Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧಾರವಾಡದಲ್ಲಿ ಮೌನೇಶ್ವರ ಸ್ವಾಗತ ಕಮಾನು ಉದ್ಘಾಟನೆ 

ಧಾರವಾಡ ಜೂನ್ ,30 : ಇಲ್ಲಿಯ ಕಸಬಾ ಗಲ್ಲಿರುವ ಶ್ರೀ ಮೌನೇಶ್ವರ ದೇವಸ್ಥಾನದ ಎದುರಿನ ರಸ್ತೆಯಲ್ಲಿ 17 ಲಕ್ಷ ರೂಪಾಯಿ ವೆಚ್ಚದಲ್ಲಿ ಮಹಾನಗರ ಪಾಲಿಕೆ ವತಿಯಿಂದ ನಿರ್ಮಿಸಲಾಗಿರುವ ಸ್ವಾಗತ ಕಮಾನನ್ನು ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕರೂ , ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಅರವಿಂದ ಬೆಲ್ಲದ ಅವರು ಉದ್ಘಾಟಿಸಿದರು.
ಪಾಲಿಕೆ ಸದಸ್ಯರಾದ ರಾಮಣ್ಣ ಬಡಿಗೇರ ಅವರು ಮಹಾಪೌರರಾಗಿದ್ದ ಸಂದರ್ಭದಲ್ಲಿ ನೀಡಿದ 12 ಲಕ್ಷ ರೂ. ಹಾಗೂ ಧಾರವಾಡದ ಪಾಲಿಕೆ ಸದಸ್ಯೆ ಶ್ರೀಮತಿ ರತ್ನಾಬಾಯಿ ನಾಜರೆ ಅವರ 5 ಲಕ್ಷ ರೂ.ಗಳ ಅನುದಾನದಲ್ಲಿ ಈ ಸ್ವಾಗತ ಕಮಾನನ್ನು ನಿರ್ಮಿಸಲಾಗಿದೆ. ಸ್ವಾಗತ ಕಮಾನು ಉದ್ಘಾಟಿಸಿ ಮಾತನಾಡಿದ ಶಾಸಕ ಅರವಿಂದ ಬೆಲ್ಲದ ಅವರು," ಶ್ರೀ ಮೌನೇಶ್ವರ ದೇವಸ್ಥಾನದ ಗೋಪುರ ಹಾಗೂ ದೇವಸ್ಥಾನದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ತಮ್ಮ ಶಾಸಕರ ನಿಧಿಯಿಂದ 10 ಲಕ್ಷ ರೂಗಳನ್ನು ಮಂಜೂರು ಮಾಡುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು .
ಮಾಜಿ ಮಹಾ ಪೌರರು ಹಾಗೂ ಹಾಲಿ ಪಾಲಿಕೆ ಸದಸ್ಯರಾದ ರಾಮಣ್ಣ ಬಡಿಗೇರ, ಶ್ರೀ ಮೌನೇಶ್ವರ ಧರ್ಮನಿಧಿ ಸಂಸ್ಥೆಯ ಅಧ್ಯಕ್ಷ ಮಹಾರುದ್ರ ಬಡಿಗೇರ, ಶ್ರೀ ಕಾಳಿಕಾದೇವಿ ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ ನ ಅಧ್ಯಕ್ಷ ಜಿ.ಎಸ್. ಪಟ್ಟಣಕೋಡಿ, ಗಾಯಿತ್ರಿ ಮಾತಾ ಮಹಿಳಾ ಮಂಡಲ ಅಧ್ಯಕ್ಷೆ ಶ್ರೀಮತಿ ಸರೋಜಾ ಬಡಿಗೇರ, ವಿಶ್ವಕರ್ಮ ಸಮಾಜದ ಗಣ್ಯರಾದ  ನಿರಂಜನ ಬಡಿಗೇರ, ಆರ್.ಸಿ.ನೇಗಿನಾಳ, ಸಂತೋಷ ಬಡಿಗೇರ, ವಿ.ಎಮ್ ಕಿಲ್ಲೆದ,ಡಾll ವಿರೂಪಾಕ್ಷ ಬಡಿಗೇರ, ಸಿಪಿ ಮಾಯಾಚಾರಿ, ರಮೇಶ ಬಡಿಗೇರ, ಸೋಮಶೇಖರ ಅರ್ಕಸಾಲಿ , ಶ್ರೀಮತಿ ಶೋಭಾ ಪತ್ತಾರ ಮತ್ತು ವಿಶ್ವಕರ್ಮ ಸಮಾಜದ ಸಂಘ ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು ಮತ್ತು ಹುಬ್ಬಳ್ಳಿ ಮತ್ತು ಧಾರವಾಡ ನಗರದ  ಹಲವಾರು ಗಣ್ಯರು ಪಾಲ್ಗೊಂಡಿದ್ದರು.
.....................................................

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೈಜ ದೇವರ ಕೆಲಸ ಮಾಡುತ್ತಿರುವ ಕ್ರೆಡಿಟ್‌ ಆಕ್ಸೆಸ್ ಇಂಡಿಯಾ ಫೌಂಡೇಶನ್‌ಗ್ರಂಥಾಲಯ ಸಂಘದ ಚಟುವಟಿಕೆ ವಿಸ್ತರಣೆಯಲ್ಲಿ ಒಗ್ಗೂಡಿ ಕಾರ್ಯನಿರ್ವಹಿಸಿನಾಲತವಾಡ ಸಮುದಾಯ ಆಸ್ಪತ್ರೆಯಲ್ಲಿ ಕಿರುಕುಳ ಆರೋಪ: ಹೊರಗುತ್ತಿಗೆ ಸಿಬ್ಬಂದಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನ, ಪ್ರತಿಭಟನೆಮನೆಗಳಿಗೆ ಭೇಟಿ ನೀಡಿ ಎನ್ಯೂಮರೇಷನ್ ನಮೂನೆ ವಿತರಿಸಿದ ಡಿಸಿಕಾರ್ಮಿಕರು ಕೈಜೋಡಿಸಿದರೆ 4 ಲಕ್ಷ ಟನ್ ಕಬ್ಬು ನುರಿಸುವ  ಗುರಿ : ಚನ್ನರಾಜ ಹಟ್ಟಿಹೊಳಿಇಂದಿನಿಂದ ಬೂತ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ಸಂಚಾರ ಸುರಕ್ಷತೆ : ಕ್ರ್ಯಾಶ್ ಬಾರಿಯರ್ ದುರಸ್ತಿಧಾರವಾಡದಲ್ಲಿ ಮೌನೇಶ್ವರ ಸ್ವಾಗತ ಕಮಾನು ಉದ್ಘಾಟನೆ ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ : ಪಿ ಎಸ್ ಇ ರಾಘವೇಂದ್ರ ಖೋತಧರ್ಮದಿಯಾ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಬ್ಯಾಗ್, ಪುಸ್ತಕ ಹಾಗೂ ಕಲಿಕಾ ಕಿಟ್ ವಿತರಣೆ