Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

5 ರಿಂದ ಪೌರನೌಕರರ ಅನಿರ್ಧಿಷ್ಠಾವಧಿಯ ಮುಷ್ಕರ


ಮುದ್ದೇಬಿಹಾಳ: ತಮ್ಮ 20 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.5 ರಿಂದ ಪೌರನೌಕರರು ಅನಿಷ್ಠಾವಧಿಯ ಮುಷ್ಕರ ನಡೆಸಲಿದ್ದಾರೆ. ಆ ಸಂದರ್ಭ ಆಗುವ ಎಲ್ಲ ಸಮಸ್ಯೆಗಳಿಗೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ. ಇದನ್ನು ತಪ್ಪಿಸಬೇಕಾದರೆ ಪೌರ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಮುದ್ದೇಬಿಹಾಳ ಶಾಖಾ ಕಚೇರಿಯ ಪದಾಧಿಕಾರಿಗಳು, ಸದಸ್ಯರು ಸೋಮವಾರ ಇಲ್ಲಿನ ಪುರಸಭೆ ಮುಖ್ಯಾಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.


ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ನೌಕರರು ಅನೇಕ ಮೂಲಭೂತ ಸೌಕರ್ಯಗಳ ಕೊರತೆಯ ನಡುವೆಯೂ ಜನತೆಗೆ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಲವು ಬಾರಿ ಮನವಿ ಸಲ್ಲಿಸಿದರೂ ಪರಿಗಣಿಸಿಲ್ಲ. ಇದರಿಂದ ಬೇಸತ್ತು ಸಂಘದ ಕೇಂದ್ರ ಕಛೇರಿಯವರು ಮುಷ್ಕರಕ್ಕೆ ಕರೆ ನೀಡಿರುವುದರಿಂದ ನಾವೂ ಸಹಿತ ಅಂದಿನಿಂದ ಮುಷ್ಕರ ಪ್ರಾರಂಭಿಸುತ್ತೇವೆ. ಬೇಡಿಕೆ ಈಡೇರದಿದ್ದರೆ ಹಂತ ಹಂತವಾಗಿ ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಅಂದಿನ ನಮ್ಮ ಹೋರಾಟ ಪ್ರಾರಂಭದಿಂದ ಮುಕ್ತಾಯದವರೆಗೂ ಪುರಸಭೆ ವಹಿಸುವ ಯಾವುದೇ ಕೆಲಸ ಕಾರ್ಯಗಳಲ್ಲಿ ಭಾಗಿಯಾಗುವುದಿಲ್ಲ. ನಮ್ಮೆಲ್ಲ ಚಟುವಟಿಕೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುತ್ತೇವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.


ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಮನವಿ ಸ್ವೀಕರಿಸಿದರು. ಸಂಘದ ಅಧ್ಯಕ್ಷ ಮಹಾಂತೇಶ ಕಟ್ಟಿಮನಿ, ಉಪಾಧ್ಯಕ್ಷ ರಾಮಪ್ಪ ಚಲವಾದಿ, ಕಾರ್ಯದರ್ಶಿ ಶರಣಪ್ಪ ಚಲವಾದಿ, ಖಜಾಂಚಿ ಚನ್ನಪ್ಪ ಮೂಕಿಹಾಳ, ಸಂಘಟನಾ ಕಾರ್ಯದರ್ಶಿ ಉಮೇಶ ದೇವರ, ಜಿಲ್ಲಾ ನಿರ್ದೇಶಕರಾದ ಶ್ರೀ ಮಲ್ಲಿಕಾರ್ಜುನ ಗುನ್ನಾಪುರ, ಎಸ್.ಎಚ್.ಮೂಲಿಮನಿ, ಜಾವೀದ ನಾಯ್ಕೋಡಿ, ಶಿವಪ್ಪ ಬೋಳಿ, ಸಾಬಣ್ಣ ಚಲವಾದಿ, ಸೈಪನಮುಲ್ಕ ಮಾನ್ಯಾಳ, ಸದಸ್ಯರಾದ ಎನ್.ಎಸ್.ಪಾಟೀಲ, ಸಂತೋಷ ಮಠ, ಶಿವಾನಂದ ಗಂಜಿಹಾಳ, ಶಿವಪ್ಪ ಚಲವಾದಿ, ಪ್ರಸನ್ನಕುಮಾರ ಅವಟಿ, ದ್ಯಾಮಣ್ಣ ಭಜಂತ್ರಿ, ತಿಮ್ಮಣ್ಣ ಬಂಡಿವಡ್ಡರ, ಶಿವಪ್ಪ ಜತ್ತಿ, ಯಮನಪ್ಪ ಚಲವಾದಿ, ರಾಜು ಚಲವಾದಿ, ಎಸ್.ಕೆ.ಹುನಗುಂದ, ಶಿವರಾಯ ಚಲವಾದಿ, ಆರ್.ವಿ.ಚೊಳಚಗುಡ್ಡ, ಲಕ್ಕವ್ವ ಕಲ್ಯಾಣಿ, ರೇಣುಕಾ ಚಲವಾದಿ, ಪರುಶರಾಮ ಬಿಜಾಪೂರ, ಅನಸಣ್ಣ ಚಲವಾದಿ, ಮರೆವ್ವ ಚಲವಾದಿ, ಮಲ್ಲವ್ವ ಚಲವಾದಿ ಇನ್ನಿತರರು ಇದ್ದರು.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ