ಬಿಕ್ಲು ಶಿವ ಕೊಲೆ ಕೇಸ್: ಭೈರತಿಗೆ ಮಧ್ಯಂತರ ರಿಲೀಫ್
ಬೆಂಗಳೂರು, ಆಗಸ್ಟ್ 13: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ಗೆ ಮಧ್ಯಂತರ ರಿಲೀಫ್ ಸಿಕ್ಕಿದೆ. ಶಾಸಕ ಭೈರತಿ ಬಸವರಾಜ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ನ್ಯಾ. ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ ಮಧ್ಯಂತರ ಆದೇಶ ನೀಡಿದೆ. ಪ್ರಕರಣದ ತನಿಖೆಗೆ ಸಹಕರಿಸಲು ಭೈರತಿ ಬಸವರಾಜ್ಗೆ ಸೂಚನೆ ನೀಡಿದೆ. ಪ್ರಕರಣ ರದ್ದು ಕೋರಿ ಶಾಸಕ ಭೈರತಿ ಬಸವರಾಜ್ ಅರ್ಜಿ ಸಲ್ಲಿಸಿದ್ದರು. ಭೈರತಿ ಬಸವರಾಜ್ ಈವರೆಗೆ ವಿಚಾರಣೆಗೆ ಸಹಕರಿಸಿದ್ದಾರೆಂದು ಭೈರತಿ ಬಸವರಾಜ್ ಪರ ವಕೀಲರು ವಾದಿಸಿದರು.
ಕಳೆದ ತಿಂಗಳು ಜುಲೈ 15 ರಂದು ನಡೆದ ಬಿಕ್ಲು ಶಿವ ಕೊಲೆಗೆ ಭೈರತಿ ಸುರೇಶ್ ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಭಾರತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಭಾರತಿನಗರ ಪೊಲೀಸರು ಕೊಲೆ ಪ್ರಕರಣ ಸಂಬಂಧ ಜಗದೀಶ್, ವಿಮಲ್, ಕಿರಣ್, ಅನಿಲ್ ಸೇರಿದಂತೆ ಶಾಸಕ ಭೈರತಿ ಬಸವರಾಜ್ ವಿರುದ್ಧವೂ ಎಫ್ಐಆರ್ ದಾಖಲಿಸಿದ್ದಾರೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.