Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೇಪಾಳ ಪ್ರಧಾನಿ ಕೆ.ಪಿ.ಶರ್ಮ ಒಲಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ  ಅಭಿನಂದನೆ

ಕಾಠ್ಮಂಡು: ನೇಪಾಳದ ಪ್ರಧಾನಿಯಾಗಿ ಆಯ್ಕೆಯಾದ ಕೆ.ಪಿ.ಶರ್ಮ ಒಲಿ  ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ  ಅಭಿನಂದನೆ ಸಲ್ಲಿಸಿದ್ದಾರೆ. ಎರಡು ದೇಶಗಳ ಸಂಬಂಧವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಜತೆಯಾಗಿ ಕಾರ್ಯ ನಿರ್ವಹಿಸಲು ಎದುರು ನೋಡುತ್ತಿರುವುದಾಗಿ ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.


ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಮೋದಿ ಅವರು, ʼʼನೇಪಾಳದ ಪ್ರಧಾನ ಮಂತ್ರಿಯಾಗಿ ನೇಮಕವಾದ ಕೆ.ಪಿ.ಶರ್ಮ ಒಲಿ ಅವರಿಗೆ ಅಭಿನಂದನೆಗಳು. ನಮ್ಮ ಎರಡೂ ದೇಶಗಳ ನಡುವಿನ ಸ್ನೇಹದ ಆಳವಾದ ಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತು ನಮ್ಮ ಜನರ ಪ್ರಗತಿ ಮತ್ತು ಸಮೃದ್ಧಿಗಾಗಿ ಪರಸ್ಪರ ಸಹಕಾರವನ್ನು ಮತ್ತಷ್ಟು ವಿಸ್ತರಿಸಲು ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆʼʼ ಎಂದು ಹೇಳಿದ್ದಾರೆ.

ಶುಕ್ರವಾರ ನಡೆದ ವಿಶ್ವಾಸಮತ ಯಾಚನೆಯ ವೇಳೆ ಪುಷ್ಪ ಕಮಲ್‌ ದಹಲ್‌ ಪ್ರಚಂಡ ಅವರು ಬಹುಮತ ಸಾಬೀತುಪಡಿಸಲು ವಿಫಲರಾಗಿ ಪ್ರಧಾನಿ ಹುದ್ದೆ ಕಳೆದುಕೊಂಡಿದ್ದರು. ಹೀಗಾಗಿ ಸಿಪಿಎನ್‌-ಯುಎಂಎಲ್‌ (Nepal-Unified Marxist Leninist (CPN-UML) ಪಕ್ಷದ ಅಧ್ಯಕ್ಷ, 72 ವರ್ಷದ ಕೆ.ಪಿ.ಶರ್ಮ ಒಲಿ ಪ್ರಧಾನಿಯಾಗಿ ನೇಮಕಗೊಂಡರು. ಈ ಹಿಂದೆ ಅವರು 2015ರ ಅಕ್ಟೋಬರ್ 11ರಿಂದ 2016ರ ಆಗಸ್ಟ್ 3ರವರೆಗೆ, 2018ರ ಫೆಬ್ರವರಿ 5ರಿಂದ 2021ರ ಜುಲೈ 13ರವರೆಗೆ ಕೆ.ಪಿ.ಶರ್ಮಾ ಒಲಿ ನೇಪಾಳದ ಪ್ರಧಾನ ಮಂತ್ರಿಯಾಗಿದ್ದರು. ಒಲಿ ಅವರು ಚೀನಾ ಪರ ಒಲವು ಹೊಂದಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*