LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಅಂಗಡಿ ಮಳಿಗೆಗಳಿಂದ ಪ್ರಯಾಣಿಕರಿಗೆ ಅನಾನುಕೂಲ: ತೆರವುಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಕಿತ್ತೂರಿನ ಹಳೆ ಬಸ್ ನಿಲ್ದಾಣವೇ ವ್ಯಾಪಾರ ಕೇಂದ್ರವಾಯಿತೇ?

 

 

 

ಚನ್ನಮ್ಮನ ಕಿತ್ತೂರು: ಐತಿಹಾಸಿಕ ಚನ್ನಮ್ಮನ ಕಿತ್ತೂರು ಪಟ್ಟಣದ ಹಳೆ ಬಸ್ ನಿಲ್ದಾಣವು ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಾಣಗೊಂಡಿದ್ದರೂ, ಇದೀಗ ಬಸ್ ನಿಲ್ದಾಣದ ಜಾಗವೇ ವ್ಯಾಪಾರ ಕೇಂದ್ರವಾಗಿ ಮಾರ್ಪಟ್ಟಿರುವ ಆರೋಪ ಕೇಳಿಬಂದಿದೆ. ಇದರಿಂದ ಗ್ರಾಮೀಣ ಭಾಗಗಳಿಂದ ಪಟ್ಟಣಕ್ಕೆ ಆಗಮಿಸುವ ಪ್ರಯಾಣಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ವಯೋವೃದ್ಧರು ತೀವ್ರ ಅನಾನುಕೂಲ ಅನುಭವಿಸುವಂತಾಗಿದೆ.

ಕಿತ್ತೂರು ಪಟ್ಟಣದಲ್ಲಿ 1984ರಲ್ಲಿ ಸಾರ್ವಜನಿಕರ ದೇಣಿಗೆ ಹಾಗೂ ಸರ್ಕಾರದ ಸಹಯೋಗದಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಹಳೆ ಬಸ್ ನಿಲ್ದಾಣ ನಿರ್ಮಿಸಲಾಗಿತ್ತು. ಹಲವು ವರ್ಷಗಳ ಕಾಲ ಸಾರ್ವಜನಿಕರು ಹಾಗೂ ಪ್ರಯಾಣಿಕರು ಇದರ ಸೌಲಭ್ಯವನ್ನು ಬಳಸಿಕೊಂಡು ಬಂದಿದ್ದರು. ಆದರೆ ಕಾಲಕ್ರಮೇಣ ಬಸ್ ನಿಲ್ದಾಣದ ಜಾಗದಲ್ಲಿ ಅಂಗಡಿ ಮಳಿಗೆಗಳು ಹೆಚ್ಚಾಗಿದ್ದು, ಮೂಲ ಉದ್ದೇಶವೇ ಮರೆತುಹೋಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಗ್ರಾಮ ಪಂಚಾಯಿತಿ ಅವಧಿಯಿಂದಲೇ ಅಧಿಕಾರದ ದುರುಪಯೋಗದ ಮೂಲಕ ಬಸ್ ನಿಲ್ದಾಣದ ಜಾಗವನ್ನು ವ್ಯಾಪಾರಿಕ ಉದ್ದೇಶಕ್ಕೆ ಬಳಸಿಕೊಳ್ಳಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಕುರಿತು ವಿವಿಧ ಪತ್ರಿಕೆಗಳಲ್ಲಿ ಹಲವು ಬಾರಿ ವರದಿಗಳು ಪ್ರಕಟವಾದರೂ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ ಎಂಬ ಅಸಮಾಧಾನ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ಬಸ್ ನಿಲ್ದಾಣದ ಸಮಸ್ಯೆ ಕುರಿತು ಕೆಎಸ್ಆರ್ಟಿಸಿ ಅಧಿಕಾರಿಗಳು, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಕೂಡಲೇ ಗಮನಹರಿಸಿ, ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಹಳೆ ಬಸ್ ನಿಲ್ದಾಣದ ವ್ಯವಸ್ಥೆಯನ್ನು ಪುನಃ ಕಲ್ಪಿಸಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ತಾಲೂಕು ಘಟಕ ಹಾಗೂ ಕಿತ್ತೂರು ಪಟ್ಟಣದ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಉಗ್ರ ಹೋರಾಟದ ಎಚ್ಚರಿಕೆ ಹಳೆ ಬಸ್ ನಿಲ್ದಾಣದಲ್ಲಿರುವ ಅಂಗಡಿ ಮಳಿಗೆಗಳನ್ನು ತೆರವುಗೊಳಿಸಿ, ಬಸ್ ನಿಲ್ದಾಣದ ಮೂಲ ಉದ್ದೇಶವನ್ನು ಮರುಸ್ಥಾಪಿಸದಿದ್ದರೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ತಾಲೂಕು ಘಟಕದ ನೇತೃತ್ವದಲ್ಲಿ ಸಾರ್ವಜನಿಕರು ಹಾಗೂ ಗ್ರಾಮೀಣ ಭಾಗದ ನಾಗರಿಕರನ್ನು ಒಳಗೊಂಡು ಉಗ್ರ ಹೋರಾಟ ನಡೆಸಲಾಗುವುದು ಎಂದು ಸಂಘ ಎಚ್ಚರಿಕೆ ನೀಡಿದೆ.

ಹೋರಾಟದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ಅಥವಾ ಸಾರ್ವಜನಿಕರಿಗೆ ತೊಂದರೆ ಉಂಟಾದರೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆಗಾರರಾಗಬೇಕಾಗುತ್ತದೆ ಎಂದು ಸಂಘ ತಿಳಿಸಿದೆ.

ಸಾರ್ವಜನಿಕರಿಗಾಗಿ ನಿರ್ಮಿಸಿದ ಬಸ್ ನಿಲ್ದಾಣ ಸಾರ್ವಜನಿಕರಿಗೇ ಸಿಗಬೇಕು. ವ್ಯಾಪಾರ ಕೇಂದ್ರವಾಗಿ ಮಾರ್ಪಟ್ಟಿರುವ ವ್ಯವಸ್ಥೆಯನ್ನು ಕೂಡಲೇ ಸರಿಪಡಿಸಿ, ಪ್ರಯಾಣಿಕರಿಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕುಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪಟ್ಟಣ ಪಂಚಾಯಿತಿ, ಕೆಎಸ್ಆರ್ಟಿಸಿ ಹಾಗೂ ಸಂಬಂಧಪಟ್ಟ ಇಲಾಖೆಗಳು ಇನ್ನಾದರೂ ಎಚ್ಚೆತ್ತುಕೊಂಡು ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವರೇ ಎಂಬುದನ್ನು ಕಾದು ನೋಡಬೇಕಿದೆ.

ವೇಳೆ ರಾಜ್ಯ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಪ್ರವೀಣ ಸರದಾರ, ಸತೀಶ ಲಂಗೋಟಿ, ಚನ್ನಬಸ್ಯಯ್ಯ ಹಿರೇಮಠ, ಚನ್ನಯ್ಯ ಹಾಲಮಠ, ಹೊಂಡಪ್ಪ ಶಿವಪೂಜಿ, ಮುದಕಪ್ಪ ಹತ್ತಿಕಟಗಿ, ಮಾರುತಿ ಕಲ್ಲವಡ್ಡರ, ರಮೇಶಸಂಪಗಾವಿ, ಸುರೇಶ ಕಡಕೋಳ, ಬಸವರಾಜ ಕಮ್ಮಾರ,  ಬಸಯ್ಯ ಕೇರಿಮಠ,  ಸೋಮು ತೇಗೂರ, ಶಿವಾನಂದ ತೇಗೂರ, ರಾಜು ಹೊಸಮನಿಸೇರಿದಂತೆ ಇತರರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
"ಪರಿಪೂರ್ಣ ಹಾಗೂ ಪರಿಪಕ್ವವಾದ ವ್ಯಕ್ತಿತ್ವ ನಿರ್ಮಾಣವೇ ಶಿಕ್ಷಣದ ಉದ್ದೇಶ"ರಫ್ತು ಉದ್ಯಮಕ್ಕೆ ಬೆಳಗಾವಿಯಲ್ಲಿ ಉತ್ತಮ ಅವಕಾಶ: ಸ್ವಪ್ನಿಲ್ ಶಹಅಪಘಾತ: ಬೈಕ್‌ ಸವಾರ ಸಾವುವಿಜಯಪುರ ಜಿಲ್ಲೆಗೆ 371ಜೆ ಮೀಸಲಾತಿಗೆ ಆಗ್ರಹಿಸಿ ಇಂಡಿ ಶಾಸಕ ಯಶವಂತರಾಯಗೌಡರಿಗೆ ಹೋರಾಟ ಸಮಿತಿಯಿಂದ ಮನವಿಕಾಲುವೆಗೆ ನೀರು ಹರಿಸಿ, ಬೆಳೆ ಉಳಿಸಿ: ಅಧಿಕಾರಿಗಳ ವಿರುದ್ಧ ಚವನಭಾವಿ ರೈತರ ಆಕ್ರೋಶಗಣೇಶ ಹಬ್ಬದಲ್ಲಿ ಮಿತಿ ಮೀರಿದ ಧ್ವನಿವರ್ಧಕಗಳನ್ನು (ಡಿಜೆ ಸೌಂಡ್ ಸಿಸ್ಟಮ್) ಬಳಸಿದರೆ, 1 ಲಕ್ಷ ರೂಪಾಯಿ ದಂಡ; ಪಿಓಪಿ ಗಣೇಶ ವಿಗ್ರಹ ಬಳಕೆ ಸಂಪೂರ್ಣ ನಿಷೇಧ: ಜಿಲ್ಲಾಧಿಕಾರಿ ಸ್ನೇಹಲ್ ಆರ್.ಅಂಗಡಿ ಮಳಿಗೆಗಳಿಂದ ಪ್ರಯಾಣಿಕರಿಗೆ ಅನಾನುಕೂಲ: ತೆರವುಗೊಳಿಸುವಂತೆ ಸಾರ್ವಜನಿಕರ ಆಗ್ರಹಸಂಘಗಳ ಸ್ಥಾಪನೆಗೆ ಸದಸ್ಯತ್ವ ನೊಂದಣಿ ಆರಂಭಎಸ್‌ಜಿಎಮ್‌ಎಚ್‌ಪಿ ಶಾಲೆಯಲ್ಲಿ ವೈಭವದ ೮೦ನೇ ಸ್ವಾತಂತ್ರ್ಯೋತ್ಸವಶರಣರ ಧರ್ಮನಿಷ್ಠೆ ಚಿಂತನೆಗಳು ಬಧುಕಿಗೆ ಪೂರಕ-ಪರಶುರಾಮ