LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಇಂಡಿ: ಹಿರೇರೂಗಿ ಶಾಲೆಯಲ್ಲಿ ಡಿ. ದೇವರಾಜ ಅರಸು 111ನೇ ಜಯಂತಿ ಆಚರಣೆ

 

ಇಂಡಿ: ಸಾಮಾಜಿಕ ಪರಿವರ್ತನೆಯ ಹರಿಕಾರ ಡಿ.ದೇವರಾಜ ಅರಸುರವರ ದೂರದೃಷ್ಟಿತ್ವ, ಬದ್ಧತೆ ರಾಜ್ಯದ ಅಭಿವೃದ್ಧಿಗೆ ದಾರಿದೀಪವಾಗಿದ್ದು, ಅವರ ಕೊಡುಗೆಗಳು ಸದಾ  ಪ್ರೇರಣಾದಯಕವಾಗಿವೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

         ಗುರುವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಡಿ.ದೇವರಾಜ ಅರಸು ಅವರ 111ನೇ ಜಯಂತಿ ಆಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

         ನಮ್ಮ ನಾಡಿನ ಸಾಮಾಜಿಕ, ಶಿಕ್ಷಣ, ಆರ್ಥಿಕ ಕ್ಷೇತ್ರದಲ್ಲಿ ಪರಿವರ್ತನೆ ತಂದ ಅರಸು ಅವರು ದುರ್ಬಲ ವರ್ಗದವರಲ್ಲಿ ಸ್ವಾಭಿಮಾನದ ಕಲ್ಪನೆ ಹುಟ್ಟಿಸಿ ಅವರಿಗೆ ಆರ್ಥಿಕ ಸ್ವಾವಲಂಬನೆ ಒದಗಿಸಿದ ಯುಗಪುರುಷರಾಗಿದ್ದಾರೆ ಎಂದು ಹೇಳಿದರು.

      ಸರಳ, ನೇರ, ನಿರ್ಭೀತ ಆಡಳಿತಕ್ಕೆ ಹೆಸರಾದ ಅರಸು ಅವರು ಜನಸಾಮಾನ್ಯರ ಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ. ಹಿಂದುಳಿದ ವರ್ಗ, ದಲಿತರ, ಬಡವರ ಮನಸ್ಸಿನಲ್ಲಿ ಅವರು ಚಿರಸ್ಥಾಯಿಯಾಗಿದ್ದಾರೆ ಎಂದು ಹೇಳಿದರು.

         ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಕೆ ಮಕಾನದಾರ ಮಾತನಾಡಿ, ಬಡವರ ಬದುಕಿನಲ್ಲಿ ಹೊಸ ಭರವಸೆ ತಂದ ಅರಸು ಅವರು ಕರ್ನಾಟಕದಲ್ಲಿ ಜನಹಿತ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಧೀಮಂತ ನಾಯಕ ಎಂದು ಹೇಳಿದರು.

       ಶಿಕ್ಷಕರಾದ ಎಸ್ ಎಸ್ ಅರಬ, ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕ ಅಫ್ತಾಬ್ ಮುಲ್ಲಾ ಸೇರಿದಂತೆ ಮಕ್ಕಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿ.ಕೆ. ಹರಿಪ್ರಸಾದ್ ಅವರ ಎಂಎಲ್‌ಸಿ ಸ್ಥಾನ ರದ್ದತಿ ಮಾಡಲಿ(ಎಸ್‌.ಎಲ್‌. ಚನ್ನಬಸವಣ್ಣ ಅವರ ಪುಸ್ತಕ ಲೋಕಾರ್ಪಣೆ ಮತ್ತು ಸನ್ಮಾನ ಸಮಾರಂಭಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆದೇವರಾಜ ಅರಸು ಅವರ ಆದರ್ಶ ಎಲ್ಲರಿಗೂ ಪ್ರೇರಣೆ-ಮಂಗಳೂರ  ಮುರುಘೇಂದ್ರ ಶಿವಯೋಗಿಗಳು ಬಸವ ತತ್ವದಂತೆ ನಡೆದು ನಾಡಿಗೆ ಬೆಳಕಾದವರು ಇಂಡಿ: ಹಿರೇರೂಗಿ ಶಾಲೆಯಲ್ಲಿ ಡಿ. ದೇವರಾಜ ಅರಸು 111ನೇ ಜಯಂತಿ ಆಚರಣೆಇಂಡಿ: ಕಾಳಿಕಾದೇವಿ ಮಂಗಲ ಕಾರ್ಯಾಲಯದಲ್ಲಿ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮಇಂಡಿ: ಕಾಳಿಕಾದೇವಿ ಮಂಗಲ ಕಾರ್ಯಾಲಯದಲ್ಲಿ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮಡಿ. ದೇವರಾಜ ಅರಸು ಅವರ 111ನೇ ಜಯಂತಿ ಕಾರ್ಯಕ್ರಮ / ಉಪನ್ಯಾಸಕ ಸಿದ್ರಾಯ ಕಾಂಬಳೆ  ಅಭಿಮತ ನಶಮುಕ್ತ ಭಾರತ ನಿರ್ಮಾಣಕ್ಕೆ ಯುವಜನತೆಯ ಪಾತ್ರ ಮುಖ್ಯ: ಬಿ.ಕೆ. ಮಂಜುಳಾ ಕರೆಕೋ.ಶಿವಾಪೂರದಿಂದ ಗೊಡಚಿಗೆ ಭಕ್ತರ ಪಾದಯಾತ್ರೆ: ವೀರಭದ್ರೇಶ್ವರನಿಗೆ ವಿಶೇಷ ಪೂಜೆ