Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತ ಹಾಗೂ ಪಾಕ್‌ನ ಸೇನಾ ಸಂಘರ್ಷ ಮಾತಿನಲ್ಲೇ ಕೊನೆಗಾಣಿಸಿದೆವು: ಟ್ರಂಪ್‌ ಪುನರುಚ್ಛಾರ


ನ್ಯೂಯಾರ್ಕ್​, ಅಮೆರಿಕ: ಪರಮಾಣು ಸಂಘರ್ಷಕ್ಕೆ ತಿರುಗುತ್ತಿದ್ದ ಭಾರತ ಹಾಗೂ ಪಾಕಿಸ್ತಾನದ ನಡುವಿನ ಸೇನಾ ಸಂಘರ್ಷವನ್ನು ನಾವು ಮಾತುಕತೆ ಮೂಲಕ ಕೊನೆಗೊಳಿಸಿದೆವು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟಂಪ್​ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.


ಶುಕ್ರವಾರ ಶ್ವೇತಭವನದಲ್ಲಿ ಅಜೆರ್ಬೈಜಾನ್ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ಮತ್ತು ಅರ್ಮೇನಿಯಾ ಪ್ರಧಾನಿ ನಿಕೋಲ್ ಪಶಿನ್ಯಾನ್ ನಡುವಿನ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಬೆನ್ನಲ್ಲೇ ಮಾತನಾಡಿದ ಟ್ರಂಪ್​, ಭಾರತ-ಪಾಕ್ ಯುದ್ಧದ ವೇಳೆ ಆರು ಜೆಟ್​ಗಳನ್ನು ಹೊಡೆದುರುಳಿಸಲಾಗಿತ್ತು ಎಂದಿದ್ದಾರೆ. ಆದರೆ, ಎರಡೂ ದೇಶಗಳ ಜೆಟ್​ಗಳು​ ನಷ್ಟವಾಗಿದೆಯಾ ಅಥವಾ ಒಂದು ದೇಶದ ಜೆಟ್​ ಮಾತ್ರ ನಾಶವಾಗಿವೆಯಾ ಎಂಬುದರ ಕುರಿತು ಸ್ಪಷ್ಟವಾಗಿ ತಿಳಿಸಿಲ್ಲ. ಈ ಹಿಂದೆ ಕಳೆದ ತಿಂಗಳಲ್ಲಿ ಈ ಕುರಿತು ಹೇಳಿಕೆ ನೀಡಿದ್ದ ಟ್ರಂಪ್,​ ಐದು ಜೆಟ್ ವಿಮಾನಗಳನ್ನು​ ಹೊಡೆದುರುಳಿಸಲಾಗಿತ್ತು ಎಂದು ಹೇಳಿದ್ದರು.


ಟ್ರಂಪ್​ ಹೇಳಿಕೆಯನ್ನು ಈಗಾಗಲೇ ಅಲ್ಲಗಳೆದಿರುವ ಭಾರತ, ವಿಶ್ವವ ಯಾವುದೇ ದೇಶದ ಮಧ್ಯಸ್ಥಿಕೆ ಇಲ್ಲದೇ, ಎರಡು ದೇಶದ ಸೇನಾ ಮುಖ್ಯಸ್ಥರ ಮಾತುಕತೆಯೊಂದಿಗೆ ಕದನ ವಿರಾಮ ಘೋಷಣೆ ಮಾಡಲಾಗಿತ್ತು ಎಂದು ಸ್ಪಷ್ಟಪಡಿಸಿದೆ.


ಅಜೆರ್ಬೈಜಾನ್ ಮತ್ತು ಅರ್ಮೇನಿಯಾ ಇಬ್ಬರು ದೇಶದ ಸಮ್ಮುಖದಲ್ಲಿ ಮಾತನಾಡಿರುವ ಟ್ರಂಪ್​, ಅಧ್ಯಕ್ಷನಾಗಿ ಜಗತ್ತಿನಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ತರುವುದು ನನ್ನ ಮಹತ್ವದ ಆಕಾಂಕ್ಷೆಯಾಗಿದೆ. ಭಾರತ ಮತ್ತು ಪಾಕಿಸ್ತಾನದ ಯಶಸ್ವಿ ಮಾತುಕತೆ ಬಳಿಕ, ಇಂದು ಈ ಎರಡು ದೇಶಗಳ ನಡುವೆ ಸಹಿ ಹಾಕಲಾಗಿದೆ ಎಂದಿದ್ದಾರೆ.


ವ್ಯಾಪಾರದ ಹೊರತಾಗಿ ಯಾವುದೇ ಕಾರಣವಿಲ್ಲದೆ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ನಿಲ್ಲಿಸಲಾಯಿತು. ಜಗತ್ತಿಗೆ ತಮ್ಮನ್ನು ಪ್ರದರ್ಶಿಸಿಕೊಳ್ಳಲು ಪ್ರಯತ್ನಿಸುತ್ತಿರುವ ದೇಶದೊಂದಿಗೆ ನಾನು ವ್ಯಾಪಾರ ಮಾಡುವುದಿಲ್ಲ ಎಂಬುದು ನಿಮಗೆ ಗೊತ್ತಿದೆ. ಅವು ಪರಮಾಣು ದೇಶಗಳು ಎಂದು ಟ್ರಂಪ್ ತಿಳಿಸಿದರು.











Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ