Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಂಪೂರ ಗ್ರಾ.ಪಂ ಸೇರಿದಂತೆ ವಿವಿಧ ಕಾಮಗಾರಿ ಪರಿಶೀಲನೆ

ವಿವಿದೆಡೆ ಸಿಇಓ ಗಜಾನನ ಬಾಲೆ ಭೇಟಿ ಪರಿಶೀಲನೆ



ಬಾಗಲಕೋಟೆ, ಜುಲೈ ೨೨ : ತಾಲೂಕಿನ ರಾಮಪುರ ಗ್ರಾಮಕ್ಕೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಅವರು ಮಂಗಳವಾರ ಭೇಟಿ ನೀಡಿ ರಾಂಪೂರ ಗ್ರಾಮ ಪಂಚಾಯಿತಿ, ಡಿಜಿಟಲ್ ಗ್ರಂಥಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ತಿಮ್ಮಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸೇವೆಗಳ ಪ್ರಗತಿಯನ್ನು ಪರಿಶೀಲಿಸಿದರು.    
ರಾಮಪುರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಂಚಾಯಿತಿಯ ಆಡಳಿತಾತ್ಮಕ ಕಾರ್ಯನಿರ್ವಹಣೆ, ಸಾರ್ವಜನಿಕ ಸೇವೆಗಳ ವಿತರಣೆ, ಸ್ವಚ್ಛತೆ, ತೆರಿಗೆ ಸಂಗ್ರಹಣೆ, ವಿವಿಧ ಸರ್ಕಾರಿ ಯೋಜನೆಗಳ ಅನುಷ್ಠಾನ ಹಾಗೂ ದಾಖಲೆಗಳ ನಿರ್ವಹಣೆಯನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಗ್ರಾಮಸ್ಥರಿಗೆ ಗುಣಮಟ್ಟದ ಸೇವೆಗಳನ್ನು ಸಮಯಕ್ಕೆ ಸರಿಯಾಗಿ ಒದಗಿಸುವಂತೆ ಸೂಚಿಸಿದರು. ನಂತರ ಡಿಜಿಟಲ್ ಗ್ರಂಥಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಯುವಜನರಿಗೆ ಲಭ್ಯವಿರುವ ಸೌಲಭ್ಯಗಳು, ಕಂಪ್ಯೂಟರ್ ವ್ಯವಸ್ಥೆ, ಇಂಟರ್ನೆಟ್ ಸಂಪರ್ಕ ಹಾಗೂ ಓದುಗರ ಬಳಕೆಯ ಕುರಿತು ಮಾಹಿತಿ ಪಡೆದು, ಡಿಜಿಟಲ್ ಗ್ರಂಥಾಲಯವನ್ನು ಹೆಚ್ಚು ಪರಿಣಾಮಕಾರಿಯಾಗಿ ಬಳಸುವಂತೆ ಪ್ರೋತ್ಸಾಹಿಸಿದರು.
ರಾಮಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ವೇಳೆ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಆರೋಗ್ಯ ಸೇವೆಗಳು, ವೈದ್ಯಕೀಯ ಸಿಬ್ಬಂದಿಯ ಹಾಜರಾತಿ, ಔಷಧಗಳ ಲಭ್ಯತೆ, ಸ್ವಚ್ಛತೆ ಹಾಗೂ ರೋಗಿಗಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳನ್ನು ಪರಿಶೀಲಿಸಿದರು. ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಯಾವುದೇ ನಿರ್ಲಕ್ಷ್ಯ ತೋರಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಳಿಕ ತಿಮ್ಮಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲೆಗೆ ಭೇಟಿ ನೀಡಿ ಶಾಲೆಯ ಶೈಕ್ಷಣಿಕ ವಾತಾವರಣ, ಮೂಲಸೌಕರ್ಯ, ವಿದ್ಯಾರ್ಥಿಗಳ ಹಾಜರಾತಿ ಹಾಗೂ ಮಧ್ಯಾಹ್ನ ಉಪಾಹಾರ ವ್ಯವಸ್ಥೆಯನ್ನು ಪರಿಶೀಲಿಸಿದರು. ಇದೇ ವೇಳೆ ಶಾಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕಂಪೌಂಡ್ ಗೋಡೆ ಕಾಮಗಾರಿಯನ್ನು ವೀಕ್ಷಿಸಿ, ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಿತ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಇಒ ಗಜಾನನ ಬಾಳೆ ಅವರು ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಪಂಚಾಯಿತಿ ಸೇವೆಗಳ ಗುಣಮಟ್ಟವನ್ನು ಮತ್ತಷ್ಟು ಉತ್ತಮಗೊಳಿಸಲು ಜಿಲ್ಲಾಡಳಿತ ಬದ್ಧವಾಗಿದ್ದು, ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸರ್ಕಾರದ ಯೋಜನೆಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸಬೇಕು ಎಂದು ಹೇಳಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಮಕ್ಕಳಿಗೆ ಕಂಪಾಸ, ನೋಟಬುಕ್ ವಿತರಿಸಿದ ಶಾಸಕ ಪಾಟೀಲ ನೇಗಿನಹಾಳ ಗ್ರಾಮದಲ್ಲಿ  ಪಾಟೀಲರಿಂದ  ಹೈಟೆಕ್ ಬಸ್ ನಿಲ್ದಾಣ ಉದ್ಘಾಟನೆಮುಂದಿನ ಎರಡು ವರ್ಷದಲ್ಲಿ  ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶಾಸಕ ಬಾಬಾಸಾಹೇಬ ಪಾಟೀಲ ಹೊಸ ಸಂಕಲ್ಪಪರಿಸರ ಸ್ನೇಹಿ ಗಣೇಶೋತ್ಸವ ಅಭಿಯಾನಜಿಲ್ಲೆಯಲ್ಲಿ ಮುಂಗಾರು ಕ್ಷೀಣ: ರೈತರ ನೆರವಿಗೆ ಜಿಲ್ಲಾಡಳಿತ ಸದಾ ಸಿದ್ದಒಳಮೀಸಲಾತಿ ಜಾರಿಗೊಳಿಸಿ  ಕೆಎಂಎಫ್ ನೇಮಕಾತಿ ಮಾಡಿ  : ಎಲ್ ಮಾರೆಣ್ಣ ಒತ್ತಾಯ ಅಧಿಕಾರದಿಂದ ವಿದ್ಯುತ್ ದುರ್ಬಳಕೆ, ಸಾರ್ವಜನಿಕರ ಕೆಲಸಗಳಿಗೆ ನಿರ್ಲಕ್ಷ್ಯ : ಶಂಕರ ಬಂಡೆ  ಗ್ರಾಮಸ್ಥರ ಆಕ್ರೋಶಮಾಸಿಕ ವೇತನವನ್ನು ಹೆಚ್ಚಿಸಿ : ಹೊರಗುತ್ತಿಗೆ ನೌಕರರಿಂದ ಡಿ ಎಚ್ ಓ ಗೆ  ಮನವಿ ಶಿಸ್ತು, ಶ್ರಮ ಮತ್ತು ಸಂಕಲ್ಪವೇ ಯಶಸ್ಸಿನ ಮೆಟ್ಟಿಲುಗಳು : ಜಯಪ್ರಕಾಶ್  ಜೆ.ಗುಪ್ತಾಕುರುಗೋಡು ತಾಲೂಕಿನ ವಿವಿಧ ಗ್ರಾ.ಪಂ.ಗಳಿಗೆ ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಭೇಟಿ: ವಿಬಿ-ಜಿ ರಾಮ್-ಜಿ ಕಾಮಗಾರಿಗಳ ಪರಿಶೀಲನೆ