Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೀರಾವರಿ ವಂಚಿತ ಬೆಳಗಾವಿ ತರಕಾರಿ ರೈತರು: ಹೋರಾಟದ ಎಚ್ಚರಿಕೆ!

ಬೆಳಗಾವಿ: (ಡಿ.11) ರಾಜ್ಯದ ಅತಿ ಹೆಚ್ಚು ತರಕಾರಿ ಉತ್ಪಾದಿಸುವ ಪ್ರದೇಶಗಳಲ್ಲಿ ಒಂದಾದ ಬೆಳಗಾವಿ ಜಿಲ್ಲೆಯ ಖಾನಾಪುರ, ಕಿತ್ತೂರು, ಮತ್ತು ಬೈಲಹೊಂಗಲ ತಾಲ್ಲೂಕುಗಳ ರೈತರಿಗೆ ಸತತ ಎರಡು ವರ್ಷಗಳಿಂದ ಹನಿ ನೀರಾವರಿ ಸೌಲಭ್ಯದ ಕಾರ್ಯಾದೇಶಗಳನ್ನು ನೀಡದಿರುವ ಕುರಿತು 'ನೇಗಿಲ ಯೋಗಿ ರೈತ ಸೇವಾ ಸಂಘ'ವು  ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಈ ಮೂರೂ ಹಿಂದುಳಿದ ತಾಲ್ಲೂಕುಗಳಲ್ಲಿ ಸುಮಾರು 10,000 ರಿಂದ  15,000 ಹೆಕ್ಟೇರ್‌ ಪ್ರದೇಶದಲ್ಲಿ ತರಕಾರಿ ಬೆಳೆಯಲಾಗುತ್ತದೆ. ಇಲ್ಲಿನ ಉತ್ಪನ್ನಗಳು ಹೈದರಾಬಾದ್, ಕೊಲ್ಲಾಪುರ, ಬಾಗಲಕೋಟೆಯಂತಹ ರಾಜ್ಯದ ಹಾಗೂ ಹೊರರಾಜ್ಯದ ಮಾರುಕಟ್ಟೆಗಳಿಗೆ ಮತ್ತು ವಿದೇಶಗಳಿಗೂ ರಫ್ತಾಗುತ್ತವೆ. ಈ ಪ್ರದೇಶದ ರೈತರು ತಮ್ಮ ಜೀವನಕ್ಕಾಗಿ ಸಂಪೂರ್ಣವಾಗಿ ತರಕಾರಿ ಬೆಳೆಯನ್ನೇ ಅವಲಂಬಿಸಿದ್ದಾರೆ.


ಪ್ರತಿ ಎಕರೆಗೆ ₹40,000 ದಿಂದ ₹50,000  ಖರ್ಚು ಮಾಡಿ, ಡಿಸೆಂಬರ್-ಜನವರಿಯಲ್ಲಿ ತರಕಾರಿ ಸಸಿಗಳನ್ನು ನಾಟಿ ಮಾಡುವ ಹಂತದಲ್ಲಿ, ರೈತರಿಗೆ ನೀರಿನ ಅಭಾವ ಮತ್ತು ಕಾರ್ಮಿಕರ ಕೊರತೆಯು ತೀವ್ರ ಸವಾಲಾಗಿ ಪರಿಣಮಿಸಿದೆ. ಈ ಸಮಸ್ಯೆಗಳಿಗೆ ಹನಿ ನೀರಾವರಿ ಪದ್ಧತಿಯೇ ಪರಿಹಾರವಾಗಿದ್ದು, ಇದರಿಂದ ನೀರಿನ ಉಳಿತಾಯ, ಕಳೆ ನಿಯಂತ್ರಣ ಮತ್ತು ರಸಾವರಿ  ಮೂಲಕ ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಾಗುತ್ತದೆ. ಆದರೆ, ಸಂಘದ ಅಧ್ಯಕ್ಷ  ರವಿ ಪಾಟೀಲ ಹಾಗೂ ಪದಾಧಿಕಾರಿಗಳಾದ ಕಲ್ಲಪ್ಪ ಹರಿಯಾಲ, ಸೋಮನಿಂಗ ಮಳ್ಳಿಕೇರಿ ಮತ್ತು ಮನೋಹರ್‌ ಸುಳೇಭಾವಿಕರ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ, ೨೦೨೪-೨೫ ಹಾಗೂ ೨೦೨೫-೨೬ನೇ ಸಾಲುಗಳಲ್ಲಿ ಹನಿ ನೀರಾವರಿ ಯೋಜನೆಗೆ ಸಲ್ಲಿಸಿದ ಅರ್ಜಿಗಳಿಗೆ ಯಾವುದೇ ಕಾರ್ಯಾದೇಶ  ನೀಡಲಾಗಿಲ್ಲ ಎಂದು ಆರೋಪಿಸಿದ್ದಾರೆ.

 ಜೊತೆಗೆ, ಹೊಸ ತಾಂತ್ರಿಕತೆಗಳು ಮತ್ತು ಪ್ಲಾಸ್ಟಿಕ್ ಹೊದಿಕೆಯಂತಹ ಇತರ ಸೌಲಭ್ಯಗಳನ್ನೂ ನೀಡದೆ ಸರ್ಕಾರವು ಈ ಪ್ರದೇಶದ ರೈತರನ್ನು ಕಡೆಗಣಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ಇತ್ತೀಚಿನ ದಿನಗಳಲ್ಲಿ ಚುನಾಯಿತ ಸರ್ಕಾರಗಳು ರೈತ ಮತ್ತು ಬಡ ವರ್ಗದವರನ್ನು ಕಡೆಗಣಿಸುತ್ತಿರುವುದು ಖಂಡನೀಯ," ಎಂದು ಸಂಘವು ತೀವ್ರ ಎಚ್ಚರಿಕೆ ನೀಡಿದೆ. ತಕ್ಷಣವೇ ನಿಗದಿಪಡಿಸಿದ ಗುರಿಗಳ ಅನ್ವಯ ಕಾರ್ಯಾದೇಶಗಳನ್ನು ನೀಡಿ, ಹೆಚ್ಚಿನ ಅನುದಾನ ಒದಗಿಸಿ ರೈತರನ್ನು ಸಬಲೀಕರಣಗೊಳಿಸಬೇಕು. ಇಲ್ಲವಾದಲ್ಲಿ, "ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ನಿರ್ಣಯಗಳನ್ನು ಕೈಗೊಳ್ಳಬೇಕಾಗುತ್ತದೆ," ಎಂದು ನೇಗಿಲ ಯೋಗಿ ರೈತ ಸೇವಾ ಸಂಘವು ರಾಜ್ಯ ಸರ್ಕಾರವನ್ನು ಎಚ್ಚರಿಸಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ