Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು

ಇಸ್ಲಾಮಾಬಾದ್ (ಪಾಕಿಸ್ತಾನ): ವಿದ್ಯುತ್ ದರ ಇಳಿಕೆ, ಹಿಟ್ಟಿನ ಚೀಲಗಳ ಸಬ್ಸಿಡಿ ಬೆಲೆ ಏರಿಕೆ ಮತ್ತು ಸರ್ಕಾರಿ ಅಧಿಕಾರಿಗಳಿಗೆ ಸವಲತ್ತುಗಳ ಮೇಲಿನ ಕಡಿತದ ಬೇಡಿಕೆಗಳ ಮೇಲೆ ಕಾರ್ಯನಿರ್ವಹಿಸಬೇಕು ಎಂದು ಒತ್ತಾಯಿಸಿ ಮತ್ತೆ ಹೋರಾಟ ನಡೆದಿದೆ. ಸಾರ್ವಜನಿಕ ಕ್ರಿಯಾ ಸಮಿತಿಯ (ಪಿಎಸಿ) ಸಾವಿರಾರು ಜನರು, ಪಾಕಿಸ್ತಾನ ಸರ್ಕಾರ ಮತ್ತು ಆಜಾದ್ ಜಮ್ಮು ಮತ್ತು ಕಾಶ್ಮೀರದ (ಎಜೆಕೆ) ಶಾಸಕಾಂಗ ಸರ್ಕಾರದ ವಿರುದ್ಧ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಈ ಬೃಹತ್​ ಪ್ರತಿಭಟನಾ ಮೆರವಣಿಗೆ ನಡೆಸಿದರು.


ಸರ್ಕಾರವು ತಾನು ನೀಡಿರುವ ಭರವಸೆಗಳನ್ನು ಪೂರೈಸಬೇಕು ಎಂದು ಆಗ್ರಹಿಸಿದ ಹಲವಾರು ಪ್ರತಿಭಟನಾಕಾರರು, ಮೆರವಣಿಗೆಯನ್ನು ಪೂಂಚ್ ಪ್ರದೇಶದಿಂದ ಪ್ರಾರಂಭಿಸಿದರು. ಕೋಟ್ಲಿ ಮಾರ್ಗವಾಗಿ ವಿವಿಧ ಪ್ರದೇಶಗಳಲ್ಲಿ ಹಾದು ಹೋದಂತೆ ದೊಡ್ಡದಾಗಿ ಬೆಳೆಯುತ್ತಾ ಸಾಗಿತು. ಜೊತೆಗೆ ದಾರಿ ಮಧ್ಯದಲ್ಲೇ ಅನೇಕ ಜನರು ಮೆರವಣಿಗೆಯಲ್ಲಿ ಸೇರಿಕೊಂಡು ಪಾಕ್​ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಷ್ಟೇ ಅಲ್ಲ ಸ್ವಾತಂತ್ರ್ಯದ ಪರ ಘೋಷಣೆಗಳನ್ನು ಕೂಗಿದರು.


"ಕಳೆದ ಬಾರಿ ನಾವು ಪ್ರತಿಭಟಿಸಿದಾಗ ಸರ್ಕಾರವು ನಮ್ಮೊಂದಿಗೆ ಒಪ್ಪಂದ ಮಾಡಿಕೊಂಡಿತ್ತು. ಅವರು ವಿದ್ಯುತ್ ದರ ಕಡಿತ ಮಾಡುವುದಾಗಿ ಹೇಳಿ ಭರವಸೆ ನೀಡಿದ್ದರು. ಆದರೆ, ಅದೆಲ್ಲವೂ ಸುಳ್ಳು ಮತ್ತು ವಂಚನೆಯಾಗಿದೆ. ಏಕೆಂದರೆ, ಎಲ್ಲ ಕಾಶ್ಮೀರಿಗಳು ಈ ತಿಂಗಳು ತಮ್ಮ ವಿದ್ಯುತ್‌ನಲ್ಲಿ ಅದೇ ಹೆಚ್ಚಿನ ಯೂನಿಟ್ ದರಗಳೊಂದಿಗೆ ತಮ್ಮ ಬಿಲ್‌ಗಳನ್ನು ಸ್ವೀಕರಿಸಿದ್ದಾರೆ'' ಎಂದು ಪಾಲಂದ್ರಿಯ ಪ್ರತಿಭಟನಾಕಾರರೊಬ್ಬರು ತಮ್ಮ ಅಳಲು ತೋಡಿಕೊಂಡರಲ್ಲದೇ ಸರ್ಕಾರದ ವಿರುದ್ಧ ಭಾರಿ ಆಕ್ರೋಶ ವ್ಯಕ್ತಪಡಿಸಿದರು.


"ನಮ್ಮ ನಾಯಕರು ಮತ್ತು ಬೆಂಬಲಿಗರನ್ನು ಬಂಧಿಸಿದ್ದಾರೆ. ಅವರು ನಮ್ಮ ಕನಿಷ್ಠ 200 ಜನರನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಈ ಆಕ್ರಮಣವನ್ನು ನಾವು ಸಹಿಸುವುದಿಲ್ಲ'' ಎಂದು ಕಿಡಿಕಾರಿದರು. ಬಂಧಿತರಾದ ಅನೇಕ ಜನರಲ್ಲಿ ಅಮಾನ್ ಕಾಶ್ಮೀರಿಯಂತಹ ಪ್ರಭಾವಿ ರಾಷ್ಟ್ರೀಯತಾವಾದಿ ನಾಯಕರು ಸೇರಿದ್ದಾರೆ. ಅಮಾನ್‌ನನ್ನು ಸಹ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಅಮಾನ್​ ಸೇರಿದಂತೆ ಪಾಕ್ ಆಕ್ರಮಿತ ಕಾಶ್ಮೀರದ ವಿವಿಧ ಭಾಗಗಳಿಂದ ನೂರಾರು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.


"ಸರ್ಕಾರದ ವಂಚನೆ ಮತ್ತು ಸುಳ್ಳು ಒಪ್ಪಂದದ ವಿರುದ್ಧ ಅವರು ಧ್ವನಿ ಎತ್ತಿದ್ದರಿಂದ ಅವರು ನಮ್ಮ ಜನರನ್ನು ಬಂಧಿಸಿದ್ದಾರೆ. ಎಲ್ಲಾ ಬಂಧಿತರನ್ನು ಬಿಡುಗಡೆ ಮಾಡುವವರೆಗೆ ಮತ್ತು ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ರಾಜಧಾನಿ ಮುಜಫರಾಬಾದ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ನಡೆಸುತ್ತೇವೆ'' ಎಂದು ಪ್ರತಿಭಟನಾಕಾರರೊಬ್ಬರು ಹೇಳಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ