Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೇಖ್​ ಹಸೀನಾಗೆ ತಾತ್ಕಾಲಿಕ ಆಶ್ರಯ ನೀಡಲು ಭಾರತ ಸರ್ಕಾರ ಅವಕಾಶ?!

ನವದೆಹಲಿ: ಬಾಂಗ್ಲಾದೇಶದಲ್ಲಿ ತಮ್ಮ ಸರ್ಕಾರ ಪತನದ ಬಳಿಕ ದೇಶ ತೊರೆದಿರುವ ಶೇಖ್​ ಹಸೀನಾಗೆ ತಾತ್ಕಾಲಿಕ ಆಶ್ರಯ ನೀಡಲು ಭಾರತ ಸರ್ಕಾರ ಅವಕಾಶ ನೀಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಯುಕೆಯಲ್ಲಿ ಆಶ್ರಯ ಪಡೆಯುವವರೆಗೆ ಅವರು ಭಾರತದಲ್ಲಿ ಇರಲಿದ್ದು, ಎಲ್ಲಾ ರೀತಿಯ ಬೆಂಬಲ ಸಿಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಹಸೀನಾ ವಾಸ್ತವ್ಯ ತಾತ್ಕಾಲಿಕವಾಗಿರಲಿದೆ. ಬ್ರಿಟನ್​ಗೆ ಸ್ಥಳಾಂತರವಾಗುವವರೆಗೆ ಅವರು ನವದೆಹಲಿಯಲ್ಲಿ ಇರಲಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.


ಬಾಂಗ್ಲಾದೇಶದಲ್ಲಿ ತಮ್ಮ ಸರ್ಕಾರದ ವಿರುದ್ಧ ವ್ಯಕ್ತವಾದ ಭಾರೀ ಪ್ರತಿಭಟನಾ ಹಿಂಸಾಚಾರದ ಹಿನ್ನಲೆ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ದೇಶ ತೊರೆದಿದ್ದಾರೆ. ಅವರು ಲಂಡನ್​ನಲ್ಲಿ ನೆಲೆಯೂರುವ ಚಿಂತನೆ ನಡೆಸಿದ್ದಾರೆ. ಆದರೆ, ಅವರಿಗೆ ರಾಜಕೀಯ ಆಶ್ರಯ ನೀಡುವ ಬಗ್ಗೆ ಯುನೈಟೆಡ್​ ಕಿಂಗಡಮ್​ ಸರ್ಕಾರದಿಂದ ಇಲ್ಲಿಯವರೆಗೆ ಯಾವುದೇ ದೃಢೀಕರಣ ಸಿಕ್ಕಿಲ್ಲ ಎನ್ನಲಾಗಿದೆ. ಅವರ ಸಹೋದರಿ ಯುಕೆ ಪೌರತ್ವ ಹೊಂದಿದ ಹಿನ್ನಲೆ ಅವರ ಜೊತೆಗೆ ನೆಲೆಸಲು ಬ್ರಿಟನ್​ ಆಶ್ರಯ ಕೋರುತ್ತಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.


ಬಾಂಗ್ಲಾದೇಶದ ಪಿತಾಮಹ ಶೇಖ್​ ಮಜಿಬುರ್​ ರೆಹಮಾನ್​ ಮತ್ತು ಶೇಖ್ ಫಜಿಲತುನ್ ನೆಚಾ ಮುಜಿಬ್ ಅವರ ಕಿರಿಯ ಮಗಳು ರೆಹನಾ ಶೇಖ್​ ಹಸೀನಾ ಕಿರಿಯ ಸಹೋದರಿಯಾಗಿದ್ದಾರೆ. ಇವರ ಮಗಳು ಟುಲಿಪ್​ ಸಿದ್ಧಿಕ್​ ಬ್ರಿಟನ್​ ಸಂಸತ್​ನಲ್ಲಿ ಲೇಬರ್​ ಪಕ್ಷವನ್ನು ಪ್ರತಿನಿಧಿಸುತ್ತಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ