LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

17 ಭಾರತೀಯರನ್ನು ಖಂಡಿತ ಬಿಡುಗಡೆ ಮಾಡುತ್ತೇವೆ: ಸಚಿವ ಜೈಶಂಕರ್​​ ಕರೆ ಗೌರವಿಸಿದ ಇರಾನ್

ಇರಾನ್,ಏಪ್ರಿಲ 15:   ಹಾರ್ಮುಜ್ ಜಲಮಾರ್ಗದ ಬಳಿ ಇಸ್ರೇಲ್​​ ಧ್ವಜವಿದ್ದ ಸರಕು ಸಾಗಿಸುವ ಹುಡಗನ್ನು ವಶಪಡಿಸಿಕೊಂಡಿತ್ತು. ಇದರಲ್ಲಿ 17 ಭಾರತೀಯ ಸಿಬ್ಬಂದಿಗಳಿದ್ದು, ಇದೀಗ ಅವರನ್ನು ಭೇಟಿ ಮಾಡಲು ಅವಕಾಶ ನೀಡಬೇಕು ಹಾಗೂ ಅವರನ್ನು ಬಿಡುಗಡೆ ಮಾಡಬೇಕು ಎಂದು ಭಾರತದ ವಿದೇಶಾಂಗ ಸಚಿವ ಎಸ್​​​. ಜೈಶಂಕರ್​​​ ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್-ಅಬ್ದುಲ್ಲಾಹಿಯಾನ್ ಅವರಿಗೆ ಕರೆ ಮಾಡಿದ್ದಾರೆ. ಜೈಶಂಕರ್​​ ಅವರ ಮಾತನ್ನು ಗೌರವಿಸಿ ಇರಾನ್ ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಭೇಟಿ ಮಾಡಲು ಅವಕಾಶ ನೀಡಿದೆ.

ಅಮೀರ್-ಅಬ್ದುಲ್ಲಾಹಿಯಾನ್ ಮತ್ತು ಎಸ್ ಜೈಶಂಕರ್ ಅವರು ಭಾನುವಾರ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಈ ಸಮಯದಲ್ಲಿ 17 ಭಾರತೀಯ ಸಿಬ್ಬಂದಿಗಳನ್ನು ಭಾರತ ಭೇಟಿ ಮಾಡಬಹುದು ಎಂದು ಹೇಳಿದ್ದಾರೆ. ಈ ಮಾತುಕತೆಯಲ್ಲಿ MSC ಏರೀಸ್‌ ಹಡಗಿನಲ್ಲಿರುವ ಭಾರತೀಯರನ್ನು ಬಿಡುಗಡೆ ಮಾಡುವಂತೆ ಕೂಡ ಕೇಳಿಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಮೀರ್-ಅಬ್ದುಲ್ಲಾಹಿಯಾನ್ ಖಂಡಿತವಾಗಿ ಜೈಶಂಕರ್​​ ನಿಮ್ಮ ಮನವಿಯನ್ನು ಗೌರವಿಸುತ್ತೇವೆ. ಈಗಾಗಗಲೇ ನಾವು ವಶಪಡಿಸಿಕೊಂಡಿರುವ ಹಡಗಿನ ಎಲ್ಲ ಮಾಹಿತಿಯನ್ನು ಪಡೆಯುತ್ತಿದ್ದೇವೆ. ನಿಮ್ಮ ಅಧಿಕಾರಿಗಳು ಹಡಗಿನಲ್ಲಿದ್ದ 17 ಭಾರತೀಯರನ್ನು ಭೇಟಿಯಾಗಲು ಅವಕಾಶ ನೀಡುತ್ತೇವೆ ಎಂದು ಹೇಳಿದ್ದಾರೆ. ಇನ್ನು ಇರಾನ್​​​​ ಈ ಕ್ರಮದಿಂದ ಜೈಶಂಕರ್ ಅವರು 17 ಭಾರತೀಯ ಸಿಬ್ಬಂದಿಗಳ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ

ಈಗಾಗಲೇ ಇರಾನ್ ಮತ್ತು ಇಸ್ರೇಲ್​​ ನಡುವೆ ಯುದ್ಧ ಸ್ಥಿತಿ ಇದೆ. ಈ ಕಾರಣದಿಂದ ಇರಾನ್​​​ ಇಸ್ರೇಲ್​​ನ ಈ ಹಡಗನ್ನು ವಶಪಡಿಸಿಕೊಂಡಿದೆ. ಆದರೆ ಅದರಲ್ಲಿರುವ ಎಲ್ಲ ಸಿಬ್ಬಂದಿ ಯೋಗಕ್ಷೇಮ ಸ್ಥಿರವಾಗಿದೆ ಎಂದು ಹೇಳಿದ್ದಾರೆ. ಇನ್ನು ಈ ಬಗ್ಗೆ ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ಪ್ರಕಾರ ಅಡ್ರಿಯೆನ್ನೆ ವ್ಯಾಟ್ಸನ್ ಹಡಗಿನ ಸಿಬ್ಬಂದಿ ಭಾರತೀಯ, ಫಿಲಿಪಿನೋ, ಪಾಕಿಸ್ತಾನಿ, ರಷ್ಯನ್ ಮತ್ತು ಎಸ್ಟೋನಿಯನ್ ಪ್ರಜೆಗಳು ಎಂದು ಗುರುತಿಸಿದೆ. ಇದರ ಜತೆಗೆ ಭಾರತ ಇರಾನ್​​ ವಶದಲ್ಲಿರುವ ಭಾರತೀಯರನ್ನು ಬಿಡುಗಡೆ ಮಾಡಲು ಇರಾನ್​​ ಜತೆಗೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್