Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೇಖ್​ ಹಸೀನಾಗೆ ತಾತ್ಕಾಲಿಕ ಆಶ್ರಯ ನೀಡಲು ಭಾರತ ಸರ್ಕಾರ ಅವಕಾಶ?!

ನವದೆಹಲಿ: ಬಾಂಗ್ಲಾದೇಶದಲ್ಲಿ ತಮ್ಮ ಸರ್ಕಾರ ಪತನದ ಬಳಿಕ ದೇಶ ತೊರೆದಿರುವ ಶೇಖ್​ ಹಸೀನಾಗೆ ತಾತ್ಕಾಲಿಕ ಆಶ್ರಯ ನೀಡಲು ಭಾರತ ಸರ್ಕಾರ ಅವಕಾಶ ನೀಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಯುಕೆಯಲ್ಲಿ ಆಶ್ರಯ ಪಡೆಯುವವರೆಗೆ ಅವರು ಭಾರತದಲ್ಲಿ ಇರಲಿದ್ದು, ಎಲ್ಲಾ ರೀತಿಯ ಬೆಂಬಲ ಸಿಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಹಸೀನಾ ವಾಸ್ತವ್ಯ ತಾತ್ಕಾಲಿಕವಾಗಿರಲಿದೆ. ಬ್ರಿಟನ್​ಗೆ ಸ್ಥಳಾಂತರವಾಗುವವರೆಗೆ ಅವರು ನವದೆಹಲಿಯಲ್ಲಿ ಇರಲಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.


ಬಾಂಗ್ಲಾದೇಶದಲ್ಲಿ ತಮ್ಮ ಸರ್ಕಾರದ ವಿರುದ್ಧ ವ್ಯಕ್ತವಾದ ಭಾರೀ ಪ್ರತಿಭಟನಾ ಹಿಂಸಾಚಾರದ ಹಿನ್ನಲೆ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ದೇಶ ತೊರೆದಿದ್ದಾರೆ. ಅವರು ಲಂಡನ್​ನಲ್ಲಿ ನೆಲೆಯೂರುವ ಚಿಂತನೆ ನಡೆಸಿದ್ದಾರೆ. ಆದರೆ, ಅವರಿಗೆ ರಾಜಕೀಯ ಆಶ್ರಯ ನೀಡುವ ಬಗ್ಗೆ ಯುನೈಟೆಡ್​ ಕಿಂಗಡಮ್​ ಸರ್ಕಾರದಿಂದ ಇಲ್ಲಿಯವರೆಗೆ ಯಾವುದೇ ದೃಢೀಕರಣ ಸಿಕ್ಕಿಲ್ಲ ಎನ್ನಲಾಗಿದೆ. ಅವರ ಸಹೋದರಿ ಯುಕೆ ಪೌರತ್ವ ಹೊಂದಿದ ಹಿನ್ನಲೆ ಅವರ ಜೊತೆಗೆ ನೆಲೆಸಲು ಬ್ರಿಟನ್​ ಆಶ್ರಯ ಕೋರುತ್ತಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.


ಬಾಂಗ್ಲಾದೇಶದ ಪಿತಾಮಹ ಶೇಖ್​ ಮಜಿಬುರ್​ ರೆಹಮಾನ್​ ಮತ್ತು ಶೇಖ್ ಫಜಿಲತುನ್ ನೆಚಾ ಮುಜಿಬ್ ಅವರ ಕಿರಿಯ ಮಗಳು ರೆಹನಾ ಶೇಖ್​ ಹಸೀನಾ ಕಿರಿಯ ಸಹೋದರಿಯಾಗಿದ್ದಾರೆ. ಇವರ ಮಗಳು ಟುಲಿಪ್​ ಸಿದ್ಧಿಕ್​ ಬ್ರಿಟನ್​ ಸಂಸತ್​ನಲ್ಲಿ ಲೇಬರ್​ ಪಕ್ಷವನ್ನು ಪ್ರತಿನಿಧಿಸುತ್ತಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*