Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೂಂಚ್​ನಲ್ಲಿ ಉಗ್ರರ ಪತ್ತೆ ಕಾರ್ಯಾಚರಣೆ ಚುರುಕು: ಶಂಕಿತರ ಬಂಧಿಸಿ ವಿಚಾರಣೆ, ಹೆಚ್ಚುವರಿ ಪಡೆ ರವಾನೆ

ಪೂಂಚ್ : ಜಮ್ಮು- ಕಾಶ್ಮೀರದ ಪೂಂಚ್​ನಲ್ಲಿ ವಾಯುಸೇನಾ ವಾಹನದ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಒಬ್ಬ ಯೋಧ ಸಾವಿಗೀಡಾಗಿ, ನಾಲ್ವರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಭದ್ರತಾ ಪಡೆಗಳು ಮೂರು ದಿನಗಳಿಂದ ಉಗ್ರರ ಪತ್ತೆ ಕಾರ್ಯಾಚರಣೆ ಚುರುಕಿನಿಂದ ನಡೆಸುತ್ತಿವೆ. ಶಂಕಿತ ವ್ಯಕ್ತಿಗಳನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


ಮೇ 4 ರಂದು ಸಂಜೆ ವಾಯುಪಡೆಯ ವಾಹನಗಳ ಮೇಲೆ ಉಗ್ರಗಾಮಿಗಳು ಗುಂಡಿನ ದಾಳಿ ನಡೆಸಿದ್ದರು. ಘಟನೆಯಲ್ಲಿ ಐವರು ಯೋಧರು ತೀವ್ರವಾಗಿ ಗಾಯಗೊಂಡಿದ್ದರು. ಇದರಲ್ಲಿ ಒಬ್ಬರು ಮರುದಿನ ಹುತಾತ್ಮರಾಗಿದ್ದರು. ಪಕ್ಕದಲ್ಲೇ ಇದ್ದ ಅರಣ್ಯದಲ್ಲಿ ಉಗ್ರರು ತಲೆಮರೆಸಿಕೊಂಡಿದ್ದರು.


ಭಾರತೀಯ ಸೇನೆಯ ಪೊಲೀಸ್ ಪ್ಯಾರಾ ಮಿಲಿಟರಿ ಪಡೆಗಳೊಂದಿಗೆ ಪೂಂಚ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಈ ಪ್ರದೇಶದಲ್ಲಿ ಶಸ್ತ್ರಸಜ್ಜಿತ ಗುಂಡು ನಿರೋಧಕ ವಾಹನಗಳು ಗಸ್ತು ತಿರುಗುತ್ತಿದ್ದು, ವಾಹನ ತಪಾಸಣೆಗಾಗಿ ಶ್ವಾನದಳ ನಿಯೋಜಿಸಲಾಗಿದೆ. ನಾಗರಿಕರ ಸುರಕ್ಷತೆಗಾಗಿ ಭಯೋತ್ಪಾದಕರ ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಹಬು ಹಮ್ಜಾ ಸಂಘಟನೆಯಿಂದ ದಾಳಿ?: ಭಾರತೀಯ ವಾಯುಪಡೆ ವಾಹನದ ಮೇಲೆ ನಡೆದ ದಾಳಿಯ ಹಿಂದೆ ಲಷ್ಕರ್ ಎ ತೊಯ್ಬಾ (ಎಲ್​ಇಟಿ)ಉಗ್ರ ಸಂಘಟನೆಯ ವಿದೇಶಿ ಸಹ ಸಂಘಟನೆಯಾದ ಅಬು ಹಮ್ಜಾದ ಕೈವಾಡ ಇದೆ ಎಂದು ಶಂಕಿಸಲಾಗಿದೆ. ರಜೌರಿಯಲ್ಲಿ ಸರ್ಕಾರಿ ನೌಕರನಾಗಿರುವ ಮೊಹಮ್ಮದ್ ರಜಾಕ್ ದಾಳಿಯ ಮಾಸ್ಟರ್ ಮೈಂಡ್ ಎಂಬ ಸುಳಿವೂ ಸಿಕ್ಕಿದೆ.


ದಾಳಿಯ ಮಾಸ್ಟರ್​ಮೈಂಡ್​ ಎಂದು ಹೇಳಲಾಗುವ ಮೊಹಮ್ಮದ್ ರಜಾಕ್​​ ತಲೆಗೆಗೆ 10 ಲಕ್ಷ ರೂಪಾಯಿ ಇನಾಮು ಘೋಷಿಸಲಾಗಿದೆ. ಈತನ ಸುಳಿವು ನೀಡಿದವರಿಗೆ ಸರ್ಕಾರ ನಗದು ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ. ಪೂಂಚ್ ಮತ್ತು ರಾಜೌರಿ ಕಾಡಿನಲ್ಲಿ ದಾಳಿಕೋರರು ತಲೆ ಮರೆಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸೇನೆ ಮತ್ತು ಪೊಲೀಸ್ ಪಡೆಗಳ ಹಿರಿಯ ಅಧಿಕಾರಿಗಳು ದಾಳಿ ಸ್ಥಳಕ್ಕೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸಿದ್ದಾರೆ.


ಉಗ್ರರು ತಪ್ಪಿಸಿಕೊಳ್ಳದಂತೆ ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿವೆ. ಜೊತೆಗೆ, ಕಾರ್ಯಾಚರಣೆಗೆ ನೆರವಾಗಲು ಹೆಚ್ಚುವರಿ ಪಡೆಗಳನ್ನು ಶನಿವಾರ ರಾತ್ರಿ ಪೂಂಚ್​ಗೆ ಕರೆತರಲಾಗಿದೆ.


ವಾಹನಗಳಿಗೆ ಹಾನಿ: ಎಕೆ ಅಸಾಲ್ಟ್ ರೈಫಲ್‌ಗಳನ್ನು ಹೊಂದಿದ್ದ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಸೇನಾ ಟ್ರಕ್‌ಗೆ ಹೆಚ್ಚಿನ ಹಾನಿಯಾಗಿದೆ. ದಾಳಿ ಬಳಿಕ ಹತ್ತಿರದ ಅರಣ್ಯಪ್ರದೇಶದೊಳಗೆ ಉಗ್ರರು ತಲೆಮರೆಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಪ್ರದೇಶವನ್ನು ಸುತ್ತುವರೆದಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ