Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಕ್‌ಗೆ ಪ್ರತ್ಯುತ್ತರ ಕೊಡಲು ಭಾರತೀಯ ಸಶಸ್ತ್ರ ಪಡೆಗಳು ಸರ್ವ ಸನ್ನದ್ಧ: ವ್ಯೋಮಿಕಾ ಸಿಂಗ್‌

ನವದೆಹಲಿ: ಪಾಕ್ ಸೇನೆಯು ತನ್ನ ಸೈನ್ಯವನ್ನು ಗಡಿ ಪ್ರದೇಶಗಳತ್ತ ಸ್ಥಳಾಂತರಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇದಕ್ಕೆ ಪ್ರತ್ಯುತ್ತರ ನೀಡಲು ಭಾರತೀಯ ಸಶಸ್ತ್ರ ಪಡೆಗಳು ಸಂಪೂರ್ಣವಾಗಿ ಸಿದ್ಧವಾಗಿವೆ. ಅಲ್ಲದೆ, ಪಾಕಿಸ್ತಾನವು ಭಾರತದ ಪ್ರಮುಖ ಚೆಕ್​ ಪೋಸ್ಟ್​ ಮೇಲೆ ದಾಳಿ ಮಾಡಿರುವುದಾಗಿ ಸುಳ್ಳು ಹೇಳಿದೆ ಎಂದು ವಾಯುಪಡೆ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹೇಳಿದರು. ವಿದೇಶಾಂಗ ಸಚಿವಾಲಯ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.


ಇದೇ ವೇಳೆ ಮಾತನಾಡಿದ ಸೇನೆಯ ಕರ್ನಲ್ ಸೋಫಿಯಾ ಖುರೇಷಿ, ಪಾಕಿಸ್ತಾನ ಸೇನೆಯು ಗಡಿ ಪ್ರದೇಶಗಳಿಗೆ ತನ್ನ ಸೈನಿಕರನ್ನು ನಿಯೋಜಿಸುತ್ತಿರುವುದನ್ನು ಗಮನಿಸುತ್ತಿದ್ದೇವೆ. ಪಾಕಿಸ್ತಾನದ ಸೇನಾ ಪಡೆಗಳು ಇಡೀ ಪಶ್ಚಿಮ ಭಾಗದಲ್ಲಿ ಆಕ್ರಮಣಕಾರಿ ಪ್ರವೃತ್ತಿಯನ್ನು ಮುಂದುವರೆಸಿವೆ. ಭಾರತೀಯ ಸೇನೆ ಚೆಕ್​ ಪೋಸ್ಟ್​ಗಳನ್ನು ಗುರಿಯಾಗಿಸಿಕೊಂಡು ಯುಸಿಎಪಿ ಡ್ರೋನ್‌ಗಳು, ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಫೈಟರ್ ಜೆಟ್‌ಗಳನ್ನು ಬಳಸಿ ದಾಳಿ ನಡೆಸಲಾಗುತ್ತಿದೆ ಎಂದು ಹೇಳಿದರು.


ಎಲ್‌ಒಸಿಯಲ್ಲಿ ಭಾರೀ ಗುಂಡಿನ ದಾಳಿ ನಡೆದಿದೆ. ಎಲ್‌ಒಸಿ ಮತ್ತು ಐಬಿಯಲ್ಲಿ, ಪಾಕ್​ ಫೈಟರ್ ಜೆಟ್‌ಗಳು 26ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿಗೆ ಪ್ರಯತ್ನಿಸಿದವು. ಭಾರತೀಯ ಸಶಸ್ತ್ರ ಪಡೆಗಳು ಪಾಕ್​ನ ಪ್ರಯತ್ನಗಳನ್ನು ವಿಫಲಗೊಳಿಸಿದೆ. ಖಂಡನೀಯ ಬೆಳವಣಿಗೆಯಲ್ಲಿ, ಪಾಕಿಸ್ತಾನವು ಶ್ರೀನಗರ, ಅವಂತಿಪುರ ಮತ್ತು ಉಧಂಪುರ್ ವಾಯುನೆಲೆಗಳಲ್ಲಿರುವ ಆಸ್ಪತ್ರೆಗಳು ಮತ್ತು ಶಾಲಾ ಆವರಣಗಳನ್ನು ಗುರಿಯಾಗಿಸಿ ದಾಳಿ ಮಾಡಿದೆ. ನಾಗರಿಕ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುತ್ತಿರುವುದು ಅವರ ಬೇಜವಾಬ್ದಾರಿಯನ್ನು ತೋರಿಸುತ್ತಿದೆ. ಬೆಳಗಿನ ಜಾವ 1.40ಕ್ಕೆ ಪಂಜಾಬ್‌ನ ವಾಯುನೆಲೆಯನ್ನು ನಾಶಪಡಿಸಲು ಪಾಕ್​ ಹೈ-ಸ್ಪೀಡ್ ಕ್ಷಿಪಣಿಯನ್ನು ಬಳಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ತಿಳಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ