LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಕೊನೆಗೂ ಉಗ್ರರಿಬ್ಬರನ್ನು ಹೊಡೆದುರುಳಿಸಿದ ಭಾರತೀಯ ಸೇನೆ


ಶ್ರೀನಗರ, ಜಮ್ಮು ಕಾಶ್ಮೀರ : ಜಮ್ಮು ಪ್ರದೇಶದ ಅಖ್ನೂರ್ ಸೆಕ್ಟರ್‌ನಲ್ಲಿ ಇಂದು ಬೆಳಗ್ಗೆ ಮತ್ತೆ ಗುಂಡಿನ ಚಕಮಕಿ ನಡೆದಿದೆ. ಇಲ್ಲಿನ ಹಳ್ಳಿಯೊಂದರಲ್ಲಿ ಅಡಗಿಕೊಂಡಿದ್ದ ಭಯೋತ್ಪಾದಕರಿಬ್ಬರನ್ನು ಮಂಗಳವಾರ ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಈ ಬಗ್ಗೆ ಅಧಿಕಾರಿಗಳು ಖಚಿತ ಮಾಹಿತಿ ನೀಡಿದ್ದಾರೆ.


ಒಟ್ಟು ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ಜೋಗ್ವಾನ್ ಗ್ರಾಮದ ಅಸ್ಸಾನ್ ದೇವಸ್ಥಾನದ ಸಮೀಪವಿರುವ ಅರಣ್ಯ ಪ್ರದೇಶದಲ್ಲಿ ಇನ್ನೂ ಅಡಗಿರುವ ಮೂರನೇ ಉಗ್ರನನ್ನು ತಟಸ್ಥಗೊಳಿಸಿದ್ದೇವೆ ಎಂದು ಸೇನೆ ಹೇಳಿದೆ.


ಸೋಮವಾರ ಬೆಳಗ್ಗೆ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಸಾಗುತ್ತಿದ್ದ ಬೆಂಗಾವಲು ಪಡೆಯ ಭಾಗವಾಗಿದ್ದ ಸೇನಾ ಆಂಬ್ಯುಲೆನ್ಸ್‌ ಮೇಲೆ ಮೂವರು ಭಯೋತ್ಪಾದಕರ ಗುಂಡು ಹಾರಿಸಿದ್ದರು. ವಿಶೇಷ ಪಡೆಗಳು ಮತ್ತು ಎನ್‌ಎಸ್‌ಜಿ ಕಮಾಂಡೋಗಳು ನಡೆಸಿದ ಕಾರ್ಯಾಚರಣೆಯಲ್ಲಿ ಸೋಮವಾರ ಸಂಜೆ ಉಗ್ರರನೊಬ್ಬನನ್ನು ಹೊಡೆದುರುಳಿಸಲಾಗಿತ್ತು. ಬಳಿಕ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿತ್ತು. ಇಂದು ಬೆಳಗ್ಗೆ ಭದ್ರತಾ ಪಡೆಗಳು ಖೌರ್‌ನ ಭಟ್ಟಲ್ ಏರಾದಲ್ಲಿ ಬೆಳಗ್ಗೆ 7 ಗಂಟೆಯ ಸುಮಾರಿಗೆ ಅಡಗಿಕೊಂಡಿದ್ದ ಭಯೋತ್ಪಾದಕರ ವಿರುದ್ಧ ಗುಂಡಿನ ದಾಳಿ ನಡೆಸಿ ಹೊಡೆದುರಳಿಸಿತ್ತು. ಅಡಗಿಕೊಂಡಿದ್ದ ಮೂರನೇ ಉಗ್ರನಿಗಾಗಿ ಶೋಧ ಮುಂದುವರಿದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದರು.




ಎರಡನೇ ಭಯೋತ್ಪಾದಕನನ್ನು ಹೊಡೆದುರುಳಿಸುವ ಮೊದಲು ಒಂದು ಗಂಟೆಗೂ ಹೆಚ್ಚು ಕಾಲ ತೀವ್ರವಾದ ಗುಂಡಿನ ದಾಳಿ ನಡೆದಿದ್ದವು. ಈ ವೇಳೆ ಭಯಂಕರ ಸ್ಫೋಟಗಳು ನಡೆದವು. ಬಳಿಕ ಮೂರನೇ ಉಗ್ರನನ್ನು ಸಹ ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಡಗಿರುವ ಭಯೋತ್ಪಾದಕರನ್ನು ಪತ್ತೆಹಚ್ಚಲು ಹೆಲಿಕಾಪ್ಟರ್‌ಗಳು ಮತ್ತು ಡ್ರೋನ್‌ಗಳನ್ನು ಸಹ ನಿಯೋಜಿಸಲಾಗಿತ್ತು. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸಹ ಸಮೀಪದ ಪ್ರದೇಶಗಳಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದು, ಕೂಬಿಂಗ್​ ಕಾರ್ಯಾಚರಣೆ ಮುಂದುವರಿದಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್