Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

17 ಭಾರತೀಯರನ್ನು ಖಂಡಿತ ಬಿಡುಗಡೆ ಮಾಡುತ್ತೇವೆ: ಸಚಿವ ಜೈಶಂಕರ್​​ ಕರೆ ಗೌರವಿಸಿದ ಇರಾನ್

ಇರಾನ್,ಏಪ್ರಿಲ 15:   ಹಾರ್ಮುಜ್ ಜಲಮಾರ್ಗದ ಬಳಿ ಇಸ್ರೇಲ್​​ ಧ್ವಜವಿದ್ದ ಸರಕು ಸಾಗಿಸುವ ಹುಡಗನ್ನು ವಶಪಡಿಸಿಕೊಂಡಿತ್ತು. ಇದರಲ್ಲಿ 17 ಭಾರತೀಯ ಸಿಬ್ಬಂದಿಗಳಿದ್ದು, ಇದೀಗ ಅವರನ್ನು ಭೇಟಿ ಮಾಡಲು ಅವಕಾಶ ನೀಡಬೇಕು ಹಾಗೂ ಅವರನ್ನು ಬಿಡುಗಡೆ ಮಾಡಬೇಕು ಎಂದು ಭಾರತದ ವಿದೇಶಾಂಗ ಸಚಿವ ಎಸ್​​​. ಜೈಶಂಕರ್​​​ ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್-ಅಬ್ದುಲ್ಲಾಹಿಯಾನ್ ಅವರಿಗೆ ಕರೆ ಮಾಡಿದ್ದಾರೆ. ಜೈಶಂಕರ್​​ ಅವರ ಮಾತನ್ನು ಗೌರವಿಸಿ ಇರಾನ್ ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಭೇಟಿ ಮಾಡಲು ಅವಕಾಶ ನೀಡಿದೆ.

ಅಮೀರ್-ಅಬ್ದುಲ್ಲಾಹಿಯಾನ್ ಮತ್ತು ಎಸ್ ಜೈಶಂಕರ್ ಅವರು ಭಾನುವಾರ ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಈ ಸಮಯದಲ್ಲಿ 17 ಭಾರತೀಯ ಸಿಬ್ಬಂದಿಗಳನ್ನು ಭಾರತ ಭೇಟಿ ಮಾಡಬಹುದು ಎಂದು ಹೇಳಿದ್ದಾರೆ. ಈ ಮಾತುಕತೆಯಲ್ಲಿ MSC ಏರೀಸ್‌ ಹಡಗಿನಲ್ಲಿರುವ ಭಾರತೀಯರನ್ನು ಬಿಡುಗಡೆ ಮಾಡುವಂತೆ ಕೂಡ ಕೇಳಿಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಅಮೀರ್-ಅಬ್ದುಲ್ಲಾಹಿಯಾನ್ ಖಂಡಿತವಾಗಿ ಜೈಶಂಕರ್​​ ನಿಮ್ಮ ಮನವಿಯನ್ನು ಗೌರವಿಸುತ್ತೇವೆ. ಈಗಾಗಗಲೇ ನಾವು ವಶಪಡಿಸಿಕೊಂಡಿರುವ ಹಡಗಿನ ಎಲ್ಲ ಮಾಹಿತಿಯನ್ನು ಪಡೆಯುತ್ತಿದ್ದೇವೆ. ನಿಮ್ಮ ಅಧಿಕಾರಿಗಳು ಹಡಗಿನಲ್ಲಿದ್ದ 17 ಭಾರತೀಯರನ್ನು ಭೇಟಿಯಾಗಲು ಅವಕಾಶ ನೀಡುತ್ತೇವೆ ಎಂದು ಹೇಳಿದ್ದಾರೆ. ಇನ್ನು ಇರಾನ್​​​​ ಈ ಕ್ರಮದಿಂದ ಜೈಶಂಕರ್ ಅವರು 17 ಭಾರತೀಯ ಸಿಬ್ಬಂದಿಗಳ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ

ಈಗಾಗಲೇ ಇರಾನ್ ಮತ್ತು ಇಸ್ರೇಲ್​​ ನಡುವೆ ಯುದ್ಧ ಸ್ಥಿತಿ ಇದೆ. ಈ ಕಾರಣದಿಂದ ಇರಾನ್​​​ ಇಸ್ರೇಲ್​​ನ ಈ ಹಡಗನ್ನು ವಶಪಡಿಸಿಕೊಂಡಿದೆ. ಆದರೆ ಅದರಲ್ಲಿರುವ ಎಲ್ಲ ಸಿಬ್ಬಂದಿ ಯೋಗಕ್ಷೇಮ ಸ್ಥಿರವಾಗಿದೆ ಎಂದು ಹೇಳಿದ್ದಾರೆ. ಇನ್ನು ಈ ಬಗ್ಗೆ ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ಪ್ರಕಾರ ಅಡ್ರಿಯೆನ್ನೆ ವ್ಯಾಟ್ಸನ್ ಹಡಗಿನ ಸಿಬ್ಬಂದಿ ಭಾರತೀಯ, ಫಿಲಿಪಿನೋ, ಪಾಕಿಸ್ತಾನಿ, ರಷ್ಯನ್ ಮತ್ತು ಎಸ್ಟೋನಿಯನ್ ಪ್ರಜೆಗಳು ಎಂದು ಗುರುತಿಸಿದೆ. ಇದರ ಜತೆಗೆ ಭಾರತ ಇರಾನ್​​ ವಶದಲ್ಲಿರುವ ಭಾರತೀಯರನ್ನು ಬಿಡುಗಡೆ ಮಾಡಲು ಇರಾನ್​​ ಜತೆಗೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ