ಧಾರವಾಡ ಜೂನ್ ,30 : ಇಲ್ಲಿಯ ಕಸಬಾ ಗಲ್ಲಿರುವ ಶ್ರೀ ಮೌನೇಶ್ವರ ದೇವಸ್ಥಾನದ ಎದುರಿನ ರಸ್ತೆಯಲ್ಲಿ 17 ಲಕ್ಷ ರೂಪಾಯಿ ವೆಚ್ಚದಲ್ಲಿ ಮಹಾನಗರ ಪಾಲಿಕೆ ವತಿಯಿಂದ ನಿರ್ಮಿಸಲಾಗಿರುವ ಸ್ವಾಗತ ಕಮಾನನ್ನು ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕರೂ , ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕರೂ ಆದ ಅರವಿಂದ ಬೆಲ್ಲದ ಅವರು ಉದ್ಘಾಟಿಸಿದರು.
ಪಾಲಿಕೆ ಸದಸ್ಯರಾದ ರಾಮಣ್ಣ ಬಡಿಗೇರ ಅವರು ಮಹಾಪೌರರಾಗಿದ್ದ ಸಂದರ್ಭದಲ್ಲಿ ನೀಡಿದ 12 ಲಕ್ಷ ರೂ. ಹಾಗೂ ಧಾರವಾಡದ ಪಾಲಿಕೆ ಸದಸ್ಯೆ ಶ್ರೀಮತಿ ರತ್ನಾಬಾಯಿ ನಾಜರೆ ಅವರ 5 ಲಕ್ಷ ರೂ.ಗಳ ಅನುದಾನದಲ್ಲಿ ಈ ಸ್ವಾಗತ ಕಮಾನನ್ನು ನಿರ್ಮಿಸಲಾಗಿದೆ. ಸ್ವಾಗತ ಕಮಾನು ಉದ್ಘಾಟಿಸಿ ಮಾತನಾಡಿದ ಶಾಸಕ ಅರವಿಂದ ಬೆಲ್ಲದ ಅವರು," ಶ್ರೀ ಮೌನೇಶ್ವರ ದೇವಸ್ಥಾನದ ಗೋಪುರ ಹಾಗೂ ದೇವಸ್ಥಾನದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ತಮ್ಮ ಶಾಸಕರ ನಿಧಿಯಿಂದ 10 ಲಕ್ಷ ರೂಗಳನ್ನು ಮಂಜೂರು ಮಾಡುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು .
ಮಾಜಿ ಮಹಾ ಪೌರರು ಹಾಗೂ ಹಾಲಿ ಪಾಲಿಕೆ ಸದಸ್ಯರಾದ ರಾಮಣ್ಣ ಬಡಿಗೇರ, ಶ್ರೀ ಮೌನೇಶ್ವರ ಧರ್ಮನಿಧಿ ಸಂಸ್ಥೆಯ ಅಧ್ಯಕ್ಷ ಮಹಾರುದ್ರ ಬಡಿಗೇರ, ಶ್ರೀ ಕಾಳಿಕಾದೇವಿ ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ ನ ಅಧ್ಯಕ್ಷ ಜಿ.ಎಸ್. ಪಟ್ಟಣಕೋಡಿ, ಗಾಯಿತ್ರಿ ಮಾತಾ ಮಹಿಳಾ ಮಂಡಲ ಅಧ್ಯಕ್ಷೆ ಶ್ರೀಮತಿ ಸರೋಜಾ ಬಡಿಗೇರ, ವಿಶ್ವಕರ್ಮ ಸಮಾಜದ ಗಣ್ಯರಾದ ನಿರಂಜನ ಬಡಿಗೇರ, ಆರ್.ಸಿ.ನೇಗಿನಾಳ, ಸಂತೋಷ ಬಡಿಗೇರ, ವಿ.ಎಮ್ ಕಿಲ್ಲೆದ,ಡಾll ವಿರೂಪಾಕ್ಷ ಬಡಿಗೇರ, ಸಿಪಿ ಮಾಯಾಚಾರಿ, ರಮೇಶ ಬಡಿಗೇರ, ಸೋಮಶೇಖರ ಅರ್ಕಸಾಲಿ , ಶ್ರೀಮತಿ ಶೋಭಾ ಪತ್ತಾರ ಮತ್ತು ವಿಶ್ವಕರ್ಮ ಸಮಾಜದ ಸಂಘ ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು ಮತ್ತು ಹುಬ್ಬಳ್ಳಿ ಮತ್ತು ಧಾರವಾಡ ನಗರದ ಹಲವಾರು ಗಣ್ಯರು ಪಾಲ್ಗೊಂಡಿದ್ದರು.
.....................................................
