ಬಳ್ಳಾರಿ,ಜೂ.05: ನಗರದ ಮೊಕಾ ರಸ್ತೆಯ ಹರಿಪ್ರಿಯ ನಗರದಲ್ಲಿ ನೂತನವಾಗಿ ಆರಂಭಗೊಂಡಿರುವ ಶ್ರೀರಾಯ ಇಂಟರ್ನ್ಯಾಷನಲ್ ಸ್ಕೂಲ್ (ಲಿಟಲ್ ಆರ್ಟ್ಸ್) ಇಂಗ್ಲಿಷ್ ಮಾಧ್ಯಮ ಶಾಲೆಯನ್ನು ಬಳ್ಳಾರಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಾಲಿ ಶಾಸಕ ಬಿ. ನಾಗೇಂದ್ರವರ ಸಹೋದರ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಬಿ.ವನೆತಕೇಶ್ ಪ್ರಸಾದ್ ಅವರು ಉದ್ಘಾಟಿಸಿದರು.
ಈ ಶಾಲೆಯ ವ್ಯವಸ್ಥಾಪಕರಾದ ಶಿವಲೀಲಾ ಚಂದ್ರಕಾಂತ್ ಅವರ ನೇತೃತ್ವದಲ್ಲಿ ಆರಂಭಗೊಂಡಿರುವ ಈ ಶಾಲೆಯ ಉದ್ಘಾಟನಾ ಸಮಾರಂಭವನ್ನು ನೆರವೇರಿಸಿ ಮಾತನಾಡಿದ ಬಿ.ವೆಂಕಟೇಶ್ ಪ್ರಸಾದ್ ಅವರು, ಹರಿಪ್ರಿಯ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದ ಮಕ್ಕಳಿಗೆ ಈ ಶಾಲೆ ಅತ್ಯಂತ ಅನುಕೂಲಕರವಾಗಿದ್ದು, ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಕೇಂದ್ರವಾಗಿ ಬೆಳೆಯಲಿದೆ ಎಂದು ಹೇಳಿದರು.
ಪ್ಲೇ ಹೋಂನಿಂದ ಯುಕೆಜಿ ವರೆಗೆ ತರಗತಿಗಳನ್ನು ಆರಂಭಿಸಿರುವ ಶಾಲೆಯು ಸುಸಜ್ಜಿತ ಕಟ್ಟಡ, ಮಕ್ಕಳ ಸ್ನೇಹಿ ಹಾಗೂ ತಂಪಾದ ವಾತಾವರಣ ಮತ್ತು ಅನುಭವಿ ಶಿಕ್ಷಕಿಯರನ್ನು ಹೊಂದಿದ್ದು, ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೆ, ಪೋಷಕರು ತಮ್ಮ ಮಕ್ಕಳನ್ನು ಈ ಶಾಲೆಗೆ ಸೇರಿಸಿ ಉತ್ತಮ ಶಿಕ್ಷಣದ ಅವಕಾಶವನ್ನು ಬಳಸಿಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ವ್ಯವಸ್ಥಾಪಕರಾದ ಶಿವಲೀಲಾ ಚಂದ್ರಕಾಂತ್, ಶಿಕ್ಷಕ-ಶಿಕ್ಷಕಿಯರು, ಸಿಬ್ಬಂದಿ ವರ್ಗದವರು ಹಾಗೂ ಗಣ್ಯರು ಉಪಸ್ಥಿತರಿದ್ದರು.