Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೇಪಾಳ ಪ್ರಧಾನಿ ಕೆ.ಪಿ.ಶರ್ಮ ಒಲಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ  ಅಭಿನಂದನೆ

ಕಾಠ್ಮಂಡು: ನೇಪಾಳದ ಪ್ರಧಾನಿಯಾಗಿ ಆಯ್ಕೆಯಾದ ಕೆ.ಪಿ.ಶರ್ಮ ಒಲಿ  ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ  ಅಭಿನಂದನೆ ಸಲ್ಲಿಸಿದ್ದಾರೆ. ಎರಡು ದೇಶಗಳ ಸಂಬಂಧವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಜತೆಯಾಗಿ ಕಾರ್ಯ ನಿರ್ವಹಿಸಲು ಎದುರು ನೋಡುತ್ತಿರುವುದಾಗಿ ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.


ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಮೋದಿ ಅವರು, ʼʼನೇಪಾಳದ ಪ್ರಧಾನ ಮಂತ್ರಿಯಾಗಿ ನೇಮಕವಾದ ಕೆ.ಪಿ.ಶರ್ಮ ಒಲಿ ಅವರಿಗೆ ಅಭಿನಂದನೆಗಳು. ನಮ್ಮ ಎರಡೂ ದೇಶಗಳ ನಡುವಿನ ಸ್ನೇಹದ ಆಳವಾದ ಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತು ನಮ್ಮ ಜನರ ಪ್ರಗತಿ ಮತ್ತು ಸಮೃದ್ಧಿಗಾಗಿ ಪರಸ್ಪರ ಸಹಕಾರವನ್ನು ಮತ್ತಷ್ಟು ವಿಸ್ತರಿಸಲು ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆʼʼ ಎಂದು ಹೇಳಿದ್ದಾರೆ.

ಶುಕ್ರವಾರ ನಡೆದ ವಿಶ್ವಾಸಮತ ಯಾಚನೆಯ ವೇಳೆ ಪುಷ್ಪ ಕಮಲ್‌ ದಹಲ್‌ ಪ್ರಚಂಡ ಅವರು ಬಹುಮತ ಸಾಬೀತುಪಡಿಸಲು ವಿಫಲರಾಗಿ ಪ್ರಧಾನಿ ಹುದ್ದೆ ಕಳೆದುಕೊಂಡಿದ್ದರು. ಹೀಗಾಗಿ ಸಿಪಿಎನ್‌-ಯುಎಂಎಲ್‌ (Nepal-Unified Marxist Leninist (CPN-UML) ಪಕ್ಷದ ಅಧ್ಯಕ್ಷ, 72 ವರ್ಷದ ಕೆ.ಪಿ.ಶರ್ಮ ಒಲಿ ಪ್ರಧಾನಿಯಾಗಿ ನೇಮಕಗೊಂಡರು. ಈ ಹಿಂದೆ ಅವರು 2015ರ ಅಕ್ಟೋಬರ್ 11ರಿಂದ 2016ರ ಆಗಸ್ಟ್ 3ರವರೆಗೆ, 2018ರ ಫೆಬ್ರವರಿ 5ರಿಂದ 2021ರ ಜುಲೈ 13ರವರೆಗೆ ಕೆ.ಪಿ.ಶರ್ಮಾ ಒಲಿ ನೇಪಾಳದ ಪ್ರಧಾನ ಮಂತ್ರಿಯಾಗಿದ್ದರು. ಒಲಿ ಅವರು ಚೀನಾ ಪರ ಒಲವು ಹೊಂದಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ