Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವೇಚನೆ, ಆತ್ಮಸಾಕ್ಷಿಯಂತೆ ಧರ್ಮದ ಹೆಸರು ಬರೆಸಿ: ಈಶ್ವರ ಖಂಡ್ರೆ

• ಸಾಮಾಜಿಕ ನ್ಯಾಯಕೊಟ್ಟ ಸಮಾಜ ಇಂದು ನ್ಯಾಯ ಕೇಳುವಂತಾಗಿದೆ- ಈಶ್ವರ ಖಂಡ್ರೆ


• ವೀರಶೈವ-ಲಿಂಗಾಯತ ಧರ್ಮಕ್ಕಾಗಿ ಮಹಾಸಭಾದಿಂದ ಹೋರಾಟ ಮುಂದುವರಿಕೆ – ಈಶ್ವರ ಖಂಡ್ರೆ


• ನವಕರ್ನಾಟಕದ ನಿರ್ಮಾಣಕ್ಕೆ ವೀರಶೈವ ಲಿಂಗಾಯತ ಮಠಮಾನ್ಯಗಳ ಕೊಡುಗೆ ಅಪಾರ - ಖಂಡ್ರೆ


ಹುಬ್ಬಳ್ಳಿ, ಸೆ.19: ಏನೇ ಅಭಿಪ್ರಾಯ ಭೇದವಿದ್ದರೂ ಬದಿಗಿಟ್ಟು, ಸಮಾಜದ ಹಿತಕ್ಕಾಗಿ ಎಲ್ಲರೂ ಒಮ್ಮತದಿಂದ ಮುಂದಡಿ ಇಡುವ ಸಮಯ ಬಂದಿದ್ದು, ಸಮಸ್ತ ವೀರಶೈವ ಲಿಂಗಾಯತ ಮಠಮಾನ್ಯಗಳು, ಮುಖಂಡರು ಒಂದೇ ನಿಲುವು ತಳೆಯಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಹಿರಿಯ ಉಪಾಧ್ಯಕ್ಷ ಹಾಗೂ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಪಾದಿಸಿದ್ದಾರೆ.
ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ನಡೆದ ಬೃಹತ್ ವೀರಶೈವ ಲಿಂಗಾಯತ ಏಕತಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಇದೇ 22ರಿಂದ ಅಕ್ಟೋಬರ್ 7ರವರೆಗೆ ರಾಜ್ಯದಾದ್ಯಂತ ನಡೆಯಲಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಸಮಾಜದ ಎಲ್ಲರೂ ಜಾತಿಯ ಕಾಲಂನಲ್ಲಿ ವೀರಶೈವ ಅಥವಾ ಲಿಂಗಾಯತ ಎಂದೇ ಬರೆಸಲು ಉಳಿದಂತೆ ಉಪ ಜಾತಿಯ ಕಾಲಂನಲ್ಲಿ ತಮ್ಮ ತಮ್ಮ ಉಪ ಜಾತಿ ಹೆಸರು ಬರೆಸಲು ಮನವಿ ಮಾಡಿದರು.
ಧರ್ಮ-ವಿವೇಚನೆಗೆ ಬಿಟ್ಟಿದ್ದು:
ಸರ್ಕಾರವಾಗಲೀ, ಮಹಾಸಭಾವಾಗಲೀ ಯಾವುದೇ ಧರ್ಮ ಒಡೆಯುವ ಪ್ರಯತ್ನ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಸ್ವಾತಂತ್ರ್ಯ ಪೂರ್ವದಲ್ಲಿಯೇ ಅಂದರೆ 1940ರಿಂದ ವೀರಶೈವ ಧರ್ಮಕ್ಕೆ ಮಾನ್ಯತೆ ನೀಡಬೇಕು ಎಂದು ಮಹಾಸಭಾ ಪ್ರತಿಪಾದಿಸುತ್ತಾ ಬಂದಿದೆ. 2007ರಲ್ಲಿ ನಡೆದಾಡುವ ದೇವರು ಸಿದ್ದಗಂಗಾ ಮಹಾಸಂಸ್ಥಾನದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರು ಲಿಂಗಾಯತ ಬೇರೆ ಅಲ್ಲ, ವೀರಶೈವ ಬೇರೆ ಅಲ್ಲ ಎಂದು ಪ್ರತಿಪಾದಿಸಿದ ಬಳಿಕ, ವೀರಶೈವ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಹಕ್ಕೊತ್ತಾಯ ಮಾಡುತ್ತಾ ಬಂದಿದೆ, ಮಹಾಸಭಾ ಈ ಹೋರಾಟ ಮುಂದುವರಿಸುತ್ತದೆ ಎಂದರು.
ಸಮೀಕ್ಷೆ ವೇಳೆ ಧರ್ಮದ ಕಾಲಂನ ಇತರೆ ಕಾಲಂನಲ್ಲಿ ವೀರಶೈವ ಲಿಂಗಾಯತ ಧರ್ಮ ಎಂದು ಬರೆಸಬೇಕು ಎಂಬುದು ಮಹಾಸಭಾ ನಿಲುವಾಗಿದೆ. ಆದರೆ ವೀರಶೈವ ಲಿಂಗಾಯತ ಧರ್ಮವನ್ನು ಇನ್ನೂ ಗುರುತಿಸದ ಕಾರಣ ಸಮಾಜದ ಬಾಂಧವರು ಧರ್ಮದ ಕಾಲಂನಲ್ಲಿ ತಮ್ಮ ವಿವೇಚನೆಗೆ ಮತ್ತು ಆತ್ಮಸಾಕ್ಷಿಗೆ ಅನುಗುಣವಾಗಿ ಬರೆಸುವಂತೆ ಮನವಿ ಮಾಡಿದರು.
ಕರ್ನಾಟಕ ಸರ್ಕಾರ ನಡೆಸುತ್ತಿರುವುದು ಜಾತಿ ಗಣತಿ ಅಲ್ಲ, ಅದು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಎಂದು ಸ್ಪಷ್ಟಪಡಿಸಿದ ಅವರು, ಸಮಾಜದ ಪ್ರತಿಯೊಬ್ಬ ಬಾಂಧವರೂ ತಪ್ಪದೆ ಈ ಸಮೀಕ್ಷೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮಹಾಸಭಾ ಪರವಾಗಿ ಕೋರಿದರು.
ಸಮೀಕ್ಷೆಯ ವೇಳೆ ಮನೆ ಮನೆಗೆ ಬರುವ ಶಿಕ್ಷಕರು ಅಥವಾ ಸರ್ಕಾರಿ ಸಿಬ್ಬಂದಿ ಧರ್ಮ, ಜಾತಿ, ಶಿಕ್ಷಣ ಮತ್ತು ಆರ್ಥಿಕ ಸ್ಥಿತಿಗತಿಗೆ ಸಂಬಂಧಿಸಿದಂತೆ 60ಕ್ಕೂ ಹೆಚ್ಚು ಪ್ರಶ್ನೆ ಕೇಳಲಿದ್ದು, ಎಲ್ಲರೂ ನಿಖರ ಮಾಹಿತಿ ನೀಡಬೇಕು ಎಂದರು.
ಈ ಸಮೀಕ್ಷೆಯಲ್ಲಿ ಲಿಂಗಾಯತ ಮತ್ತು ವೀರಶೈವ ಎರಡನ್ನೂ ಒಗ್ಗೂಡಿಸಿ ಅಂತಿಮವಾಗಿ ನಮ್ಮ ಸಮಾಜದ ಜನಸಂಖ್ಯೆಯನ್ನು ನಿರ್ಧರಿಸುತ್ತಾರೆ ಮತ್ತು ಅಂಕ ನೀಡುತ್ತಾರೆ. ಈ ಅಂಕದ ಆಧಾರದಲ್ಲಿ ಮತ್ತು ನಿಮ್ಮ ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗನುಗುಣವಾಗಿ ಮುಂದಿನ ದಿನಗಳಲ್ಲಿ ಮೀಸಲು ಲಭಿಸುತ್ತದೆ. ಹೀಗಾಗಿ ನೀವು ಜಾತಿಯ ಕಾಲಂನಲ್ಲಿ ಲಿಂಗಾಯತ ಎಂದಾದರೂ ಬರೆಸಿ, ವೀರಶೈವ ಎಂದಾದರೂ ಬರೆಸಿ ಎಂದು ತಿಳಿಸಿದರು.
ಜಾತಿಯ ಕಾಲಂನಲ್ಲಿ ಕೋಡ್ ಸಂಖ್ಯೆ ಎ1 -522 - ವೀರಶೈವ – ಅಥವಾ ಕೋಡ್ ಸಂಖ್ಯೆ ಎ083- ಲಿಂಗಾಯತ ಎಂದು ಕಡ್ಡಾಯವಾಗಿ ಬರೆಸಬೇಕು. ಹಾಗೂ ಉಪಜಾತಿಯ ಕಾಲಂನಲ್ಲಿ ಉಪ ಜಾತಿಯ ಕೋಡ್ ಸಂಖ್ಯೆಯನ್ನು ಮತ್ತು ಹೆಸರನ್ನು ಸರಿಯಾಗಿ ನಮೂದಿಸಬೇಕು ಎಂದು ತಿಳಿಸಿದರು.
ಸಾಮಾಜಿಕ ನ್ಯಾಯ ಕೊಟ್ಟ ಸಮುದಾಯ ನ್ಯಾಯ ಕೇಳುವಂತಾಗಿದೆ:
ಇಡೀ ಜಗತ್ತಿಗೆ 12ನೇ ಶತಮಾನದಲ್ಲೇ ಸಾಮಾಜಿಕ ನ್ಯಾಯ ನೀಡಿದ ಸಮಾಜ ಇಂದು ತಾನೇ ಸಾಮಾಜಿಕ ನ್ಯಾಯ ಕೇಳುವ ಸ್ಥಿತಿ ಬಂದಿದೆ ಎಂದು ವಿಷಾದಿಸಿದ ಅವರು, ವೀರಶೈವ, ಲಿಂಗಾಯತ ಮಠಮಾನ್ಯಗಳು, ಆಶ್ರಯ, ಅರಿವು, ಅನ್ನ ಈ ತ್ರಿವಿಧ ದಾಸೋಹದ ಮೂಲಕ ಸುಶಿಕ್ಷಿತ ಸಮಾಜಕ್ಕೆ ನಾಂದಿ ಹಾಡಿ, ನವ ಕರ್ನಾಟಕ ಆ ಮೂಲಕ ನವ ಭಾರತದ ನಿರ್ಮಾಣಕ್ಕೆ ದೊಡ್ಡ ಕೊಡುಗೆ ನೀಡಿದೆ ಎಂದರು.
ಎಲ್ಲರನ್ನೂ ಅಪ್ಪಿಕೊಂಡು, ಒಪ್ಪಿಕೊಂಡು, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ತತ್ವದ ಆಧಾರದಲ್ಲಿ ಸರ್ವರ ಹಿತ ಬಯಸುವ ವೀರಶೈವ ಲಿಂಗಾಯತ ಸಮುದಾಯ ಇಡೀ ಜಗತ್ತಿಗೇ ಮಾದರಿಯಾಗಿದೆ ಎಂದ ಈಶ್ವರ ಖಂಡ್ರೆ, ಬಸವಾದಿ ಶರಣರು 12ನೇ ಶತಮಾನದಲ್ಲೇ ಅನುಭವ ಮಂಟಪದ ಮೂಲಕ ಜಗತ್ತಿಗೆ ಸಂಸತ್ತು ಮತ್ತು ಪ್ರಜಾಪ್ರಭುತ್ವದ ಪರಿಕಲ್ಪನೆ ಕಟ್ಟಿಕೊಟ್ಟಿದ್ದರು ಎಂದರು.
ಸಮಾರಂಭದಲ್ಲಿ ಸಮಾಜದ ಗಣ್ಯರು ಮತ್ತು ವಿವಿಧ ಮಠಗಳ ಮಠಾಧಿಪತಿಗಳು, ಹರ ಚರ ಗುರು ಮೂರ್ತಿಗಳು ಪಾಲ್ಗೊಂಡಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ