Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ತವರಲ್ಲೇ ಅಮಾನವೀಯ ಘಟನೆ; ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಮೈಸೂರು, ಜನವರಿ 3: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರ ವರುಣಾ ವ್ಯಾಪ್ತಿಯಲ್ಲಿ ಬರುವ ಸಿದ್ದರಾಮಯ್ಯಹುಂಡಿ ಗ್ರಾಮದ ಬಳಿಯ ಶ್ರೀನಿವಾಸಪುರ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ವರದಿಯಾಗಿದೆ. ಗ್ರಾಮದ ಯಜಮಾನರು ದಲಿತ ಸಮುದಾಯದ ಕುಟುಂಬಕ್ಕೆ ಬಹಿಷ್ಕಾರ ಹಾಕಿದ್ದಾರೆ. ಸುರೇಶ್ ಎಂಬವರ ಕುಟುಂಬಕ್ಕೆ ಗ್ರಾಮದ ಯಜಮಾನರಾದ ಚಿಕ್ಕಂಡಯ್ಯ, ಬಸವಯ್ಯ, ಮೋಟ ಮಹದೇವಯ್ಯ, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಮಹದೇವ್ ಬಹಿಷ್ಕಾರ ಹಾಕಿದ್ದಾರೆ.





ಆದರೆ, ನ್ಯಾಯ ಪಂಚಾಯಿತಿ ಬಗ್ಗೆ ತಗಾದೆ ತೆಗೆದಿದ್ದ ಸುರೇಶ್, ತಮಗೆ ಅನ್ಯಾಯವಾಗಿದ್ದರಿಂದ ದಂಡದ ಮೊತ್ತ ಪಾವತಿಸುವುದಿಲ್ಲ ಎಂದು ಹೇಳಿದ್ದರು. ಇದರಿಂದ ಕೆರಳಿದ ಯಜಮಾನರು, ನ್ಯಾಯ ಪಂಚಾಯಿತಿ ವಿಚಾರದಲ್ಲಿ ತಮಗೆ ಮುಜುಗರ ಆಗಿದೆ ಎಂದು ಸುರೇಶ್ ಮೇಲೆ ಸಿಟ್ಟಾಗಿದ್ದಾರೆ. ಅದೇ ಕೋಪದಲ್ಲಿ, ತಪ್ಪು ಕಾಣಿಕೆ ಕಟ್ಟುವವರೆಗೂ ತಮ್ಮ ಕುಲಕ್ಕೆ ಸೇರಿಸುವುದಿಲ್ಲ ಎಂದು ಬಹಿಷ್ಕಾರ ಹಾಕಿದ್ದಾರೆ.



ಸುರೇಶ್ ಹಾಗೂ ಅವರ ತಾಯಿ ಮಹದೇವಮ್ಮ ಇಬ್ಬರನ್ನು ಗ್ರಾಮಸ್ಥರು ಹೊರಗಿಟ್ಟಿದ್ದಾರೆ. ಹಬ್ಬ, ಸಾವು-ನೋವುಗಳ ಆಚರಣೆ ವಿಚಾರದಲ್ಲೂ ಬಹಿಷ್ಕಾರ ಹಾಕಲಾಗಿದೆ. ಈ ವಿಚಾರವಾಗಿ ಜಿಲ್ಲಾಧಿಕಾರಿ, ಪೊಲೀಸರು, ತಹಶೀಲ್ದಾರ್​ಗೆ ಈಗಾಗಲೇ ದೂರು ನೀಡಿದ್ದರೂ ಸಂತ್ರಸ್ತರಿಗೆ ನ್ಯಾಯ ಸಿಕ್ಕಿಲ್ಲ. ಸುರೇಶ್ ಕುಟುಂಬದ ಜೊತೆ ಯಾರೇ ಸಂಪರ್ಕಕ್ಕೆ ಬಂದರೂ 5,000 ರೂ. ದಂಡ ವಿಧಿಸಬೇಕು ಎಂದು ಗ್ರಾಮದ ಯಜಮಾನರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ