Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಧಾನಿಯಲ್ಲಿ 23ರಿಂದ 26ರವರೆಗೆ ಭಾರತದ ಅತೀ ದೊಡ್ಡ ಕಲಾ- ಸಾಂಸ್ಕೃತಿಕ ಸಮಾವೇಶ

ಬೆಂಗಳೂರು, (ಜನವರಿ 24): 600 ಶಿಬಿರಾರ್ಥಿಗಳು ಹಾಗೂ ವೈವಿಧ್ಯಮಯ ಕಲಾಕ್ಷೇತ್ರಗಳ ದಿಗ್ಗಜರು ಭಾವ್ 2025: ದಿ ಎಕ್ಸ್ಪ್ರೆಷನ್ಸ್ ಸಮ್ಮಿಟ್ ನಲ್ಲಿ, ಜನವರಿ 23ರಿಂದ 26ರವರೆಗೆ ಸೇರಲಿದ್ದಾರೆ. ಈ ಸಮಾವೇಶವು ಭಾರತದ ಅತೀ ದೊಡ್ಡ ಕಲೆಯ ಹಾಗೂ ಸಾಂಸ್ಕೃತಿಕ ಪರಂಪರೆಯ ಸಂಭ್ರಮವಾಗಿದ್ದು, ಮೂರು ದಿವಸಗಳ ಈ ಸಮಾವೇಶದಲ್ಲಿ ಕಲಾವಿದರು ಹಾಗೂ ಘನ ಸಾಂಸ್ಕೃತಿಕ ಧ್ವನಿಗಳಾಗಿರುವ ಮಂಜಮ್ಮ ಜೋಗತಿ, ಸುನಂದಾ ದೇವಿ, ಬನ್ನಂಜೆ ಸುವರ್ಣರವರು ಭಾಗವಹಿಸಲಿದ್ದಾರೆ. ತಮ್ಮ ಜೀವನವನ್ನೇ ರಾಜ್ಯದ ಭವ್ಯ ಸಾಂಸ್ಕೃತಿಕ ಹಾಗೂ ಜನಪದ ಪರಂಪರೆಗೆ ಮುಡಿಪಾಗಿಟ್ಟಿರುವ ಇವರು, ಅವರ ಪಯಣಗಳ ಹಾದಿಯನ್ನು ನಮ್ಮೊಂದಿಗೆ ಹಂಚಿಕೊಳ್ಳಲಿದ್ದಾರೆ.


ಲೈಂಗಿಕ ಅಲ್ಪಸಂಖ್ಯಾತ ಕಲಾಕಾರರು ಮತ್ತು ಸಮುದಾಯಗಳು ಭಾರತದ ಕಲೆ ಮತ್ತು ಸಂಸ್ಕೃತಿಗೆ ನೀಡಿರುವ ಅನುಪಮವಾದ ಕಾಣಿಕೆಯ ಬಗ್ಗೆ ಪದ್ಮಶ್ರೀ ಮಂಜಮ್ಮ ಜೋಗತಿಯವರೊಡನೆ ಚರ್ಚೆ ಮತ್ತು ಪ್ರದರ್ಶನ, 70 ದಿಗ್ಗಜರ ಕಲಾಪ್ರದರ್ಶನ, ಉಪನ್ಯಾಸ, ಪ್ರಾಯೋಗಿಕ ಪ್ರದರ್ಶನ – ಪದ್ಮ ವಿಭೂಷಣ ಸೋನಲ್ ಮನ್ ಸಿಂಗ್, ಕುಚುಪುಡಿಯ ದಂತಕಥೆಯಾದ ಸುನಂದಾ ದೇವಿ, ಪದ್ಮಶ್ರೀ ಉಮಾ ಮಹೇಶ್ವರಿ, ಯಕ್ಷಗಾನದ ದಂತಕಥೆ ಬನ್ನಂಜೆ ಸುವರ್ಣ, ಹೀಗೆ ಭಾವ್ – ದಿ ಎಕ್ಸ್ಪ್ರೆಷನ್ ಸಮ್ಮಿಟ್ 2025 ಒಂದು ಅನುಪಮವಾದ, ಮನಸೆಳೆವ ಅನುಭವವಾಗಲಿದ್ದು, ದಿ ಆರ್ಟ್ ಆಫ್ ಲಿವಿಂಗ್ ನ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಇದು ನಡೆಯಲಿದೆ.

ಸಂಸ್ಕೃತಿಗಳ ಈ ಬೃಹತ್ ಸಂಭ್ರಮಕ್ಕೆ ಮಾರ್ಗದರ್ಶಕರಾಗಿರುವ ಜಾಗತಿಕ ಮಾನವತಾವಾದಿ ಹಾಗೂ ಆಧ್ಯಾತ್ಮಿಕ ನಾಯಕರಾಗಿರುವ ಗುರುದೇವ್ ಶ್ರೀ ಶ್ರೀ ರವಿಶಂಕರರು, “ಒಂದೇ ಒಂದು ಸಂಸ್ಕೃತಿ, ಧರ್ಮ ಅಥವಾ ನಾಗರಿಕತೆಯು ಮಾಯವಾದರೂ ಸಹ, ಜಗತ್ತು ಅದರಿಂದ ಬಡವಾಗುತ್ತದೆ. ಪ್ರತಿಯೊಂದು ಸಂಸ್ಕೃತಿಯೂ ಸಹ ಜಗತ್ತಿನ ಪರಂಪರೆಯ ಭಾಗವಾಗಿದೆ ಮತ್ತು ಅವೆಲ್ಲವನ್ನೂ ನಾವು ಉಳಿಸಿ ಸಂರಕ್ಷಿಸಲೇಬೇಕು” ಎನ್ನುತ್ತಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ