದಾರೆ. ಕಲ್ಲುಗಣಿಗಾರಿಕೆ, ಮರಳು ದಂಧೆ ಮಾಡುವವರ ವಿರುದ್ಧ ಹೋರಾಟ ಮಾಡಿದರು. ಹೀಗಾಗಿ, ಸ್ವಾಮೀಜಿ ಮೇಲೆ ವಿನಾಕಾರಣ ಒಂದು ಸಮುದಾಯದವರು ಆರೋಪ ಮಾಡುತ್ತಿದ್ದಾರೆ. ನಮಗೆ ಏನಾದರೂ ಸಮಸ್ಯೆಯಾದರೂ ಸ್ವಾಮೀಜಿ ಮುಂದೆ ಬರುತ್ತಿದ್ದರು. ರಾಜಕಾರಣಿಗಳು ಕೈವಾಡದಿಂದ ಹೀಗೆ ಮಾಡುತ್ತಿದ್ದಾರೆ. ನಮ್ಮ ಸ್ವಾಮೀಜಿಯನ್ನು ಮಠದಿಂದ ಹೊರಕ್ಕೆ ಹಾಕಿ, ಕೊಠಡಿಗೆ ಬೀಗ ಹಾಕಿದ್ದಾರೆ ಎಂದು ಭಕ್ತರು ಆಕ್ರೋಶ ವ್ಯಕ್ತಪಡೆಸಿದ್ದಾರೆ.