LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಇರಾನ್​ನಲ್ಲಿ ಹಮಾಸ್​ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಹತ್ಯೆ!

ಇರಾನ್​ನಲ್ಲಿ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್​ ಹನಿಯಾರನ್ನು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹನಿಯಾ ಇದ್ದ ಟಹ್ರಾನ್ ನಿವಾಸವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ ಎನ್ನಲಾಗಿದೆ. ಇರಾನ್ ಸೇನೆ, ಇರಾನ್ ರೆವಲ್ಯೂಷನರಿ ಗಾರ್ಡ್ಸ್ ಕೂಡ ಇದನ್ನು ದೃಢಪಡಿಸಿವೆ.

ಇಸ್ಮಾಯಿಲ್ ಹನಿಯಾ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಹಮಾಸ್, ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದೆ. ಇಸ್ಮಾಯಿಲ್ ಹನಿಯಾ ಅವರ ಸಾವನ್ನು ದೃಢೀಕರಿಸುವ ಹೇಳಿಕೆಯನ್ನು ಹಮಾಸ್ ಸಹ ಬಿಡುಗಡೆ ಮಾಡಿದೆ ಮತ್ತು ಇಸ್ರೇಲ್ ಹತ್ಯೆಯ ಆರೋಪವನ್ನೂ ಮಾಡಿದೆ. ಆದರೆ, ಈ ಬಗ್ಗೆ ಇಸ್ರೇಲ್ ಯಾವುದೇ ಹೇಳಿಕೆ ನೀಡಿಲ್ಲ.


ಮಂಗಳವಾರ ಮುಂಜಾನೆ, ಇಸ್ಮಾಯಿಲ್ ಹನಿಯಾ ಅವರು ಇರಾನ್‌ನ ನೂತನ ಅಧ್ಯಕ್ಷರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇತ್ತೀಚೆಗಷ್ಟೇ ಇಸ್ರೇಲಿ ಭದ್ರತಾ ಪಡೆಗಳಿಂದ ಹನಿಯಾ ಅವರ ಮೂವರು ಮಕ್ಕಳು ಕೂಡ ಕೊಲ್ಲಲ್ಪಟ್ಟಿದ್ದರು. ಹನಿಯಾರ ಮೂವರು ಮಕ್ಕಳಾದ ಅಮೀರ್, ಹಜೆಮ್ ಹಾಗೂ ಮೊಹಮ್ಮದ್ ಗಾಜಾದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಹೊರಟಿದ್ದರು ಎಂದು ಇಸ್ರೇಲ್ ಸೇನೆ ಹೇಳಿತ್ತು.

ಹಮಾಸ್ ಹಾಗೂ ಇಸ್ರೇಲ್​ ನಡುವಿನ ಯುದ್ಧವು 2023ರ ಅಕ್ಟೋಬರ್ 3ರಿಂದಲೂ ನಡೆಯುತ್ತಿದೆ. ಹಮಾಸ್ 250 ನಾಗರಿಕರನ್ನು ಒತ್ತೆಯಾಳಾಗಿ ಇರಿಸಿಕೊಂಡಿತ್ತು. 150 ಒತ್ತೆಯಾಳುಗಳು ಇನ್ನೂ ಅವರ ವಶದಲ್ಲಿದ್ದಾರೆ. ಇಸ್ರೇಲಿ ದಾಳಿಯಲ್ಲಿ ಇದುವರೆಗೆ 39ಕ್ಕೂ ಹೆಚ್ಚು ಪ್ಯಾಲೆಸ್ತೀನ್ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಹೇಳಿಕೊಂಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್