Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಲಹಂಕ ಬಳಿ 153 ಎಕರೆಯಲ್ಲಿ ಇಂದಿರಾಗಾಂಧೀ ಜೈವಿಕ ಉದ್ಯಾನ: ಈಶ್ವರ ಖಂಡ್ರೆ

• ವಿಶ್ವಗುರು ಬಸವಣ್ಣ ದಿವ್ಯೌಷಧ ಸಸ್ಯವನ ನಿರ್ಮಾಣ

• ಬಾಬಾಸಾಹೇಬ್ ಅಂಬೇಡ್ಕರ್ ಪಕ್ಷಿಲೋಕ

• ನಾಡಪ್ರಭು ಕೆಂಪೇಗೌಡ ಕಿರು ಮೃಗಾಲಯ

• ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನಕ್ಕೆ ಶೀಘ್ರ ಶಂಕುಸ್ಥಾಪನೆ

 

ಬೆಂಗಳೂರು, ಅ.21: ಯಲಹಂಕ ಬಳಿಯ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ನೀಲಗಿರಿ ನೆಡುತೋಪು ಪ್ರದೇಶದಲ್ಲಿ ದಿವೌಷಧೀಯ ಸಸ್ಯವನ, ಪಕ್ಷಿಲೋಕ, ಕಿರು ಮೃಗಾಲಯ, ವೃಕ್ಷೋದ್ಯಾನ, ಮತ್ತು ಜೈವಿಕ ವನ ನಿರ್ಮಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಸುರಿಯುವ ಮಳೆಯ ನಡುವೆಯೂ ಮಾದಪ್ಪನಹಳ್ಳಿ ನೆಡುತೋಪಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಅರಣ್ಯ ಸಚಿವರು, ಬೆಂಗಳೂರು ಉತ್ತರ ಭಾಗದಲ್ಲಿ ಲಾಲ್ ಬಾಗ್, ಕಬ್ಬನ್ ಪಾರ್ಕ್ ನಂತಹ ಯಾವುದೇ ಸಸ್ಯೋದ್ಯಾನವಿಲ್ಲ ಹೀಗಾಗಿ ಇಲ್ಲಿ ಅರಣ್ಯ ಭೂಮಿಯಲ್ಲಿ ಇಂದಿರಾಗಾಂಧೀ ಜೈವಿಕ ಉದ್ಯಾನ, ವಿಶ್ವಗುರು ಬಸವಣ್ಣ ದಿವ್ಯೌಷಧೀಯ ಸಸ್ಯ ವನ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪಕ್ಷಿ ಲೋಕ, ನಾಡಪ್ರಭು ಕೆಂಪೇಗೌಡ ಕಿರು ಮೃಗಾಲಯ ಹಾಗೂ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ನಿರ್ಮಾಣ ಮಾಡಲು ಚಿಂತಿಸಲಾಗಿದೆ ಎಂದರು.

ಈ ಪ್ರದೇಶದಲ್ಲಿ ನೆಡಲಾಗಿರುವ ನೀಲಗಿರಿ ಮರಗಳನ್ನು ತೆಗೆದು ಅಲ್ಲಿ ಸ್ಥಳೀಯ ಜಾತಿಯ ನಂದಿ, ಹೊನ್ನೆ, ಬಿಲ್ವ, ಮಹಾಬಿಲ್ವವೇ ಮೊದಲಾದ ನೂರಾರು ಪ್ರಭೇದದ ಸಸಿಗಳನ್ನು ನೆಟ್ಟು ಬೆಳೆಸಲಾಗುವುದು. ಹೀಗೆ ಬೆಳೆಸುವ ಎಲ್ಲ ಮರಗಳ ಬಳಿ ವೃಕ್ಷದ ಹೆಸರು, ಪ್ರಭೇದ ಇತ್ಯಾದಿ ವೈಜ್ಞಾನಿಕ ವಿವರದ ಫಲಕ ಹಾಕುವ ಮೂಲಕ ಮುಂದಿನ ಪೀಳಿಗೆ ಕನಿಷ್ಠ 50 ಮರಗಳನ್ನು ಗುರುತಿಸುವಂತೆ ಜ್ಞಾನ ಸಿಂಚನ ಮಾಡಲು ಕ್ರಮ ವಹಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.

ಅತ್ಯಗತ್ಯವಾದ ಶ್ವಾಸ ತಾಣ:

ಬೆಂಗಳೂರು ನಗರ ವ್ಯಾಪಕವಾಗಿ ಬೆಳೆದಿದೆ ಮತ್ತು ಬೆಳೆಯುತ್ತಿದೆ. ಆದರೆ ಕಬ್ಬನ್ ಪಾರ್ಕ್, ಲಾಲ್ ಬಾಗ್ ನಂತಹ ಮತ್ತೊಂದು ಬೃಹತ್ ಉದ್ಯಾನ ಬೆಂಗಳೂರಿನಲ್ಲಿ ನಿರ್ಮಾಣವೇ ಆಗಲಿಲ್ಲ. ಹೀಗಾಗಿ ಉದ್ಯಾನ ನಗರಿ ಬೆಂಗಳೂರಿನ ಖ್ಯಾತಿಯನ್ನು ಉಳಿಸಲು ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದರು.

ಯಲಹಂಕ ಸುತ್ತಮುತ್ತ ನೂರಾರು ವಸತಿ ಬಡಾವಣೆಗಳಿದ್ದು, ಬಿಡಿಎ ಸಹ 25 ಸಾವಿರ ನಿವೇಶನಗಳ ಡಾ.ಶಿವರಾಮಕಾರಂತ ಬಡಾವಣೆ ಅಭಿವೃದ್ಧಿ ಪಡಿಸುತ್ತಿದೆ. ಜೊತೆಗೆ ಇಲ್ಲಿ 5-6 ಸಾವಿರ ಮನೆಗಳು ಈಗಾಗಲೇ ಇವೆ. ಭವಿಷ್ಯದಲ್ಲಿ 2 ಲಕ್ಷ ಜನರು ವಾಸಿಸುವ ಈ ಪ್ರದೇಶದಲ್ಲಿ ಇಂದಿರಾಗಾಂಧೀ ಜೈವಿಕ ಉದ್ಯಾನ, ಗಿಡಮೂಲಿಕೆಗಳ ದಿವ್ಯೌಷಧ ವನ, ವೃಕ್ಷೋಧ್ಯಾನ ಮತ್ತು ಕಿರು ಮೃಗಾಲಯ ಸ್ಥಾಪಿಸುವುದರಿಂದ ಜನಾಕರ್ಷಣೆಯ ಕೇಂದ್ರವೂ ಆಗುತ್ತದೆ ಜೊತೆಗೆ ಬೆಂಗಳೂರಿನ ಈ ಭಾಗದ ಜನರಿಗೆ ಅತ್ಯುತ್ತಮ ಶ್ವಾಸತಾಣ (ಲಂಗ್ಸ್ ಸ್ಪೇಸ್) ಲಭಿಸಿದಂತಾಗುತ್ತದೆ ಎಂದು ಈಶ್ವರ ಖಂಡ್ರೆ ವಿವರಿಸಿದರು.

ನವೆಂಬರ್ ಅಂತ್ಯಕ್ಕೆ ಶಂಕುಸ್ಥಾಪನೆ:

ಅರಣ್ಯ ಇಲಾಖೆಯಿಂದ ನೆಡುತೋಪಿಗಾಗಿ ಕರ್ನಾಟಕ ಅರಣ್ಯ ನಿಗಮ ನಿಯಮಿತಕ್ಕೆ ನೀಡಲಾಗಿರುವ ಈ 153 ಎಕರೆ ಪ್ರದೇಶವನ್ನು ಇಲಾಖೆಗೆ ಮರಳಿ ಪಡೆಯುವ ಪ್ರಕ್ರಿಯೆಯನ್ನೂ ಈಗಾಗಲೇ ಆರಂಭಿಸಲಾಗಿದ್ದು, ನವೆಂಬರ್ ಕೊನೆಯ ವಾರದಲ್ಲಿ ಈ ಬೃಹತ್ ಉದ್ಯಾನದ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದೂ ಈಶ್ವರ ಖಂಡ್ರೆ ತಿಳಿಸಿದರು.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಾದ ರಾಧಾ ದೇವಿ, ಶಿವಶಂಕರ್, ರವೀಂದ್ರ ಕುಮಾರ್ ಉಪಸ್ಥಿತರಿದ್ದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ