Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೋಮಸಮುದ್ರದಲ್ಲಿ ಅಗರಬತ್ತಿ ತಯಾರಿಕೆ ಶಿಬಿರ

ಬಳ್ಳಾರಿ, ಮೇ.31: :ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿ 11 ದಿನ ಅಗರಬತ್ತಿ ತರಬೇತಿ ಪಡೆದ ಶಿಬಿರಾರ್ಥಿಗಳಿಂದ ಅಗರಬತ್ತಿ ಮೇಳ ಹಾಗೂ ಮಹಿಳಾ ಋತುಚಕ್ರ ಜಾಗೃತಿ ಕಾರ್ಯಕ್ರಮ ನಿನ್ನೆ ನಡೆಯಿತು.
ಎನ್.ಆರ್.ಎಲ್.ಎಮ್ ಯೋಜನೆ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಸಂಸ್ಥೆಯ ಶ್ರೀ ಕೊಟ್ಟೂರೇಶ್ವರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಹಾಗೂ ಕೆನರಾ ಬ್ಯಾಂಕ್ ಆರ್ಸೆಟಿ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ಇದನ್ನು ಆಯೋಜಿಸಲಾಗಿತ್ತು.
ಈ ವೇಳೆ ಮಾತನಾಡಿದ ಕುರುಗೋಡು ತಾಲೂಕು ಪಂಚಾಯ್ತಿ ಇಓ ಕೆ.ವಿ.ನಿರ್ಮಲ ಸ್ವಾವಲಂಬಿ ಬದುಕಿಗೆ ಸಾಲ ಸೌಲಭ್ಯಗಳ ಬಳಕೆ ಕುರಿತು ತಿಳಿಸಿದರು
ತರಬೇತಿ ಪಡೆದ ಶಿಬಿರಾರ್ಥಿಗಳು ಸಿದ್ಧಪಡಿಸಿದ ಅಗರಬತ್ತಿಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ವೀಕ್ಷಿಸಿ ತೀವ್ರ ಸಂತಸ ವ್ಯಕ್ತಪಡಿಸಿದರು. ಸ್ವತಃ ತಾವೇ ಅಗರಬತ್ತಿಗಳನ್ನು ಖರೀದಿಸುವ ಮೂಲಕ ಮಹಿಳೆಯರನ್ನು ಪ್ರೋತ್ಸಾಹಿಸಿದರು
"ಸ್ವಸಹಾಯ ಸಂಘಗಳ ಮಹಿಳೆಯರು ಮುಂದಿನ ದಿನಗಳಲ್ಲಿ ಕೇವಲ ತರಬೇತಿಗೆ ಸೀಮಿತವಾಗದೆ, ಎನ್.ಆರ್ ಎಲ್ ಎಂ ಯೋಜನೆಯಡಿ ಸಿಗುವ ಸಾಲ ಸೌಲಭ್ಯಗಳು ಹಾಗೂ ಎಂಪಿಇಜಿಪಿ ಯೋಜನೆಯಡಿ ಸಾಲ ಪಡೆದು ಸ್ವಂತ ಅಗರಬತ್ತಿ ಉದ್ಯಮವನ್ನು ಆರಂಭಿಸಿ ದೊಡ್ಡ ಉದ್ಯಮಿಗಳಾಗಿ ಬೆಳೆಯಬೇಕು ಎಂದರು
ಋತುಚಕ್ರದ ಸಮಯದಲ್ಲಿ ಮಹಿಳೆಯರು ವೈಯಕ್ತಿಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಬಳಸಿದ ಪ್ಯಾಡ್ಗಳನ್ನು ಎಲ್ಲೆಂದರಲ್ಲಿ ಬಿಸಾಡದೆ, ಸ್ವಚ್ಛತಾ ವಾಹನಗಳಿಗೆ ನೀಡಬೇಕು ಅಥವಾ ಶಾಲಾ ಮಟ್ಟದಲ್ಲಿರುವ ಬರ್ನಿಂಗ್ ಮಿಷನ್ ಬಳಸಿ ಸುಟ್ಟು ವಿಲೇವಾರಿ ಮಾಡಬೇಕು ಎಂದು ಜಾಗೃತಿ ಮೂಡಿಸಿದರು.
ಈ ವೇಳೆ ಗ್ರಾಪಂ ಕಾರ್ಯದರ್ಶಿ ಗೋವಿಂದಪ್ಪ,
ಉಪನ್ಯಾಸಕ ದಿನೇಶ್, ಕರವಸೂಲಿಗಾರ ಹೊನ್ನೂರಸ್ವಾಮಿ, ಹೆಚ್. ಅಡಿವೆಪ್ಪ, ಆಶಾ ಕಾರ್ಯಕರ್ತೆಯರು ಹಾಗೂ ತರಬೇತಿ ಪಡೆದ ಮಹಿಳಾ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ