ಮೂಡಲಗಿ: ಪಟ್ಟಣದ ’ಉತ್ಸವ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿ’ಯ ನೂತನ ಸಂಸ್ಥೆಯ ಉದ್ಘಾಟನಾ ಸಮಾರಂಭವು ಆ.೧೪ರಂದು ಬೆಳಿಗ್ಗೆ ೧೦.೦೫ ಗಂಟೆಗೆ ಶ್ರೀ ಮಹಾಲಕ್ಷ್ಮಿ ಹಾಗೂ ಮಹಾಸರಸ್ವತಿ ಪೂಜೆಯೊಂದಿಗೆ ಜರುಗಲಿದೆ.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮೂಡಲಗಿಯ ಸಿದ್ದ ಸಂಸ್ಥಾನ ಮಠದ ಶ್ರೀ ಶ್ರೀ ದತ್ತಾತ್ರೇಯಬೋಧ ಸ್ವಾಮೀಜಿಗಳು ಹಾಗೂ ಸುಣದೋಳಿ ಶ್ರೀ ಜಡಿಸಿದ್ದೇಶ್ವರ ಮಠದ ಶ್ರೀ ಮ.ನಿ.ಪ್ರ. ಶ್ರೀ ಶಿವಾನಂದ ಮಹಾಸ್ವಾಮಿಗಳು ವಹಿಸಲಿದ್ದಾರೆ. ಅರಭಾವಿ ವಿಧಾನಸಭಾ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಉದ್ಘಾಟನೆ ನೆರವೇರಿಸಲಿದ್ದು, ಸೊಸೈಟಿ ಅಧ್ಯಕ್ಷ ಮುತ್ತಪ್ಪ ಬಿರನಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಲೆಕ್ಕಪರಿಶೋಧಕ ಸೈದಪ್ಪ ಗದಾಡಿ ಸೇರಿದಂತೆ ಗಣ್ಯರು, ಸಹಕಾರ ಕ್ಷೇತ್ರದ ಪ್ರಮುಖರು, ಸೊಸೈಟಿಯ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.ಎಂದು ಸೊಸೈಟಿಯ ಉಪಾಧ್ಯಕ್ಷ ಹಣಮಂತ ಕಂಕಣವಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.