LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಮೈಸೂರಲ್ಲಿ ಸಂಭವಾಮಿ ಯುಗೇ ಯುಗೇ 

     ಆಧುನಿಕತೆಯ ಸೋಗಿನಲ್ಲಿ ನಮ್ಮ ಹಳ್ಳಿಗಳಲ್ಲಿ ಮೊದಲಿದ್ದ ವೈಭವ ಕಡಿಮೆಯಾಗುತ್ತಿದೆ. ವಿದ್ಯಾವಂತರೆಲ್ಲ ಪಟ್ಟಣ ಸೇರುತ್ತಿದ್ದಾರೆ. ಹೀಗಾಗಬಾರದು,  ಯುವಕರು ಹಳ್ಳಿಗಳಲ್ಲೇ ಇದ್ದು ಕೆಲಸ ಮಾಡಬೇಕೆನ್ನುವ ಸಂದೇಶ ಇಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರ ಸಂಭವಾಮಿ ಯುಗೇ ಯುಗೇ.


     ರಾಜಲಕ್ಷ್ಮಿ ಎಂಟರ್‌ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ  ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರವು ಇದೇ ತಿಂಗಳು 21ರಂದು  ಬಿಡುಗಡೆಯಾಗಲಿದೆ.


     ಜಯ್ ಶೆಟ್ಟಿ - ನಿಶಾ ರಜಪೂತ್ ಹಾಗೂ ಮಧುರಾಗೌಡ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದ ಪ್ರಚಾರಕ್ಕಾಗಿ ಚಿತ್ರತಂಡ ಮೈಸೂರಿಗೆ ಭೇಟಿಕೊಟ್ಟು ಮಾಧ್ಯಮಗಳ ಜೊತೆ ಮಾತನಾಡಿತು.


     ನಿರ್ದೇಶಕ ಚೇತನ್  ಚಂದ್ರಶೇಖರ್ ಶೆಟ್ಟಿ,  ನಾನು ಕಳೆದ  ಹತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದು, ಸೋಷಿಯಲ್ ಕಂಟೆಂಟ್ ಇಟ್ಟುಕೊಂಡು ಈ ಚಿತ್ರ  ನಿರ್ದೇಶನ ಮಾಡಿದ್ದೇನೆ. ಫ್ಯಾಮಿಲಿ ಆಡಿಯನ್ಸ್ ಕೂತು ನೋಡುವಂಥ  ವಿಭಿನ್ನ  ಕಮರ್ಷಿಯಲ್  ಕಾನ್ಸೆಪ್ಟ್ ಇದೆ" ಎಂದರು.


  ನಾಯಕ ಜಯ್‌ಶೆಟ್ಟಿ "ಕೃಷಿ ಮತ್ತು ರೈತರ ಮೇಲೆ ಮಾಡಿದ ಚಿತ್ರವಿದು, ತನಗೆ ಆಶ್ರಯ ಕೊಟ್ಟ ಊರಿಗೆ ಏನಾದರೂ ಮಾಡಬೇಕು ಎಂದು ನಾಯಕ ಮುಂದಾಗುತ್ತಾನೆ.  ಮುಂದೇನಾಗುತ್ತದೆ ಎನ್ನುವುದೇ ಈ ಚಿತ್ರದ ಕಾನ್ಸೆಪ್ಟ್  ಎಂದರೆ,


 ನಾಯಕಿ ನಿಶಾ ರಜಪೂತ್ "ನಾನು ಬಿಜಾಪುರದವಳಾದರೂ, ಬೆಳೆದಿದ್ದು ಮುಂಬೈನಲ್ಲಿ. ಕನ್ನಡದಲ್ಲಿ ನಟಿಸಬೇಕು ಎಂಬ ಆಸೆ ಇತ್ತು. ಈ ಚಿತ್ರದಲ್ಲಿ ಸ್ವಾತಿ ಎಂಬ ಪಾತ್ರದಲ್ಲಿ  ಕಾಣಿಸಿಕೊಂಡಿದ್ದೇನೆ" ಎಂದು ಹೇಳಿದರು.


      ನಾಯಕನ ತಂಗಿಯ ಪಾತ್ರ ಮಾಡಿರುವ ಮಧುರಾಗೌಡ "ಈ ಚಿತ್ರದಲ್ಲಿ ಸುಧಾರಾಣಿ ಅವರ ಮಗಳಾಗಿ ನಟಿಸಿದ್ದು ನನ್ನ ಅದೃಷ್ಟ" ಎಂದರೆ, ಕಲಾವಿದರಾದ ಬಲ ರಾಜವಾಡಿ, ಪುನೀತ್, ಅಶ್ವಿನ್‌ಹಾಸನ್ ತಮ್ಮ ಪಾತ್ರಗಳ‌ ಕುರಿತು  ತಿಳಿಸಿದರು. ಪೂರನ್ ಶೆಟ್ಟಿಗಾರ್ ಸಂಗೀತ ಹಾಗು  ರಾಜು ಹೆಮ್ಮಿಗೆಪುರ  ಛಾಯಾಗ್ರಹಣ ಚಿತ್ರಕ್ಕಿದೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್