LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಗಣರಾಜ್ಯೋತ್ಸವ ಹಿನ್ನೆಲೆ ಬೆಂಗಳೂರು ಪೊಲೀಸ್​ ಭದ್ರತೆ, ಈ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ

ಬೆಂಗಳೂರು, ಜನವರಿ 24: ಜನವರಿ 26 ಗಣರಾಜ್ಯೋತ್ಸವ (Republic Day) ಹಿನ್ನೆಲೆಯಲ್ಲಿ ಬೆಂಗಳೂರಿನ (Bengaluru) ಮಾಣಿಕ್ ಷಾ ಪರೇಡ್ ಮೈದಾನದಲ್ಲಿ (Manik Shah Parade Ground) ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜನವರಿ 26ರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ​ ದಯಾನಂದ್ ಮಾತನಾಡಿ, ಈ ಭಾರಿ ಗಣರಾಜ್ಯೋತ್ಸವಕ್ಕೆ ಸಕಲ ತಯಾರಿಯಾಗಿದೆ. ಯಾವುದೇ ಸಮಸ್ಯೆಯಾಗದಂತೆ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.


ಪೊಲೀಸ್​ ಭದ್ರತೆ
8 ಮಂದಿ ಡಿಸಿಪಿ, 17 ಮಂದಿ ಎಸಿಪಿ, 44 ಮಂದಿ ಪಿಐ, 114 ಮಂದಿ ಪಿಎಸ್​​ಐ, 58 ಮಂದಿ ಎಎಸ್ಐ, 80 ಮಂದಿ ಸಿಬ್ಬಂದಿ, 30 ಜನ ಕ್ಯಾಮೆರಾ ಸಿಬ್ಬಂದಿ ಸೇರಿದಂತೆ ಒಟ್ಟು 1051 ಜನ ಅಧಿಕಾರಿಗಳು ಭದ್ರತೆಗೆ ಇರುತ್ತಾರೆ. ಬಂದೋಬಸ್ತ್​​ಗೆ 10 ಕೆಎಸ್​ಆರ್​ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡ ಇರುತ್ತದೆ. ಮೈದಾನದ ಸುತ್ತ 103 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ.

ಪ್ರವೇಶ ದ್ವಾರಗಳ ವಿವರ
ಕಲರ್ ಕೋಡ್​ಗಳ ಮೂಲಕ ಪಾಸ್ ವಿತರಿಸಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಪಿಂಕ್ ಬಣ್ಣದ ಪಾಸ್ ನೀಡಲಾಗುತ್ತದೆ. ವಿಐಪಿ ಪಾಸ್ ಗೇಟ್-2ರ ಮೂಲಕ ಪ್ರವೇಶಿಸಬಹುದಾಗಿದೆ. ಮುಖ್ಯ ಅತಿಥಿಗಳು, ಗಣ್ಯರು ಗೇಟ್-3 ಮೂಲಕ ಪ್ರವೇಶಿಸಬಹುದು. ಗೇಟ್-4ರಲ್ಲಿ ಬಿಳಿ ಪಾಸ್ ನೀಡಲಾಗುತ್ತದೆ, ಇಲ್ಲಿ ಮಾಧ್ಯಮದವರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ