Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುಮಾರೇಶ್ವರ ಆಸ್ಪತ್ರೆಯಲ್ಲಿ ಚೈಲ್ಡ್ ಡೆವಪ್‌ಮೆಂಟ್ ಕ್ಲಿನಿಕ್ ಉದ್ಘಾಟನೆ

ಬಾಗಲಕೋಟೆ:- ಚಿಕ್ಕಮಕ್ಕಳ ಆರೋಗ್ಯಕ್ಕೆ ಆದ್ಯತೆ ನೀಡುವ ದೃಷ್ಟಿಯಿಂದ ಕುಮಾರೇಶ್ವರ ಆಸ್ಪತ್ರೆಯಲ್ಲಿ ಚೈಲ್ಡ್ ಡೆವಪ್‌ಮೆಂಟ್ ಕ್ಲಿನಿಕ್ ಸ್ಥಾಪಿಸಲಾಗಿದೆ. ಈ ಕ್ಲಿನಿಕ್‌ನಲ್ಲಿ ಬೆಳವಣಿಗೆಯ ವಿಳಂಬತೆಯ ಅಪಾಯದಲ್ಲಿರುವ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು. ಇದೊಂದು ವಿಶಿಷ್ಠ ಆರೋಗ್ಯ ಸೇವೆಯಾಗಿದೆ ಎಂದು ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಸಿ.ಚರಂತಿಮಠ ಹೇಳಿದರು.
ನಗರದ ಬಿ.ವಿ.ವಿ ಸಂಘದ ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆಯ ಚಿಕ್ಕಮಕ್ಕಳ ವಿಭಾಗದಲ್ಲಿ ಮಕ್ಕಳ ಬೆಳವಣಿಗೆ ಕ್ಲಿನಿಕ್ (ಚೈಲ್ಡ್ ಡೆವಪ್‌ಮೆಂಟ್ ಕ್ಲಿನಿಕ್) ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳ ಬೆಳವಣಿಗೆಗೆ ಬೇಕಾಗಿರುವ ವಿಶೇ? ಅಭಿವೃದ್ಧಿಯ ಮೇಲ್ವಿಚಾರಣೆ ಮಾಡುವ ಹಾಗೂ ಅವಶ್ಯಕತೆಗಳನ್ನು ನಿರ್ಣಯಿಸುವ ನಿಟ್ಟಿನಲ್ಲಿ ಈ ಕ್ಲಿನಿಕ್ ವಿಶೇಷ ಸೇವೆ ಸಲ್ಲಿಸಲಿದೆ ಎಂದರು.
ಚಿಕ್ಕಮಕ್ಕಳ ತಜ್ಞರು ಹಾಗೂ ಮೆಡಿಕಲ್ ಕಾಲೇಜಿನ ಪ್ರಾಚಾರ್ಯೆ ಡಾ.ಭುವನೇಶ್ವರಿ ಯಳಮಲಿ ಮಾತನಾಡಿ ಮಕ್ಕಳ ಕುಂಠಿತ ಬೆಳವಣಿಗೆ, ಅವಧಿಪೂರ್ವ ಜನಿಸಿದ ಮಗು ಅಥವಾ ಕಡಿಮೆ ತೂಕದ ಶಿಶು, ಜನನದ ವೇಳೆ ತೊಂದರೆಗಳನ್ನು ಅನುಭವಿಸಿದ ಮಗು, ತಡವಾದ ಬೆಳವಣಿಗೆ, ಕಲಿಕೆ ಅಥವಾ ಸಂವಹನದ ಸಮಸ್ಯೆಗಳು, ಹುಟ್ಟಿನಿಂದ ಇರುವ ದೈಹಿಕ ಅಥವಾ ಅಂಗಾಂಗಗಳ ದೋಷಗಳು, ಮಗುವಿನಲ್ಲಿನ ಅನುವಂಶಿಕ ಕಾಯಿಲೆಗಳು, ದೀರ್ಘಕಾಲೀನ ಕಾಯಿಲೆಗಳು, ಮಾತು ಅಥವಾ ಭಾ? ವಿಳಂಬ, ಆಟಿಸಮ್ ಅಥವಾ ಇತರ ಮೆದುಳಿನ ಬೆಳವಣಿಗೆಯ ಸiಸ್ಯೆಗಳನ್ನು ಹೊಂದಿರುವ ಮಕ್ಕಳಿಗೆ ಈ ಕ್ಲಿನಿಕ್‌ನಲ್ಲಿ ಉಪಯುಕ್ತ ಮತ್ತು ಪರಿಣಾಮಕಾರಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಹೇಳಿದರು. ಚಿಕ್ಕಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಅಶೋಕ ಬಡಕಲಿ ಈ ಕೇಂದ್ರದಲ್ಲಿ ಮಕ್ಕಳ ತಜ್ಞರು ಹಾಗೂ ಮೆದುಳಿನ ಬೆಳವಣಿಗೆ ಮೌಲ್ಯಮಾಪಕರು, ಮಕ್ಕಳ ನರರೋಗ ತಜ್ಞರು, ಮನೋವೈದ್ಯರು, ಭಾಷಾ ಮತ್ತು ಸಂವಹನ ತಜ್ಞರು, ಶಾರೀರಿಕ ಚಿಕಿತ್ಸಾ ತಜ್ಞರು ಹಾಗೂ ಮೆದುಳಿನ ಮೌಲ್ಯಮಾಪಕರು, ಮನಃಶಾಸ್ತ್ರಜ್ಞರು, ವೃತ್ತಿಪರ ಚಿಕಿತ್ಸಾ ತಜ್ಞರು ಲಭ್ಯವಿರುವರು ಹಾಗೂ ಅತ್ಯಾಧುನಿಕ ಉಪಕರಣಗಳು ಲಭ್ಯವಿವೆ. ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಬಿ.ವಿ.ವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಮ್.ಸಜ್ಜನ (ಬೇವೂರ), ಬೆಂಗಳೂರಿನ ಚಿಕ್ಕಮಕ್ಕಳ ನರರೋಗತಜ್ಞ ಡಾ.ಸುರೇಶ್ ರಾವ್ ಅರೂರ್, ಕರ್ನಾಟಕ ಅಕಾಡೆಮಿ ಆಫ್ ಪಿಡಿಯಾಟ್ರಿಕ್ ನ್ಯೂರಾಲಜಿಯ ಅಧ್ಯಕ್ಷ ಡಾ.ಸಿ.ಪಿ.ರವಿಕುಮಾರ, ಪ್ರಾಚಾರ್ಯರಾದ ಡಾ.ಭುವನೇಶ್ವರಿ ಯಳಮಲಿ, ವೈದ್ಯಕೀಯ ಅಧೀಕ್ಷಕ ಡಾ.ಶ್ರೀರಾಮ ಕೋರಾ, ಚಿಕ್ಕಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಅಶೋಕ ಬಡಕಲಿ, ಚಿಕ್ಕಮಕ್ಕಳ ತಜ್ಞರಾದ ಡಾ.ರಮೇಶ್ ಪೋಳ, ಡಾ.ತಳವಾರ, ಡಾ.ವನಕಿ, ಡಾ.ಪಲ್ಲವಿ ಚರಂತಿಮಠ, ಡಾ.ಅನಿತಾ, ಡಾ.ಮಿರ್ಜಿ, ಡಾ.ಮನೋಜ, ವಿವಿಧ ವಿಭಾಗಗಳ ಮುಖ್ಯಸ್ಥರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪೋಟೋ ೦೧ ಕುಮಾರೇಶ್ವರ ಆಸ್ಪತ್ರೆಯಲ್ಲಿ ಚೈಲ್ಡ್ ಡೆವಪ್‌ಮೆಂಟ್ ಕ್ಲಿನಿಕ್ ಉದ್ಘಾಟನೆ

---೦೦೦---
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ