Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಗರದ ಕೇಂದ್ರ ಕಾರಾಗೃಹದಲ್ಲಿ  ಅಂತರಾಷ್ಟ್ರೀಯ ಯೋಗ ದಿನಾಚರಣೆ :

ವಿಜಯಪುರ, ಜೂ ೨3  ಕಾರಾಗೃಹವು ಕೇವಲ ಬಂದಿಗಳ ಕೇಂದ್ರವಲ್ಲ, ಇದೊಂದು ಸುಧಾರಣಾ ಕೇಂದ್ರವಾಗಿದೆ ಎಂದು ಕಾರಾಗೃಹದ ಅಧೀಕ್ಷಕರಾದ ಮಲ್ಲಿಕಾರ್ಜುನ ಎಸ್. ಮಾಳಿ ಅವರು ಹೇಳಿದರು.ಅವರು ನಗರದ ಕೇಂದ್ರ ಕಾರಾಗೃಹದಲ್ಲಿ ಆಯೋಜಿಸಲಾಗಿದ್ದ  ಅಂತರಾಷ್ಟ್ರೀಯ ಯೋಗ ದಿನಾಚಾರಣೆಯ ಅಂಗವಾಗಿ  ಯೋಗ ತರಬೇತಿ  ಸಪ್ತಾಹ ಕಾರ್ಯಕ್ರಮದಲ್ಲಿ   ಮಾತನಾಡಿದರು.
ಬಂದಿಗಳಲ್ಲಿ ಪರಿವರ್ತನೆ ತರುವ ಪರಿವರ್ತನಾ ನಿಲಯವೂ ಆಗಿದೆ. ದೈನಂದಿನ ಯೋಗಾಭ್ಯಾಸವು ಬಂದಿಗಳ ಪುನರ್ವಸತಿ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಅತ್ಯಂತ ಸಹಕಾರಿಯಾಗಿದ್ದು,ಪ್ರತಿಯೊಬ್ಬರೂ ನಿಯಮಿತವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಳ್ಳಬೇಕು.  ಮುಂಬರುವ ದಿನಗಳಲ್ಲಿ ಕಾರಾಗೃಹದಲ್ಲಿ ನಿರಂತರವಾಗಿ ಯೋಗಾಭ್ಯಾಸ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುವುದು. ಕಾರಾಗೃಹದ ಬಂದಿಗಳನ್ನು ಉತ್ತಮ ನಾಗರೀಕರಾಗಿ ಸಮಾಜದ ಮುಖ್ಯ ವಾಹಿನಿಗೆ ಕಳುಹಿಸಲು ಶ್ರಮಿಸುವುದಾಗಿ ಹೇಳಿದರು.
ಆರ್ಟ ಆಪ್ ಲಿವಿಂಗ್ ಶ್ರೀ ಬಿ.ಎಂ. ಪಾಟೀಲ ಗುರೂಜಿ ಮಾತನಾಡಿ, ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಗೆ ಸಹಕಾರಿಯಾಗುವುದರ ಜೊತೆಗೆ ಒತ್ತಡ ನಿವಾರಣೆ, ಏಕಾಗ್ರತೆ ಮತ್ತು ಆತ್ಮವಿಶ್ವಾಸ ಹೆಚ್ಚಿಸಲು ನೆರವಾಗುತ್ತದೆ ಎಂದು ಹೇಳಿದರು. ಬಂದಿಗಳ ಮನಃಪರಿವರ್ತನೆ ಯಾಗಲು  ಧನಾತ್ಮಕ ಚಿಂತನೆ ಬೆಳೆಸುವುದು ಹಾಗೂ ಸಿಬ್ಬಂದಿಗಳ ಒತ್ತಡ ನಿರ್ವಹಣೆಯ ಉದ್ದೇಶದಿಂದ ವಿಶೇಷ ಯೋಗ, ಪ್ರಾಣಾಯಾಮ ಮತ್ತು ಧ್ಯಾನ  ಎಕಾಗ್ರತೆ,  ಮತ್ತು ಆತ್ಮವಿಶ್ವಾಸ ಹೆಚ್ಚಿಸಲು ನೆರವಾಗುತ್ತದೆ. ಉತ್ತಮ, ಸದೃಡ ಆರೋಗ್ಯ ಹೊಂದಲು ಯೋಗ ಸಹಾಯಕಾರಿಯಾಗುತ್ತದೆ ಎಂದರು. ಶಿಕ್ಷಕ ಡಿ.ಎಸ್.ದೀಕ್ಷಿತ ನಿರೂಪಿಸಿದರು. ಸಹಾಯಕ ಅಧಿಕ್ಷಕರಾದ ಅಭಿಜಿತ್ ಜಾಯಕ್ಕನವರ    ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
(ಛಾಯಾಚಿತ್ರ ಬಿ-೧,ಬಿ-೨,ಬಿ-೩)

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯುತ್ ಖಾಸಗೀಕರಣ ಪ್ರಕ್ರಿಯೆ ಕೈಬಿಡುವಂತೆ ಒತ್ತಾಯಿಸಿ ರೈತರ ಮನವಿವಿದ್ಯುತ್ ವಿತರಣೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ : ಸರಕಾರದ ನೀತಿಗೆ ರೈತರ ಆಕ್ರೋಶದೇಶ ಸೇವೆ ಮಾಡೋದು ಪವಿತ್ರವಾದ ಕಾರ್ಯ : ಜಟ್ಟೆಪ್ಪ ರವಳಿಜೂ. ೨೪ ರಂದು ಮೊಹರಮ್ ಹಬ್ಬದ ಪ್ರಸಿದ್ದ ಆಟವಿ ಖತಾಲ ಆಚರಣೆಜೂ.28 ರಂದು ಲಯನ್ಸ್‌ ಅಧಿಕಾರ ಹಸ್ತಾಂತರ26 ರಂದು  ಪ್ರತಿಭಾ ಪುರಸ್ಕಾರ  ಸಮಾರಂಭ "ಗಾವಠಾಣ ಜಾಗ ಅತಿಕ್ರಮಣ ತೆರವಿಗೆ ಆಗ್ರಹಿಸಿ ಧರಣಿ"ಮಹಾರಾಷ್ಟ್ರದಲ್ಲಿಯೂ ನೀರಿನ ಅಭಾವವಿದ್ದು, ರಾಜ್ಯಕ್ಕೆ ನೀರು ಬಿಡುವುದು ಕಷ್ಟಕರ: ಸಚಿವ ಸತೀಶ್‌ ಜಾರಕಿಹೊಳಿಸಿಂದಗಿ ಮತ್ತು ಆಲಮೇಲ ತಾಲೂಕುಗಳ ಕುಡಿಯುವ ನೀರಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆನಗರದ ಕೇಂದ್ರ ಕಾರಾಗೃಹದಲ್ಲಿ  ಅಂತರಾಷ್ಟ್ರೀಯ ಯೋಗ ದಿನಾಚರಣೆ :