Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

2026ರಲ್ಲಿ 20 ಸಾವಿರ ಉದ್ಯೋಗಿಗಳ ನೇಮಕ, ಸದ್ಯಕ್ಕೆ ಸಂಬಳ ಏರಿಕೆ ; ಇನ್ಪೋಸಿಸ್‌ ಭರವಸೆ

ದೇಶದ ಎರಡನೇ ಅತಿ ದೊಡ್ಡ ಐಟಿ ಕಂಪನಿ ಇನ್ಫೋಸಿಸ್‌ ಉದ್ಯೋಗ ಆಕಾಂಕ್ಷಿಗಳು ಹಾಗೂ ತನ್ನ ಉದ್ಯೋಗಿಗಳಿಗೆ ಗುರುವಾರ ಸಿಹಿ ಸುದ್ದಿ ನೀಡಿದೆ. ಹಾಲಿ ಆರ್ಥಿಕ ವರ್ಷದಲ್ಲಿ 20,000 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವುದಾಗಿ ಹೇಳಿದೆ. ಅಲ್ಲದೆ ನಿಗದಿಯಂತೆ ವೇತನ ಹೆಚ್ಚಳವನ್ನು ಪ್ರಾರಂಭಿಸಿರುವುದಾಗಿ ತಿಳಿಸಿದೆ.

ದೇಶದ ಇನ್ನೆರಡು ಪ್ರಮುಖ ಐಟಿ ಕಂಪನಿಗಳಾದ ಟಿಸಿಎಸ್ ಮತ್ತು ವಿಪ್ರೋ ವೇತನ ಹೆಚ್ಚಳದ ಬಗ್ಗೆ ಎಚ್ಚರಿಕೆ ಹೆಜ್ಜೆ ಇರಿಸಿವೆ. ಆದರೆ ಇನ್ಫೋಸಿಸ್‌ 2026ನೇ ಆರ್ಥಿಕ ವರ್ಷಕ್ಕೆ ವೇತನ ಹೆಚ್ಚಳವನ್ನು ಪ್ರಾರಂಭಿಸಿರುವುದಾಗಿ ಹೇಳಿದೆ. ಮಾರ್ಚ್‌ಗೆ ಕೊನೆಗೊಂಡ ನಾಲ್ಕನೇ ತ್ರೈಮಾಸಿಕದಲ್ಲಿ ಕಂಪನಿಯ ಲಾಭ ಶೇ. 12ರಷ್ಟು ಕುಸಿತ ಕಂಡಿದ್ದರೂ ಕಂಪನಿ ಈ ನಿರ್ಧಾರ ಘೋಷಿಸಿದೆ.

2024-25ರಲ್ಲಿ 15,000-20,000 ಹೊಸ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವ ಗುರಿಯನ್ನು ತಲುಪಿರುವುದಾಗಿ ಕಂಪನಿ ಹೇಳಿದೆ. ಇದೀಗ 2025-26ರಲ್ಲಿ 20,000 ಹೊಸಬರನ್ನು ನೇಮಕ ಮಾಡಿಕೊಳ್ಳುವುದಾಗಿ ಹೇಳಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕದಿಂದಾಗಿ ಆರ್ಥಿಕ ಅನಿಶ್ಚಿತತೆ ಉಂಟಾಗಿರುವ ನಡುವೆಯೂ ಕಂಪನಿ ಈ ತೀರ್ಮಾನಕ್ಕೆ ಬಂದಿದೆ.

"ನಾವು ವೇತನ ಹೆಚ್ಚಳದ ಹಾದಿಯಲ್ಲಿ ಇದ್ದೇವೆ. ಹೆಚ್ಚಿನ ವೇತನ ಹೆಚ್ಚಳವನ್ನು ಜನವರಿಯಲ್ಲಿ ನೀಡಲಾಗಿದೆ. ಉಳಿದ ಸಂಬಳ ಏರಿಕೆಯನ್ನು ಏಪ್ರಿಲ್ 1 ರಿಂದ ಜಾರಿಗೆ ತರಲಾಗುವುದು. 2026ನೇ ಆರ್ಥಿಕ ವರ್ಷದಲ್ಲಿ 20,000ಕ್ಕೂ ಹೆಚ್ಚು ಹೊಸ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ನಾವು ಯೋಜಿಸಿದ್ದೇವೆ," ಎಂದು ಕಂಪನಿಯ ಹಣಕಾಸು ಅಧಿಕಾರಿ ಜಯೇಶ್ ಸಂಘರಾಜ್ಕಾ ಹೇಳಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*