Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೇಖ್​ ಹಸೀನಾಗೆ ತಾತ್ಕಾಲಿಕ ಆಶ್ರಯ ನೀಡಲು ಭಾರತ ಸರ್ಕಾರ ಅವಕಾಶ?!

ನವದೆಹಲಿ: ಬಾಂಗ್ಲಾದೇಶದಲ್ಲಿ ತಮ್ಮ ಸರ್ಕಾರ ಪತನದ ಬಳಿಕ ದೇಶ ತೊರೆದಿರುವ ಶೇಖ್​ ಹಸೀನಾಗೆ ತಾತ್ಕಾಲಿಕ ಆಶ್ರಯ ನೀಡಲು ಭಾರತ ಸರ್ಕಾರ ಅವಕಾಶ ನೀಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಯುಕೆಯಲ್ಲಿ ಆಶ್ರಯ ಪಡೆಯುವವರೆಗೆ ಅವರು ಭಾರತದಲ್ಲಿ ಇರಲಿದ್ದು, ಎಲ್ಲಾ ರೀತಿಯ ಬೆಂಬಲ ಸಿಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಹಸೀನಾ ವಾಸ್ತವ್ಯ ತಾತ್ಕಾಲಿಕವಾಗಿರಲಿದೆ. ಬ್ರಿಟನ್​ಗೆ ಸ್ಥಳಾಂತರವಾಗುವವರೆಗೆ ಅವರು ನವದೆಹಲಿಯಲ್ಲಿ ಇರಲಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.


ಬಾಂಗ್ಲಾದೇಶದಲ್ಲಿ ತಮ್ಮ ಸರ್ಕಾರದ ವಿರುದ್ಧ ವ್ಯಕ್ತವಾದ ಭಾರೀ ಪ್ರತಿಭಟನಾ ಹಿಂಸಾಚಾರದ ಹಿನ್ನಲೆ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ದೇಶ ತೊರೆದಿದ್ದಾರೆ. ಅವರು ಲಂಡನ್​ನಲ್ಲಿ ನೆಲೆಯೂರುವ ಚಿಂತನೆ ನಡೆಸಿದ್ದಾರೆ. ಆದರೆ, ಅವರಿಗೆ ರಾಜಕೀಯ ಆಶ್ರಯ ನೀಡುವ ಬಗ್ಗೆ ಯುನೈಟೆಡ್​ ಕಿಂಗಡಮ್​ ಸರ್ಕಾರದಿಂದ ಇಲ್ಲಿಯವರೆಗೆ ಯಾವುದೇ ದೃಢೀಕರಣ ಸಿಕ್ಕಿಲ್ಲ ಎನ್ನಲಾಗಿದೆ. ಅವರ ಸಹೋದರಿ ಯುಕೆ ಪೌರತ್ವ ಹೊಂದಿದ ಹಿನ್ನಲೆ ಅವರ ಜೊತೆಗೆ ನೆಲೆಸಲು ಬ್ರಿಟನ್​ ಆಶ್ರಯ ಕೋರುತ್ತಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.


ಬಾಂಗ್ಲಾದೇಶದ ಪಿತಾಮಹ ಶೇಖ್​ ಮಜಿಬುರ್​ ರೆಹಮಾನ್​ ಮತ್ತು ಶೇಖ್ ಫಜಿಲತುನ್ ನೆಚಾ ಮುಜಿಬ್ ಅವರ ಕಿರಿಯ ಮಗಳು ರೆಹನಾ ಶೇಖ್​ ಹಸೀನಾ ಕಿರಿಯ ಸಹೋದರಿಯಾಗಿದ್ದಾರೆ. ಇವರ ಮಗಳು ಟುಲಿಪ್​ ಸಿದ್ಧಿಕ್​ ಬ್ರಿಟನ್​ ಸಂಸತ್​ನಲ್ಲಿ ಲೇಬರ್​ ಪಕ್ಷವನ್ನು ಪ್ರತಿನಿಧಿಸುತ್ತಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ