LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಗಾಜಾ ಮೇಲೆ ಇಸ್ರೇಲ್​ ವೈಮಾನಿಕ ದಾಳಿ; 65 ಸಾವು, 320 ಮಂದಿಗೆ ಗಾಯ


ದೀರ್ ಅಲ್-ಬಲಾಹ್: ಗಾಜಾ ನಗರದ ಮೇಲೆ ಇಸ್ರೇಲ್ ವೈಮಾನಿಕ​ ದಾಳಿ ಮುಂದುವರೆಸಿದೆ. ಸೋಮವಾರ ಇಲ್ಲಿನ ಬಹುಮಹಡಿ ಕಟ್ಟಡದ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸೇನೆ, ಹಮಾಸ್ ವಶದಲ್ಲಿರುವ 12 ಅಂತಸ್ತಿನ ಕಟ್ಟಡದ ಮೇಲೆ ಬಾಂಬ್​ ಹಾಕಿರುವುದಾಗಿ ಮಾಹಿತಿ ನೀಡಿದೆ.


ಕಳೆದ ಕೆಲವು ದಿನಗಳಿಂದ ಗಾಜಾದಲ್ಲಿನ ಬಹು ಅಂತಸ್ತಿನ ಕಟ್ಟಡಗಳ ಮೇಲೆ ಇಸ್ರೇಲ್​ ದಾಳಿ ನಡೆಸುತ್ತಿದೆ. ದಾಳಿಗೂ ಮುನ್ನ ನಗರದ ಸುಮಾರು 10 ಲಕ್ಷ​ ನಿವಾಸಿಗಳಿಗೆ ಸ್ಥಳ ತೊರೆಯುವಂತೆ ಸೂಚಿಸಿತ್ತು. ಇನ್ನೊಂದೆಡೆ, ಗಾಜಾದಲ್ಲಿ ಭೀಕರ ಕ್ಷಾಮ ತಲೆದೋರಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.


ಈ ನಡುವೆ ಜೆರುಸೆಲಂನಲ್ಲಿ ಇಬ್ಬರು ಪ್ಯಾಲೆಸ್ತೇನಿಯನ್​ ಬಂದೂಕುಧಾರಿಗಳು ಬಸ್​ ನಿಲ್ದಾಣದಲ್ಲಿ ದಾಳಿ ನಡೆಸಿದ್ದು, ಆರು ಜನ ಸಾವನ್ನಪ್ಪಿ, 12ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಳೆದೊಂದು ವರ್ಷದಲ್ಲಿ ಇಸ್ರೇಲ್​ನಲ್ಲಿ ನಡೆದ ಭೀಕರ ದಾಳಿ ಇದಾಗಿದೆ. ಈ ಘಟನೆಯ ಬೆನ್ನಲ್ಲೇ ಇಸ್ರೇಲ್​ನಾದ್ಯಂತ ಮತ್ತು ವಶಕ್ಕೆ ಪಡೆದಿರುವ ವೆಸ್ಟ್​ ಬ್ಯಾಂಕ್​ನಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ.


ಕಳೆದ 24 ಗಂಟೆಗಳಲ್ಲಿ ಇಸ್ರೇಲ್​ ನಡೆಸಿದ ದಾಳಿಯಲ್ಲಿ 65 ಜನರು ಸಾವನ್ನಪ್ಪಿದ್ದು, 320 ಮಂದಿ ಗಾಯಗೊಂಡಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವರು ತಿಳಿಸಿದ್ದಾರೆ.


ಸೋಮವಾರ ಗಾಜಾ ನಗರದಲ್ಲಿ ಉಗ್ರರ ಗುಂಪೊಂದು ಟ್ಯಾಂಕ್‌ಗೆ ಸ್ಫೋಟಕ ಸಾಧನ ಎಸೆದ ಪರಿಣಾಮ ನಾಲ್ವರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಸೇನೆ ತಿಳಿಸಿದೆ. ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಮತ್ತೊಬ್ಬ ಸೈನಿಕ ಗಾಯಗೊಂಡಿದ್ದಾನೆೆ. ಇಬ್ಬರು ಉಗ್ರರು ಗುಂಡು ಹಾರಿಸಿದ್ದಾರೆ ಎಂದು ಮಾಹಿತಿ ನೀಡಿದೆ.










Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್