Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಲ್ಲರನ್ನೊಳಗೊಂಡ ಅಭಿವೃದ್ಧಿ ನಮ್ಮ ಗುರಿ – ರಕ್ಷಾ ರಾಮಯ್ಯ

ಚಿಕ್ಕಬಳ್ಳಾಪುರ ಕ್ಷೇತ್ರದ ವಿವಿಧೆಡೆ ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿ

ಚಿಕ್ಕಬಳ್ಳಾಪುರ, ಏ, 11; ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಕ್ಷೇತ್ರದ ವಿವಿಧ ಭಾಗಗಳಲ್ಲಿ ಪ್ರೀತಿ ಶಾಂತಿ ಸೌಹಾರ್ದತೆಯ ಸಂಕೇತವಾದ ಈದ್ ಉಲ್ ಫಿತರ್ ನಲ್ಲಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು.

ಮುಸ್ಲೀಂ ಬಾಂಧವರ ಜೊತೆ ರಂಜಾನ್ ಹಬ್ಬದ ಶುಭಾಶಯಗಳನ್ನು ವಿನಿಯಮ ಮಾಡಿಕೊಂಡರು. ಸಣ್ಣ ಮಕ್ಕಳು, ಹಿರಿಯ ನಾಗರಿಕರು ಒಳಗೊಂಡಂತೆ ಎಲ್ಲಾ ವಯೋಮಾನದವರ ಜೊತೆ ಹಬ್ಬದ ಸಂಭ್ರಮದಲ್ಲಿ ಭಾಗಿಯಾದರು. ತಮ್ಮ ಭಾಗದ ಸಮಸ್ಯೆಗಳ ಕುರಿತಂತೆಯೂ ಮುಸ್ಲೀಂ ಸಮುದಾಯ ರಕ್ಷಾ ರಾಮಯ್ಯ ಅವರ ಜೊತೆ ಇದೇ ಸಂದರ್ಭದಲ್ಲಿ ವಿಚಾರ ವಿನಿಮಯ ನಡೆಸಿತು.

ಬೆಳಿಗ್ಗೆ ಬಾಗೇಪಲ್ಲಿಯ ಜಾಮೀಯಾ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.



ಬಳಿಕ ಚಿಕ್ಕಬಳ್ಳಾಪುರದ ಬಿಬಿ ರಸ್ತೆಯ ಮಸ್ಜೀದ್ ಇ ಹುಸೇನಿಯಾ ಮೈದಾನದಲ್ಲಿ ಮುಸ್ಲೀಂ ಸಮುದಾಯದ ಜೊತೆ ರಂಜಾನ್ ಪ್ರಾರ್ಥನೆಯಲ್ಲಿ ಭಾಗಿಯಾದರು.

ವಿಜಯಪುರದ ಈದ್ಗಾ ಮೈದಾನದಲ್ಲಿ ಈದ್ ಉಲ್ ಫಿತರ್ ಸಂಭ್ರಮದಲ್ಲಿ ರಕ್ಷಾ ರಾಮಯ್ಯ ಭಾಗಿಯಾದರು.

ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಾ ರಾಮಯ್ಯ, ಎಲ್ಲರನ್ನೊಳಗೊಂಡ ಅಭಿವೃದ್ಧಿ ನಮ್ಮ ಗುರಿಯಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ಎಲ್ಲಾ ಜಾತಿ, ಧರ್ಮ, ಸಮುದಾಯದವರನ್ನು ಒಟ್ಟಿಗೆ ಕರೆದೊಯ್ಯುತ್ತೇವೆ. ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಅಭಿವೃದ್ಧಿ ಯಾನದಲ್ಲಿ ಪ್ರತಿಯೊಬ್ಬರು ಒಳಗೊಳ್ಳಬೇಕು ಎಂಬುದೇ ನಮ್ಮ ಗುರಿಯಾಗಿದೆ. ಯುಗಾದಿ ನಂತರ ರಂಜಾನ್ ಸಂಭ್ರಮ ಎಲ್ಲೆಡೆ ಕಂಡು ಬಂದಿದ್ದು, ಹಬ್ಬಗಳು ಕೋಮು ಸಾಮರಸ್ಯೆಕ್ಕೆ ಪೂರಕವಾಗಿವೆ. ಯಾವುದೇ ಧರ್ಮದ ನಡುವೆ ತಾರತಮ್ಯವಿಲ್ಲ ಎಂದರು.

ಬಿಜೆಪಿಯಿಂದ ತೆಲುಗು ಚಿತ್ರನಟ ಪವನ್ ಕಲ್ಯಾಣ್ ಪ್ರಚಾರಕ್ಕೆ ಆಗಮಿಸುತ್ತಿರುವ ಕುರಿತು ಕೇಳಲಾದ ಪ್ರಶ್ನೆಗೆ, ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು, ಶಾಸಕರು, ಮುಖಂಡರು ನಮಗೆ ತಾರಾ ಪ್ರಚಾರಕರಾಗಿದ್ದಾರೆ. ಅವರಿಗೆ ಚುನಾವಣೆಯಲ್ಲಿ ಯಾವುದೇ ವಿಷಯಗಳಿಲ್ಲ. ಹೀಗಾಗಿ ನಟ – ನಟಿಯರನ್ನು ಕರೆದು ತರುತ್ತಿದ್ದಾರೆ. ನಮ್ಮ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ನೀಡಿರುವ ಕಾರ್ಯಕ್ರಮಗಳೇ ನಮಗೆ ಶ್ರೀರಕ್ಷೆಯಾಗಿದೆ ಎಂದರು.

ನಮ್ಮ ಪಕ್ಷದ ಶಾಸಕರು, ಮುಖಂಡರು ಪಕ್ಷದ ಪರವಾಗಿ ಅವಿತರವಾಗಿ ಪ್ರಚಾರದಲ್ಲಿ ನಿರತರಾಗಿದ್ದಾರೆ. ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಪಕ್ಷದ ಗೆಲುವಿಗಾಗಿ ಕ್ಷೇತ್ರದಾದ್ಯಂತ ಪ್ರಚಾರ ಮಾಡುತ್ತಿದ್ದಾರೆ. ಗೌರಿಬಿದನೂರಿನಲ್ಲಿ ಮಾಜಿ ಸಚಿವರಾದ ಎಚ್.ಎನ್. ಶಿವಶಂಕರ ರೆಡ್ಡಿ ಮತ್ತು ಹಾಲಿ ಶಾಸಕರಾದ ಎಚ್.ಕೆ. ಪುಟ್ಟಸ್ವಾಮಿ ಗೌಡ ಅವರು ಸಹ ಪ್ರಚಾರದಲ್ಲಿ ನಿರತರಾಗಿದ್ದು, ನಾವು ನೂರಕ್ಕೆ ನೂರರಷ್ಟು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸುತ್ತೇವೆ ಎಂದು ರಕ್ಷಾ ರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ರಕ್ಷಾ ರಾಮಯ್ಯ ಅವರು ಚಿಕ್ಕಬಳ್ಳಾಪುರದ ಹಾರೋಬಂಡೆಯಲ್ಲಿರುವ ಶ್ರೀ ಶಿರಡಿ ಸಾಯಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ದೇವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್, ಹಲವು ಗಣ್ಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ