Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಸ್ತುತ ದಿನಮಾನಗಳಲ್ಲಿ ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ಸೈ : ಡಾ. ಭಾರತಿ 

ಪ್ರಸ್ತುತ ದಿನಮಾನಗಳಲ್ಲಿ ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ಸೈ : ಡಾ. ಭಾರತಿ



ಬಳ್ಳಾರಿ.ಮಾ. 11:. ಅಡುಗೆ ಮನೆಗೆ ಸೀಮಿತವಾಗಿದ್ದ ಮಹಿಳೆಯು ಇಂದು ಎಲ್ಲಾ ರಂಗದಲ್ಲಿಯೂ ಸಾಧನೆಯ ಮುನ್ನೆಡೆಯಿಂದ ತನ್ನ ಸಾಮರ್ಥ್ಯವನ್ನು ಸಾಬೀತು ಪಡಿಸಿದ್ದಾಳೆ. ಮಹಿಳೆಯರು ಆತ್ಮವಿಶ್ವಾಸ, ಧೈರ್ಯ ಮತ್ತು ತಾಳ್ಮೆಯಿಂದ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಮೋಕಾ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಿ.ಭಾರತಿ ಅಭಿಪ್ರಾಯಪಟ್ಟರು.


ಅವರು ತಾಲೂಕಿನ  ಮೋಕಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಮಹಿಳಾ ಸಬಲೀಕರಣ ಕೋಶದಿಂದ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ,

ಇಂದು ಮಹಿಳೆಯರ ಮುಂದೆ ಅನೇಕ‌ ಸವಾಲುಗಳಿವೆ.ಎಲ್ಲವುಗಳನ್ನು ನಿಭಾಯಿಸುವ ಸಹನಾ ಶಕ್ತಿಯೂ ಮಹಿಳೆಗಿದೆ.ಮಾಡುವ ಕಾರ್ಯಗಳಲ್ಲಿ ಶ್ರೇಷ್ಠ ಕನಿಷ್ಠ ಎಂದೆಣಿಸದೆ ಸಹಭಾಗಿತ್ವದಿಂದ ಮಹಿಳೆಯರು ಸದೃಢ ಸಮಾಜವನ್ನು ಕಟ್ಟಬೇಕೆಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಮೋಕಾದ ಘನ ಮತ್ತು ದ್ರವ ತ್ಯಾಜ್ಯ ವಾಹನ ಚಾಲಕಿ ಕೆ.ಎ.ಕವಿತ ಅವರು ಮಾತನಾಡಿ, ಇಂದು ಮಹಿಳೆಯರು ಸಬಲರಾಗುತ್ತಿದ್ದಾರೆ.ತಮ್ಮ ಇಚ್ಛಾ ಶಕ್ತಿಯಿಂದ ಆರ್ಥಿಕ ಮತ್ತು ಸಾಮಾಜಿಕವಾಗಿಯೂ ಕುಟುಂಬವನ್ನು ಮುನ್ನೆಡೆಸುತ್ತಿದ್ದಾಳೆ.ಆತ್ಮಸ್ಥೆರ್ಯದೊಂದಿಗೆ ಹೆಜ್ಜೆ ಹಾಕಿದಾಗ ಖಂಡಿತ ಯಶಸ್ಸು  ದೊರೆಯುವದು.ಯಾವ ಕೆಲಸವಾದರೂ ಶ್ರದ್ದೆ ಪ್ರಾಮಾಣಿಕತೆಯಿಂದ ಮಾಡುವ ಗುಣ ಮಹಿಳೆಯರಲ್ಲಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಸರೋಜಾ

ಸಮಾಜದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಅನನ್ಯವಾಗಿದೆ.. ಪ್ರತಿಯೊಂದು ಹೆಜ್ಜೆಯಲ್ಲಿಯೂ ಮಹಿಳೆಯ ಶ್ರಮ ಮತ್ತು ತ್ಯಾಗವನ್ನು  ಸಮಾಜ ಗೌರವಿಸಬೇಕು. ಪ್ರಾತಿನಿಧಿಕವಾಗಿ  ಮಹಿಳೆಯರು ಪಾಲ್ಗೊಂಡರೆ ಸಾಲದು ಒಳಗೊಳ್ಳುವಿಕೆಯ ಮೂಲಕ ಉನ್ನತಿ ಸಾಧಿಸಬೇಕು ಮಹಿಳೆಯರಿಗೆ ಇಂದು ಎಲ್ಲಾ ಕ್ಷೇತ್ರದಲ್ಲೂ ಪ್ರಾಧಾನ್ಯತೆ ಸಿಗುತ್ತಿದೆ. ಹೆಣ್ಣುಮಕ್ಕಳು ಮತ್ತಷ್ಟು ಉನ್ನತ ಶಿಕ್ಷಣ ಪಡೆದು ತಮಗಿಷ್ಟವಾದ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಬೇಕೆಂದು  ಸಲಹೆ ನೀಡಿದರು.

 ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕರಾದ ಡಾ.ಬಿ.ಜಿ.ಕಲಾವತಿ ಪ್ರಾಸ್ತಾವಿಕವಾಗಿ ಮಾತನಾಡಿದರು.


 ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯರನ್ನು  ಸನ್ಮಾನಿಸಲಾಯಿತು.

ವಿದ್ಯಾರ್ಥಿನಿಯರಾದ ಶ್ವೇತಾ,ಪೂಜಿತಾ ಹಾಗೂ ಸಂಗಡಿಗರು ಪ್ರಾರ್ಥಿಸಿ, ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು

 ಅಧ್ಯಾಪಕರು, ಸಿಬ್ಬಂದಿವರ್ಗ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ