LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಪಾಕ್‌ಗೆ 9 ರಾಜತಾಂತ್ರಿಕ ಹೊಡೆತ; ಯುದ್ಧಯಿಲ್ಲದೇ ಗುದ್ದಿದ ಭಾರತ

ನವದೆಹಲಿ, ಮೇ 3: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಭೀತಿ ಆವರಿಸಿದೆ. ಯಾವುದೇ ಕ್ಷಣದಲ್ಲಾದರೂ ಭಾರತೀಯ ಸೇನೆ ಪ್ರತೀಕಾರಕ್ಕೆ ಮುಂದಾಗಬಹುದು ಎಂಬ ಭೀತಿ ಪಾಕಿಸ್ತಾನವನ್ನು ಆವರಿಸಿದೆ. ಹೀಗಾಗಿ, ಸಂಭಾವ್ಯ ಯುದ್ಧ ಎದುರಿಸಲು ಪಾಕಿಸ್ತಾನ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಆದರೆ, ಇತ್ತ ಭಾರತ ಯುದ್ಧ ಮಾಡುವುದು ಬಿಡಿ; ಅದಕ್ಕೂ ಮೊದಲೇ ರಾಜತಾಂತ್ರಿಕ ನಿರ್ಧಾರಗಳು ಹಾಗೂ ಇತರ ಕೆಲವು ಕಠಿಣ ಕ್ರಮಗಳನ್ನು ಕೈಗೊಳ್ಳುವ ಮೂಲಕ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದೆ.









ಭಾರತ ಈಗಾಗಲೇ ಕೈಗೊಂಡಿರುವ ಕೆಲವು ಕ್ರಮಗಳು ಪಾಕಿಸ್ತಾನವನ್ನು ಆರ್ಥಿಕವಾಗಿ ಮತ್ತು ಇತರ ಕೆಲವು ಆಯಾಮಗಳಲ್ಲಿ ಪ್ರಪಾತಕ್ಕೆ ತಳ್ಳಿದೆ. ಆ ಮೂಲಕ, ಉಗ್ರಗಾಮಿಗಳನ್ನು ಪೋಷಿಸುವ ಪಾಕಿಸ್ತಾನ ಸೇನೆ ಹಾಗೂ ಗುಪ್ತಚರ ಸಂಸ್ಥೆ ಐಎಸ್‌ಐಯ ಊಹೆಗೂ ನಿಲುಕದ ತಿರುಗೇಟನ್ನು ಭಾರತ ನೀಡುತ್ತಿದೆ.

ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ 9 ಕ್ರಮಗಳು: ಅಟ್ಟಾರಿ-ವಾಘಾ ಗಡಿ ಬಂದ್.ಭಾರತೀಯ ರಾಜತಾಂತ್ರಿಕರ ವಾಪಸ್ ಕರೆಸಿಕೊಂಡಿರುವುದು.ಪಾಕಿಸ್ತಾನಿ ಹೈಕಮಿಷನ್‌ ಸಿಬ್ಬಂದಿ ಸಂಖ್ಯೆಯಲ್ಲಿ ಕಡಿತ.ಸಾರ್ಕ್ ವೀಸಾ ವಿನಾಯಿತಿ ನಿಷೇಧ.ಸಿಂಧೂ ನದಿ ನೀರು ಒಪ್ಪಂದ ರದ್ದು.ಪಾಕಿಸ್ತಾನದ ಡಿಜಿಟಲ್ ಮಾಧ್ಯಮ ವೇದಿಕೆಗಳಿಗೆ ನಿಷೇಧ.ಉಗ್ರರ ಹಾಗೂ ಭಯೋತ್ಪಾದಕರನ್ನು ಪೋಷಿಸುವವರ ವಿರುದ್ಧಯಾವುದೇ ರೀತಿಯ ಕಾರ್ಯಾಚರಣೆಗೆ ಭಾರತೀಯ ಸೇನೆಗೆ ಸಂಪೂರ್ಣ ಪರಮಾಧಿಕಾರ.ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಪ್ರತಿ ದಾಳಿ.ಪಾಕಿಸ್ತಾನದ ವಿಮಾನಗಳಿಗೆ ಭಾರತದ ವಾಯು ಪ್ರದೇಶ ನಿರ್ಬಂಧ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್