LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಭಾರತದ ಆಂತರಿಕ ವಿಚಾರದ ಬಗ್ಗೆ ಅಮೆರಿಕ ಮತ್ತೊಮ್ಮೆ ಪ್ರತಿಕ್ರಿಯೆ: ಭಾರತ ತೀವ್ರ ಆಕ್ಷೇಪ

ದೆಹಲಿ,ಮಾ28 ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಸಂಬಂಧಿಸಿದಂತೆ ಅಮೆರಿಕದ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದಾದ ಬಳಿಕವೂ ಭಾರತದ ಆಂತರಿಕ ವಿಚಾರದ ಬಗ್ಗೆ ಅಮೆರಿಕ ಮತ್ತೊಮ್ಮೆ ಪ್ರತಿಕ್ರಿಯೆ ನೀಡಿದೆ. ಮೊದಲಿಗೆ, ಅರವಿಂದ್ ಕೇಜ್ರಿವಾಲ್ ಬಂಧನ ಮತ್ತು ಈಗ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಅಮೆರಿಕ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಅಮೆರಿಕದ ರಕ್ಷಣಾ ಇಲಾಖೆ ವಕ್ತಾರ ಮ್ಯಾಥ್ಯೂ ಬುಧವಾರ ತಮ್ಮ ನಿಲುವನ್ನು ಪುನರುಚ್ಚರಿಸಿ, ನ್ಯಾಯಸಮ್ಮತ, ಪಾರದರ್ಶಕ ಹಾಗೂ ಸಕಾಲಿಕ ಕಾನೂನು ಕ್ರಮಗಳನ್ನು ವಾಷಿಂಗ್ಟನ್ ಸ್ವಾಗತಿಸುತ್ತದೆ ಎಂದಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಸೇರಿದಂತೆ ಹಲವು ಕ್ರಮಗಳನ್ನು ನಾವು ನಿಕಟವಾಗಿ ಗಮನಿಸುತ್ತಿದ್ದೇವೆ ಎಂದು ಮಿಲ್ಲರ್ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್​ ಪಕ್ಷದ ಖಾತೆಗಳನ್ನು ಸ್ಥಗಿತಗೊಳಿಸಿರುವುದರ ಬಗ್ಗೆ ಕೇಳಿದ ಪ್ರಶ್ನೆಗೂ ಉತ್ತರಿಸಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸೌತ್ ಬ್ಲಾಕ್ ಕಚೇರಿಯಲ್ಲಿ ಸುಮಾರು 40 ನಿಮಿಷಗಳ ಕಾಲ ಸಭೆ ನಡೆದಿದ್ದು, ಕೇಜ್ರಿವಾಲ್ ಬಂಧನದ ಕುರಿತು ಅಮೆರಿಕದ ಹೇಳಿಕೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಭಾರತದ ಕಾನೂನು ಪ್ರಕ್ರಿಯೆಗಳು ವಸ್ತುನಿಷ್ಠ ಮತ್ತು ಸಮಯೋಚಿತ ಫಲಿತಾಂಶಗಳಿಗೆ ಬದ್ಧವಾಗಿರುವ ಸ್ವತಂತ್ರ ನ್ಯಾಯಾಂಗವನ್ನು ಆಧರಿಸಿವೆ. ಅದರ ವಿರುದ್ಧ ಆರೋಪಗಳನ್ನು ಮಾಡುವುದು ಸೂಕ್ತವಲ್ಲ ಎಂದು ಸಚಿವಾಲಯ ಪ್ರತಿಪಾದಿಸಿದೆ.

ಕೇಜ್ರಿವಾಲ್ ನ್ಯಾಯಯುತ ವಿಚಾರಣೆಗೆ ಅರ್ಹರು ಎಂದು ಜರ್ಮನಿಯ ವಿದೇಶಾಂಗ ಕಚೇರಿ ಒತ್ತಿ ಹೇಳಿದ ದಿನಗಳ ನಂತರ ಅಮೆರಿಕ ಹೇಳಿಕೆ ನೀಡಿದೆ. ಆಂತರಿಕ ವ್ಯವಹಾರಗಳಲ್ಲಿ ಬಲವಂತದ ಹಸ್ತಕ್ಷೇಪ ಎಂದು ಭಾರತ ಹೇಳಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್