LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಶೇಖ್​ ಹಸೀನಾಗೆ ತಾತ್ಕಾಲಿಕ ಆಶ್ರಯ ನೀಡಲು ಭಾರತ ಸರ್ಕಾರ ಅವಕಾಶ?!

ನವದೆಹಲಿ: ಬಾಂಗ್ಲಾದೇಶದಲ್ಲಿ ತಮ್ಮ ಸರ್ಕಾರ ಪತನದ ಬಳಿಕ ದೇಶ ತೊರೆದಿರುವ ಶೇಖ್​ ಹಸೀನಾಗೆ ತಾತ್ಕಾಲಿಕ ಆಶ್ರಯ ನೀಡಲು ಭಾರತ ಸರ್ಕಾರ ಅವಕಾಶ ನೀಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಯುಕೆಯಲ್ಲಿ ಆಶ್ರಯ ಪಡೆಯುವವರೆಗೆ ಅವರು ಭಾರತದಲ್ಲಿ ಇರಲಿದ್ದು, ಎಲ್ಲಾ ರೀತಿಯ ಬೆಂಬಲ ಸಿಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಹಸೀನಾ ವಾಸ್ತವ್ಯ ತಾತ್ಕಾಲಿಕವಾಗಿರಲಿದೆ. ಬ್ರಿಟನ್​ಗೆ ಸ್ಥಳಾಂತರವಾಗುವವರೆಗೆ ಅವರು ನವದೆಹಲಿಯಲ್ಲಿ ಇರಲಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.


ಬಾಂಗ್ಲಾದೇಶದಲ್ಲಿ ತಮ್ಮ ಸರ್ಕಾರದ ವಿರುದ್ಧ ವ್ಯಕ್ತವಾದ ಭಾರೀ ಪ್ರತಿಭಟನಾ ಹಿಂಸಾಚಾರದ ಹಿನ್ನಲೆ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ದೇಶ ತೊರೆದಿದ್ದಾರೆ. ಅವರು ಲಂಡನ್​ನಲ್ಲಿ ನೆಲೆಯೂರುವ ಚಿಂತನೆ ನಡೆಸಿದ್ದಾರೆ. ಆದರೆ, ಅವರಿಗೆ ರಾಜಕೀಯ ಆಶ್ರಯ ನೀಡುವ ಬಗ್ಗೆ ಯುನೈಟೆಡ್​ ಕಿಂಗಡಮ್​ ಸರ್ಕಾರದಿಂದ ಇಲ್ಲಿಯವರೆಗೆ ಯಾವುದೇ ದೃಢೀಕರಣ ಸಿಕ್ಕಿಲ್ಲ ಎನ್ನಲಾಗಿದೆ. ಅವರ ಸಹೋದರಿ ಯುಕೆ ಪೌರತ್ವ ಹೊಂದಿದ ಹಿನ್ನಲೆ ಅವರ ಜೊತೆಗೆ ನೆಲೆಸಲು ಬ್ರಿಟನ್​ ಆಶ್ರಯ ಕೋರುತ್ತಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.


ಬಾಂಗ್ಲಾದೇಶದ ಪಿತಾಮಹ ಶೇಖ್​ ಮಜಿಬುರ್​ ರೆಹಮಾನ್​ ಮತ್ತು ಶೇಖ್ ಫಜಿಲತುನ್ ನೆಚಾ ಮುಜಿಬ್ ಅವರ ಕಿರಿಯ ಮಗಳು ರೆಹನಾ ಶೇಖ್​ ಹಸೀನಾ ಕಿರಿಯ ಸಹೋದರಿಯಾಗಿದ್ದಾರೆ. ಇವರ ಮಗಳು ಟುಲಿಪ್​ ಸಿದ್ಧಿಕ್​ ಬ್ರಿಟನ್​ ಸಂಸತ್​ನಲ್ಲಿ ಲೇಬರ್​ ಪಕ್ಷವನ್ನು ಪ್ರತಿನಿಧಿಸುತ್ತಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್